AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರದ ಮೇಲ್ಮನವಿ ವಜಾ: ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿಗೆ ರಿಲೀಫ್

ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸರ್ಕಾರ ಮತ್ತು ಪ್ರೇಮಲತಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ಕರ್ನಾಟಕ ಸರ್ಕಾರದ ಮೇಲ್ಮನವಿ ವಜಾ: ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿಗೆ ರಿಲೀಫ್
ರಾಘವೇಶ್ವರ ಭಾರತಿ ಸ್ವಾಮೀಜಿ ಮತ್ತು ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Dec 29, 2021 | 11:07 PM

Share

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗೆ ಹೈಕೋರ್ಟ್​ನಲ್ಲಿ ತಾಂತ್ರಿಕ ಕಾರಣದಿಂದ ರಿಲೀಫ್ ಸಿಕ್ಕಿದೆ. ಸಿಐಡಿಯನ್ನು ಪೊಲೀಸ್ ಠಾಣೆ ಎಂದು ಘೋಷಿಸಿಲ್ಲ, ಸರ್ಕಾರ ಈ ಬಗ್ಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಸಿಐಡಿ ಪೊಲೀಸರಿಗೆ ಠಾಣೆಯ ಅಧಿಕಾರವಿಲ್ಲ. ಹೀಗಾಗಿ ಸಿಐಡಿ ಪೊಲೀಸರಿಗೆ ಆರೋಪಪಟ್ಟಿ ಸಲ್ಲಿಸಲು ಅವಕಾಶವಿಲ್ಲ ಎಂಬ ಕಾರಣಕ್ಕೆ ರಾಘವೇಶ್ವರ ಶ್ರೀಗಳ ವಿರುದ್ಧದ ಪ್ರಕರಣ ರದ್ದುಗೊಳಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧದ ಪ್ರಕರಣ ಕೈಬಿಟ್ಟಿದ್ದ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಗಾಯಕಿ ಪ್ರೇಮಲತಾ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾ ಮಾಡಿದೆ. ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸರ್ಕಾರ ಮತ್ತು ಪ್ರೇಮಲತಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ರಾಘವೇಶ್ವರ ಭಾರತಿ ಸ್ವಾಮೀಜಿ 2011ರಿಂದ 2014ರ ನಡುವೆ ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ರಾಮಚಂದ್ರಾಪುರ ಮಠದಲ್ಲಿ ರಾಮಕಥಾ ಗಾಯಕಿಯಾಗಿದ್ದ ಪ್ರೇಮಲತಾ ಗಿರಿನಗರ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ನಗರದ ನ್ಯಾಯಾಲಯಕ್ಕೆ ರಾಘವೇಶ್ವರ ಭಾರತಿ ಮತ್ತು ಇತರ 7 ಜನರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ್ದರು. 1340 ಪುಟಗಳ ಚಾರ್ಜ್​ಶೀಟ್​ನಲ್ಲಿ 151 ಸಾಕ್ಷಿಗಳನ್ನು ಉಲ್ಲೇಖಿಸಲಾಗಿತ್ತು. ಆದರೆ ಅಧೀನ ವಿಚಾರಣಾ ನ್ಯಾಯಾಲಯವು ಸ್ವಾಮೀಜಿಯನ್ನು ಆರೋಪಮುಕ್ತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಐಡಿ ಮತ್ತು ದೂರುದಾರರು ಪ್ರತ್ಯೇಕ ಅರ್ಜಿಗಳನ್ನು ಹೈಕೋರ್ಟ್​ಗೆ ಸಲ್ಲಿಸಿದ್ದರು.

ಇದೀಗ ಹೈಕೋರ್ಟ್ ಸಹ ಈ ಪ್ರಕರಣದಲ್ಲಿ ಸ್ವಾಮೀಜಿಗೆ ರಿಲೀಫ್ ನೀಡಿದೆ. ತಮ್ಮ ವಿರುದ್ಧ ಆರೋಪ ಮಾಡಿದ್ದ ಗಾಯಕಿ ಪ್ರೇಮಲತಾ ಹಾಗೂ ಅವರ ಪತಿ ದಿವಾಕರ್ ಅವರ ವಿರುದ್ಧ ಸ್ವಾಮೀಜಿ ಸಹ ಬ್ಲಾಕ್​ಮೇಲ್ ಆರೋಪ ಹೊರಿಸಿ, ಹೊನ್ನಾವರ ಠಾಣೆಗೆ ದೂರು ಸಲ್ಲಿಸಿದ್ದರು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದ ಈ ಪ್ರಕರಣ ಬಿದ್ದುಹೋಗಿತ್ತು.

ಇದನ್ನೂ ಓದಿ: ಅಪ್ರಾಪ್ರ ಬಾಲಕಿ ಮೇಲೆ 4 ದಿನಗಳ ಕಾಲ ಅತ್ಯಾಚಾರ; ಆರೋಪಿಗೆ 20 ವರ್ಷ ಜೈಲು, 95 ಸಾವಿರ ದಂಡ ಇದನ್ನೂ ಓದಿ: ‘ಜನಪ್ರತಿನಿಧಿಗಳೇ ಎಚ್ಚರವಿರಲಿ’ ; ‘ಒಮ್ಮೆ ಹೆಣ್ತನ ಅನುಭವಿಸಿ, ಆಮೇಲೆ ಅತ್ಯಾಚಾರದ ಆನಂದವನ್ನು ಹಂಚಿಕೊಳ್ಳುವಿರಂತೆ’

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್