AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಆರೋಪಿಗಳಿಗೆ ಹೈಕೋರ್ಟ್​ ಜಾಮೀನು: ಚಾರ್ಜ್​​ಶೀಟ್ ಸಲ್ಲಿಸದ ಪೊಲೀಸರು

ಆರೋಪಪಟ್ಟಿ ಸಲ್ಲಿಸಲು ವಿಶೇಷ ನ್ಯಾಯಾಲಯ ನೀಡಿದ್ದ ಕಾಲಾವಕಾಶವನ್ನು ಹೈಕೋರ್ಟ್​ ರದ್ದುಪಡಿಸಿತು. ಆರೋಪಪಟ್ಟಿ ಸಲ್ಲಿಕೆಗೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಿತು. 111 ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದರು.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಆರೋಪಿಗಳಿಗೆ ಹೈಕೋರ್ಟ್​ ಜಾಮೀನು: ಚಾರ್ಜ್​​ಶೀಟ್ ಸಲ್ಲಿಸದ ಪೊಲೀಸರು
ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ (ಸಂಗ್ರಹ ಚಿತ್ರ)
TV9 Web
| Updated By: Digi Tech Desk|

Updated on:Jun 16, 2021 | 11:23 PM

Share

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ವ್ಯಾಪ್ತಿಯ ಗಲಭೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಆರೋಪಪಟ್ಟಿ ಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ನೀಡಲು ನ್ಯಾಯಾಲಯ ಒಪ್ಪಲಿಲ್ಲ. ವಿಶೇಷ ನ್ಯಾಯಾಲಯ ನೀಡಿದ್ದ ಕಾಲಾವಕಾಶವನ್ನು ಹೈಕೋರ್ಟ್​ ರದ್ದುಪಡಿಸಿತು. ಆರೋಪಪಟ್ಟಿ ಸಲ್ಲಿಕೆಗೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಿತು. 111 ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ 90 ಆರೋಪಿಗಳಿಗೆ ವಿಶೇಷ ಕೋರ್ಟ್ ಜಾಮೀನು ನೀಡಿತ್ತು. ಉಳಿದವರಿಗೆ ಹೈಕೋರ್ಟ್ ಇದೀಗ ಜಾಮೀನು ಮಂಜೂರು ಮಾಡಿತು.

ಘಟನೆಯ ಹಿನ್ನೆಲೆ ‘ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಲಾಗಿದೆ’ ಎಂದು ಆರೋಪಿಸಿ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ 2020ರ ಆಗಸ್ಟ್​ 10ರಂದು ವಾಹನಗಳಿಗೆ ಬೆಂಕಿಹಚ್ಚಿ, ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆಯೂ ಕೆಲವರು ದಾಳಿ ಮಾಡಿದ್ದರು.

ಪೊಲೀಸರ ಗುಂಡೇಟಿಗೆ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದರು. ಅವಹೇಳನಕಾರಿ ಪೋಸ್ಟ್ ಹಾಕಿದ್ದ ಎನ್ನಲಾದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಘಟನೆಗೆ ಸಂಬಂಧಿಸಿದಂತೆ 111 ಜನರನ್ನು ಪೊಲೀಸರು ಬಂಧಿಸಿದ್ದರು. ಹಿಂಸಾಚಾರದಲ್ಲಿ 500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು.

(Karnataka High Court Grants Bail for DJ Halli KJ Halli Accused Police Fail to Submit Bail)

ಇದನ್ನೂ ಓದಿ: ಧಾರ್ಮಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್​ ತಡೆಗೆ ಕ್ರಮಕೈಗೊಳ್ಳದ ಪೊಲೀಸರಿಗೆ ಹೈಕೋರ್ಟ್​ ತರಾಟೆ

ಇದನ್ನೂ ಓದಿ: ಕರ್ನಾಟಕ ರಾಜ್ಯವ್ಯಾಪಿ ಕೆರೆಗಳ ಸರ್ವೆಗೆ ಹೈಕೋರ್ಟ್​ ಸೂಚನೆ: ನೀರಿ ವರದಿ ಆಧರಿಸಿ ಸಮೀಕ್ಷೆ ಸರ್ಕಾರದ ಒಪ್ಪಿಗೆ

Published On - 10:57 pm, Wed, 16 June 21