AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಕಾವತಿ ನಿವೇಶನದಾರರಿಗೆ ಹೈಕೋರ್ಟ್​ನಿಂದ ಶುಭಸುದ್ದಿ; 16 ಹಳ್ಳಿಗಳ ಭೂಸ್ವಾಧೀನ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥ

2003 ಫೆಬ್ರವರಿ 3ಕ್ಕಿಂತ ಮೊದಲಿರುವ ಮನೆಗಳು ಪಕ್ಕಾ ಕಟ್ಟಡಗಳಾಗಿದ್ದರೆ ಮಾತ್ರ ಉಳಿಯಲಿವೆ. ಆದರೆ ಸಿಮೆಂಟ್ ಶೀಟ್, ಹೆಂಚಿನ ಚಾವಣಿ ಹೊಂದಿರುವ ಕಟ್ಟಡಗಳನ್ನು ಪಕ್ಕಾ ಕಟ್ಟಡಗಳೆಂದು ಪರಿಗಣಿಸಲಾಗಿಲ್ಲ.

ಅರ್ಕಾವತಿ ನಿವೇಶನದಾರರಿಗೆ ಹೈಕೋರ್ಟ್​ನಿಂದ ಶುಭಸುದ್ದಿ; 16 ಹಳ್ಳಿಗಳ ಭೂಸ್ವಾಧೀನ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥ
ಹೈಕೋರ್ಟ್
TV9 Web
| Updated By: guruganesh bhat|

Updated on: Sep 27, 2021 | 6:35 PM

Share

ಬೆಂಗಳೂರು: ಅರ್ಕಾವತಿ ನಿವೇಶನದಾರರಿಗೆ ಹೈಕೋರ್ಟ್ ಶುಭಸುದ್ದಿ ನೀಡಿದೆ. ಅರ್ಕಾವತಿ ಬಡಾವಣೆಯ ಭೂಸ್ವಾಧೀನವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಮೂರು ತಿಂಗಳಲ್ಲಿ ಬಾಕಿ ನಿವೇಶನವನ್ನು ಹಂಚುವಂತೆ ಆದೇಶಿಸಿದೆ. 16 ಹಳ್ಳಿಗಳ ಭೂಸ್ವಾಧೀನ ಪ್ರಶ್ನಿಸಿದ್ದ ಅರ್ಜಿಗಳನ್ನು ನ್ಯಾ. ಅರವಿಂದ್ ಕುಮಾರ್ ಅವರಿದ್ದ ಹೈಕೋರ್ಟ್​ ಏಕಸದಸ್ಯ ಪೀಠ ಇತ್ಯರ್ಥಗೊಳಿಸಿದೆ.

ರಿಡೂ, ಡಿನೋಟಿಫಿಕೇಷನ್ ಪರಿಶೀಲನೆಗೆ ಸಮಿತಿ ರಚಿಸಬೇಕೆಂದು ತಿಳಿಸಿರುವ ಕೋರ್ಟ್, ಸುಪ್ರೀಂಕೋರ್ಟ್ ತೀರ್ಪಿಗೆ ಬದ್ಧವಾಗಿ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಪರಿಶೀಲಿಸುವಂತೆ ಸೂಚಿಸಿದೆ. ನಿವೃತ್ತ ನ್ಯಾ.ಕೆ.ಎನ್.ಕೇಶವನಾರಾಯಣ, ನಿವೃತ್ತ ಐಎಎಸ್ ಅಧಿಕಾರಿ ಸಂದೀಪ್ ದವೆ, ನಿವೃತ್ತ ಪೊಲೀಸ್ ಅಧಿಕಾರಿ ಎನ್.ಎಸ್.ಮೇಘರಿಕ್ ತ್ರಿಸದಸ್ಯ ಸಮಿತಿಯನ್ನು ಕೋರ್ಟ್ ರಚಿಸಿದೆ. ಸಮಿತಿ 16 ಹಳ್ಳಿಗಳ ಭೂಸ್ವಾಧೀನವನ್ನು ಪರಿಶೀಲಿಸಲನೆ ನಡೆಸಲಿದ್ದು, ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಹಂಚಿಕೆಯಾದ ಜನರಿಗೆ ನಿವೇಶನ ಒದಗಿಸಬೇಕು. ಹಂಚಿಕೆಯಾದವರಿಗೆ ಮಾರಾಟ ಒಪ್ಪಂದ ಮಾಡಿಕೊಡಬೇಕು. 2003 ಫೆಬ್ರವರಿ 3ಕ್ಕಿಂತ ಮೊದಲಿರುವ ಮನೆಗಳು ಪಕ್ಕಾ ಕಟ್ಟಡಗಳಾಗಿದ್ದರೆ ಮಾತ್ರ ಉಳಿಯಲಿವೆ. ಆದರೆ ಸಿಮೆಂಟ್ ಶೀಟ್, ಹೆಂಚಿನ ಚಾವಣಿ ಹೊಂದಿರುವ ಕಟ್ಟಡಗಳನ್ನು ಪಕ್ಕಾ ಕಟ್ಟಡಗಳೆಂದು ಪರಿಗಣಿಸಲಾಗಿಲ್ಲ. ಈ ಬಗ್ಗೆಯೂ ಬಿಡಿಎಗೆ ವರದಿ ನೀಡಲು ಸಮಿತಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: 

ಅರ್ಕಾವತಿ ಕೇಸ್‌ನಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು.. ಅದಕ್ಕೇ ಲೋಕಾಯುಕ್ತನ ಸ್ಕ್ರ್ಯಾಪ್ ಮಾಡಿ ACB ತಂದರು -H. ವಿಶ್ವನಾಥ್

Temple Tour: ತ್ರಿಮೂರ್ತಿಗಳಿಂದ ಸ್ಥಾಪನೆಯಾದ ಕುರುಡು ಮಲೆ ಸಾಲಿಗ್ರಾಮ ಗಣಪನ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ

(Karnataka High Court give good news to Arkavathi Layout residents)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ