AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ನೊಟೀಸ್: ಕೆಜಿಎಫ್ 2 ಹಾಡಿನ ದುರ್ಬಳಕೆ ಆರೋಪ

Congress Party: ಈ ಹಿಂದೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಪಕ್ಷವು, ಪಕ್ಷದ ಎಲ್ಲ ಸಾಮಾಜಿಕ ತಾಣ ಖಾತೆಗಳಿಂದ ‘ಕೆಜಿಎಫ್ 2’ ಹಾಡು ತೆಗೆಯುತ್ತೇವೆಂದು ಮುಚ್ಚಳಿಕೆ ನೀಡಿತ್ತು.

ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ನೊಟೀಸ್: ಕೆಜಿಎಫ್ 2 ಹಾಡಿನ ದುರ್ಬಳಕೆ ಆರೋಪ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಎಡಚಿತ್ರ) ಮತ್ತು ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Dec 02, 2022 | 2:07 PM

Share

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮುಂಚೂಣಿ ನಾಯಕ ರಾಹುಲ್ ಗಾಂಧಿ (Rahul Gandhi) ಹಾಗೂ ಹಿರಿಯ ನಾಯಕರಾದ ಜೈರಾಮ್ ರಮೇಶ್ ಹಾಗೂ ಸುಪ್ರಿಯಾ ಅವರಿಗೆ ಕರ್ನಾಟಕ ಹೈಕೋರ್ಟ್​ನ (Karnataka High Court) ವಿಭಾಗೀಯ ಪೀಠವು ನೊಟೀಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷವು ‘ಕೆಜಿಎಫ್ 2’ ಚಿತ್ರದ ಹಾಡನ್ನು ದುರ್ಬಳಕೆ ಮಾಡಿದೆ. ಅಷ್ಟೇ ಅಲ್ಲದೆ, ಹೈಕೋರ್ಟ್​ಗೆ ನೀಡಿದ್ದ ಮುಚ್ಚಳಿಕೆ ಉಲ್ಲಂಘಿಸಿದೆ ಎಂದು ಎಂಆರ್​​ಟಿ ಮ್ಯೂಸಿಕ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿತ್ತು. ಈ ಹಿಂದೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಪಕ್ಷವು, ಕಾಂಗ್ರೆಸ್ ಪಕ್ಷದ ಎಲ್ಲ ಸಾಮಾಜಿಕ ತಾಣ ಖಾತೆಗಳಿಂದ ‘ಕೆಜಿಎಫ್ 2’ ಹಾಡು ತೆಗೆಯುತ್ತೇವೆಂದು ಮುಚ್ಚಳಿಕೆ ನೀಡಿತ್ತು. ಅರ್ಜಿದಾರ ಎಂಆರ್​​​ಟಿ ಮ್ಯೂಸಿಕ್ ಸಂಸ್ಥೆಗೆ ಈ ಸಂಬಂಧ ಅಗತ್ಯ ದಾಖಲೆ ಒದಗಿಸುತ್ತೇವೆ ಎಂದು ಕಾಂಗ್ರೆಸ್ ಪರ ವಾದಿಸಿದ್ದ ವಕೀಲ ಅಭಿಷೇಕ್ ಮನು ಸಿಂಘ್ವಿ ಭರವಸೆ ನೀಡಿದ್ದರು.

ಪ್ರಕರಣದ ಹಿನ್ನೆಲೆ

ಕೆಜಿಎಫ್-2 ಚಿತ್ರದ ಹಾಡನ್ನು ಅಕ್ರಮವಾಗಿ ಬಳಸಿಕೊಂಡು ಎಂಆರ್‌ಟಿ ಮ್ಯೂಸಿಕ್ ಕಂಪನಿಯ ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಬೆಂಗಳೂರಿನ ವಾಣಿಜ್ಯ ನ್ಯಾಯಾಲಯವು ಟ್ವಿಟರ್‌ಗೆ ನಿರ್ದೇಶನ ನೀಡಿತ್ತು. ಈ ನಿರ್ದೇಶನವನ್ನು ಕಾಂಗ್ರೆಸ್ ಹೈಕೋರ್ಟ್​ನಲ್ಲಿ ಪ್ರಶ್ನಿಸಿತ್ತು.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಾಹುಲ್ ಗಾಂಧಿ ಕಾಲ್ನಡಿಗೆಯಲ್ಲಿ ಸಾಗುವ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್​..’ ಹಾಡನ್ನು ಬಳಕೆ ಮಾಡಲಾಗಿತ್ತು. ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್​​ಟಿ ಮ್ಯೂಸಿಕ್​ನವರು ಫೋರ್ಜರಿ ಪ್ರಕರಣ ದಾಖಲು ಮಾಡಿದ್ದರು. ಯಶವಂತಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ರಾಹುಲ್ ಗಾಂಧಿ ಮಾತ್ರವಲ್ಲದೆ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಪಕ್ಷವು, ’ಟ್ವಿಟರ್​ ಖಾತೆಗಳನ್ನು ನಿರ್ಭಂದಿಸುವಂತೆ ಬೆಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದ್ದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ನೋಡಿದೇವು. ನಾವು ಯಾವುದೇ ವಿಚಾರಣೆಗೆ ಹಾಜರಾಗಲಿಲ್ಲ. ಮತ್ತು ಆದೇಶದ ಪ್ರತಿ ನಮಗೆ ಲಭ್ಯವಾಗಿಲ್ಲ. ಈ ಕುರಿತು ನಾವು ಕಾನೂನಾತ್ಮಕವಾಗಿ ಏನು ಪರಿಹಾರ ಕಂಡುಕೊಳ್ಳಬಹುದೆಂದು ಯೋಚಿಸುವತ್ತೇವೆ’ ಎಂದು ಟ್ವೀಟ್​ ಮಾಡಿತ್ತು.

ಬಿಜೆಪಿ ವಿರುದ್ಧ ಹರಿಹಾಯ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ

ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯಲ್ಲಿ ಕಾರ್ಯಕರ್ತರ ಜೊತೆ ಕಾಂಗ್ರೆಸ್​ ನಾಯಕ, ಸಂಸದ ರಾಹುಲ್ ಗಾಂಧಿ ಡ್ಯಾನ್ಸ್ ಮಾಡಿದ್ದರು. ಅದಕ್ಕೆ ಹಾಡು ಸೇರಿಸಿ ಟ್ವಿಟರ್​ನಲ್ಲಿ ಹಾಕಿದ್ದರು. ಇದನ್ನೇ ನೆಪ ಇಟ್ಟುಕೊಂಡ ಬಿಜೆಪಿ ನಾಯಕರು ಟ್ವಿಟರ್ ಖಾತೆಯನ್ನ ಸೀಜ್ ಮಾಡಿಸಿದ್ದಾರೆ. ನಮ್ಮ ಟ್ವಿಟರ್ ಆದರೂ ಬಂಧಿಸಿ ಅಥವಾ ನಮ್ಮ ನಾಯಕರನ್ನು ಜೈಲಿಗೆ ಹಾಕಿ. ಆದರೆ ಜನರ ಹೃದಯದಿಂದ ಜೈಲಿಗೆ ಹಾಕಲು ಆಗುವುದಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಧಾನಮಂತ್ರಿ ಸ್ಥಾನವನ್ನು ತ್ಯಾಗ ಮಾಡಿದವರು. ತ್ಯಾಗ ಮಾಡಿದ ಪಕ್ಷದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಭ್ರಷ್ಟ ಸರ್ಕಾರವನ್ನು ತೆಗೆಯಲು ನೀವೆಲ್ಲಾ ಮುಂದಾಗಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ಮುನ್ನ ರಾಜಸ್ಥಾನದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್

ಹೈಕೋರ್ಟ್​ಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:54 pm, Fri, 2 December 22

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ