AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುವರಿ ಶುಲ್ಕ ವಿಧಿಸಲು ಅವಕಾಶ ಕೋರಿ ಹೈಕೋರ್ಟ್​ಗೆ ಓಲಾ, ಉಬರ್ ಅರ್ಜಿ: 5 ದಿನದಲ್ಲಿ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ

ಹೆಚ್ಚುವರಿ ಶುಲ್ಕ ವಿಧಿಸಲು ಅನುಮತಿ ನೀಡಬೇಕು ಎನ್ನುವ ಓಲಾ, ಊಬರ್ ಕಂಪನಿಗಳ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರವು 5 ದಿನಗಳ ಕಾಲಾವಕಾಶ ನೀಡಿದೆ.

ಹೆಚ್ಚುವರಿ ಶುಲ್ಕ ವಿಧಿಸಲು ಅವಕಾಶ ಕೋರಿ ಹೈಕೋರ್ಟ್​ಗೆ ಓಲಾ, ಉಬರ್ ಅರ್ಜಿ: 5 ದಿನದಲ್ಲಿ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 07, 2022 | 12:42 PM

Share

ಬೆಂಗಳೂರು: ಆ್ಯಪ್ ಆಧರಿತ ಸೇವೆ ಒದಗಿಸುವ ಓಲಾ, ಊಬರ್ ಕಂಪನಿಗಳು ಕರ್ನಾಟಕ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಿವೆ. ಅಗ್ರಿಗೇಟರ್ ಆ್ಯಪ್​ಗಳ ಮೂಲಕ ಸಾರಿಗೆ ಸೇವೆ ಒದಗಿಸುವ ಕಂಪನಿಗಳಿಗೆ ಕನಿಷ್ಠ ಶುಲ್ಕ ನಿಗದಿಪಡಿಸಲು ರಾಜ್ಯ ಸರ್ಕಾರವು ಪ್ರಯತ್ನಿಸಿತ್ತು. ಆದರೆ ಸಾರಿಗೆ ಇಲಾಖೆ ಕ್ರಮ ರದ್ದು ಕೋರಿ ಈ ಕಂಪನಿಗಳು ನ್ಯಾಯಾಲಯದ ಮೊರೆ ಹೋಗಿವೆ. ಸಂಬಂಧಿಸಿದವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುತ್ತೇವೆ. ಇದಕ್ಕೆ 4 ವಾರಗಳ ಕಾಲಾವಕಾಶ ಬೇಕು ಎಂದು ರಾಜ್ಯ ಸರ್ಕಾರವು ನ್ಯಾಯಾಲಯವನ್ನು ಕೋರಿದೆ.

ಹೆಚ್ಚುವರಿ ಶುಲ್ಕ ವಿಧಿಸಲು ಅನುಮತಿ ನೀಡಬೇಕು ಎನ್ನುವ ಓಲಾ, ಊಬರ್ ಕಂಪನಿಗಳ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರವು 5 ದಿನಗಳ ಕಾಲಾವಕಾಶ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್​ 16ಕ್ಕೆ ಮುಂದೂಡಲಾಗಿದೆ.

ಈ ಮೊದಲು ಹೈಕೋರ್ಟ್​ ಎರಡೂ ಕಂಪೆನಿಗಳ ಜೊತೆಗೆ ಸಭೆ ನಡೆಸಿ ಕನಿಷ್ಠ ದರ ನಿಗದಿಪಡಿಸಲು ಸೂಚಿಸಿತ್ತು. ಆದರೆ ಕನಿಷ್ಠ ದರ ನಿಗದಿಪಡಿಸಲು ಸಾರಿಗೆ ಇಲಾಖೆ ವಿಫಲವಾಗಿತ್ತು. ಈ ಸಂಬಂಧ ಓಲಾ, ಉಬರ್​, ಱಪಿಡೋ ಕಂಪನಿ ಜತೆ ಸಾರಿಗೆ ಇಲಾಖೆ ಅಧಿಕಾರಿಗಳು ಸಭೆ ನಡೆಸಿದ್ದರು. ಆದರೆ ಏನೂ ಪ್ರಯೋಜನವಾಗಿರಲಿಲ್ಲ. ಕನಿಷ್ಠ ದರವಾಗಿ 2 ಕಿಮೀಗೆ ₹ 100 ನಿಗದಿಪಡಿಸಬೇಕು ಎಂದು ಕಂಪನಿಗಳು ಬೇಡಿಕೆಯಿಟ್ಟಿವೆ. ಈ ಬೇಡಿಕೆಗೆ ಸಾರಿಗೆ ಇಲಾಖೆ ಅಧಿಕಾರಿಗಳು ಒಪ್ಪುತ್ತಿಲ್ಲ. ಹೀಗಾಗಿ ದರ ನಿಗದಿ ಗೊಂದಲ ಹಾಗೆಯೇ ಮುಂದುವರಿದಿದೆ.

ಹದಿನೈದು ದಿನದೊಳಗೆ ಮೂರೂ ಕಂಪನಿಗಳು, ಆಟೋ ಸಂಘಟನೆಗಳು ‌ಹಾಗೂ ಪ್ರಯಾಣಿಕರ ಜೊತೆ ಸಭೆ ನಡೆಸಿ ನ್ಯಾಯಯುತ ದರ ನಿಗದಿ ಪಡಿಸಬೇಕು. ನಂತರ ಈ ಕುರಿತ ವರದಿಯನ್ನು ಹೈಕೋರ್ಟ್​ಗೆ ಸಲ್ಲಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದರು. ಆದರೆ ಹದಿನೈದು ದಿನಗಳ ಅವಧಿಯಲ್ಲಿ ಸಾರಿಗೆ ಇಲಾಖೆಯು ಕೇವಲ ಒಂದು ಸಭೆ ಮಾಡಿ ಸುಮ್ಮನಾಗಿದೆ. ಈ ಬಗ್ಗೆ ಆಟೊ ಚಾಲಕರು ಮತ್ತು ಮಾಲೀಕರ ಸಂಘಟನೆಗಳು, ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಸಾರಿಗೆ ಇಲಾಖೆಯು ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದೂ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಹೈಕೋರ್ಟ್ ಸೂಚನೆಯಂತೆ ಈ ಕಂಪನಿಗಳು ಕನಿಷ್ಠ ಪ್ರಯಾಣ ದರ ಪಡೆಯುತ್ತಿವೆ. ಹೀಗಾಗಿ ಪ್ರಯಾಣಿಕರು ನೆಮ್ಮದಿಯಾಗಿ ಅಟೋಗಳಲ್ಲಿ ಸಂಚರಿಸುತ್ತಿದ್ದಾರೆ.

ಸಾರಿಗೆ ಇಲಾಖೆ ಆಯುಕ್ತ ವರ್ಗಾವಣೆ

ಓಲಾ ಮತ್ತು ಊಬರ್ ಕಂಪನಿಗಳ ಆಟಾಟೋಪಕ್ಕೆ ಕಡಿವಾಣ ಹಾಕಿದ್ದ ಸಾರಿಗೆ ಇಲಾಖೆ ಆಯುಕ್ತ ಎಚ್​.ಎಂ.ಟಿ.ಕುಮಾರ್ ಅವರನ್ನು ರಾಜ್ಯ ಸರ್ಕಾರವು ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ ಐಪಿಎಸ್​ ಅಧಿಕಾರಿ ಸಿದ್ದರಾಮಯ್ಯ ಅವರನ್ನು ನೇಮಿಸಲಾಗಿದೆ. ದರ ಪಟ್ಟಿ ನಿಗದಿ ಕಾರ್ಯದಲ್ಲಿ ಸಕ್ರಿಯರಾಗಿದ್ದ ಕುಮಾರ್ ಅವರ ವರ್ಗಾವಣೆಗೆ ಆಟೊ ಚಾಲಕರ ಸಂಘವು ವಿರೋಧ ವ್ಯಕ್ತಪಡಿಸಿದೆ. ‘ರಾಜ್ಯ ಸರ್ಕಾರವು ಓಲಾ ಮತ್ತು ಊಬರ್​ನಂಥ ಬಹುರಾಷ್ಟ್ರೀಯ ಕಂಪನಿಗಳ ಪರವಾಗಿದೆ. ಹೀಗಾಗಿಯೇ ಜನಪರ ಕೆಲಸ ಮಾಡುತ್ತಿದ್ದ ಆಯುಕ್ತರ ವರ್ಗಾವಣೆಯಾಗಿದೆ’ ಎಂದು ಭಾರತ್ ಟ್ರಾನ್ಸ್​ಪೋರ್ಟ್​ ಅಸೋಸಿಯೇಷನ್ ಆಕ್ಷೇಪ ವ್ಯಕ್ತಪಡಿಸಿದೆ.

Published On - 12:42 pm, Mon, 7 November 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!