AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಸರ್ಕಾರದ ಪರ ವಕೀಲರಿಗೆ ಕೋರ್ಟ್ ಮಹತ್ವದ ಸೂಚನೆ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಸರ್ಕಾರದ ಪರ ವಕೀಲರಿಗೆ  ಕೋರ್ಟ್ ಮಹತ್ವದ ಸೂಚನೆ
ಹೈಕೋರ್ಟ್​
Ramesha M
| Edited By: |

Updated on: Sep 20, 2023 | 12:43 PM

Share

ಬೆಂಗಳೂರು, (ಸೆಪ್ಟೆಂಬರ್ 20): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ(Chamarajpet Idgah Ground) ಗಣೇಶೋತ್ಸವ ಆಚರಣೆಗೆ(Ganesh Festival) ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್(Karnataka High Court) ವಿಚಾರಣೆ ನಡೆಸಿದ್ದು, ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಪಿಐಎಲ್ ಸಲ್ಲಿಸಿತ್ತು. ಇದನ್ನು ಇಂದು (ಸೆಪ್ಟೆಂಬರ್ 20) ವಿಚಾರಣೆ ನಡೆಸಿದ ಹೈಕೋರ್ಟ್, ಮನವಿಯನ್ನು ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಮೌಖಿಕವಾಗಿ ಸೂಚಿಸಿದೆ.

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಪಿಐಎಲ್ ಸಲ್ಲಿಸಿತ್ತು. ಪ್ರಕರಣದ ತುರ್ತು ವಿಚಾರಣೆಗೆ ಒಕ್ಕೂಟದ ಪರ ವಕೀಲ ಶ್ರೀಧರ ಪ್ರಭು ಮನವಿ ಮಾಡಿದ್ದು, ಬೆಂಗಳೂರು ‌ನಗರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದೆ. ಆದರೆ, ಜಿಲ್ಲಾಧಿಕಾರಿ ಅನುಮತಿ ನೀಡಿಲ್ಲವೆಂದು ವಾದ ಮಂಡಿಸಿದರು.

ಇದನ್ನೂ ಓದಿ: ಶಿವಾಜಿನಗರದಲ್ಲಿ ಗಣೇಶನ ಪ್ರತಿಷ್ಠಾಪನೆ ಸರ್ವಧರ್ಮಗಳ ಸಮಾಗಮಕ್ಕೆ ವೇದಿಕೆಯಾಯಿತು

ಚಾಮರಾಜಪೇಟೆ ಆಟದ ಮೈದಾನ ಕಂದಾಯ ಇಲಾಖೆಗೆ ಒಳಪಟ್ಟಿದ್ದು, ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮನವಿ ಮಾಡಿತ್ತು. ಆದರೆ, ಈ ಬಾರಿಯೂ ಸರ್ಕಾರ ಅನುಮತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಚಾಮರಾಜಪೇಟೆ ನಾಗರೀಕರ ಒಕ್ಕೂಟ, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಹೈಕೋರ್ಟ್​ಗೆ ಪಿಐಎಲ್​ ಸಲ್ಲಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್