AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ನಿಗದಿಯಾಗದ ಓಲಾ ಹಾಗೂ ಉಬರ್​ ಪ್ರಯಾಣ ದರ: ಹೈಕೋರ್ಟ್ ನಿರ್ಧಾರದಂತೆ ನಾಳೆ ದರ ನಿಗದಿ ಸಾಧ್ಯತೆ

ಓಲಾ, ಉಬರ್, ರ್ಯಾಪಿಡೋ ಕಂಪನಿಗಳೊಂದಿಗೆ ಸಭೆ ನಡೆಸಿ ದರ ನಿಗದಿ ಬಗ್ಗೆ ಚರ್ಚಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು ಕಾಟಚಾರಕ್ಕೆ ಮೀಟಿಂಗ್ ಮಾಡಿ ಸುಮ್ಮನಾಗಿದ್ದಾರೆ. ಹೈಕೋರ್ಟ್ ನಿರ್ಧಾರದಂತೆ ನಾಳೆ ದರ ನಿಗದಿ ಮಾಡುವ ಸಾಧ್ಯತೆ ಇದೆ.

ಇನ್ನೂ ನಿಗದಿಯಾಗದ ಓಲಾ ಹಾಗೂ ಉಬರ್​ ಪ್ರಯಾಣ ದರ: ಹೈಕೋರ್ಟ್ ನಿರ್ಧಾರದಂತೆ ನಾಳೆ ದರ ನಿಗದಿ ಸಾಧ್ಯತೆ
ಕರ್ನಾಟಕ ಉಚ್ಚ ನ್ಯಾಯಾಲಯ
TV9 Web
| Updated By: ಆಯೇಷಾ ಬಾನು|

Updated on:Nov 06, 2022 | 12:35 PM

Share

ಬೆಂಗಳೂರು: ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಓಲಾ ಹಾಗೂ ಉಬರ್​ ಪ್ರಯಾಣ ದರವನ್ನು ನಿಗದಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ 15 ದಿನಗಳ ಕಾಲಾವಕಾಶ ನೀಡಿದೆ ಆದೇಶ ಹೊರಡಿಸಿದೆ. ಆದ್ರೆ ಕಾಟಾಚಾರಕ್ಕೆ ಸಭೆ ಮಾಡಿ ಸುಮ್ಮನಾಗಿರುವ ಸಾರಿಗೆ ಇಲಾಖೆ ಈ ವರೆಗೂ ದರ ನಿಗದಿ ಮಾಡಿಲ್ಲ. ಈಗಾಗಲೇ ಹೈಕೋರ್ಟ್​ನ ಕಾಲಾವಕಾಶ ಮುಗಿಯುತ್ತಿದ್ದು ಹೈಕೋರ್ಟ್ ಮಧ್ಯ ಪ್ರವೇಶಿಸಿ ದರ ನಿಗದಿ ಮಾಡುತ್ತೆ ಎನ್ನಲಾಗುತ್ತಿದೆ. ನಾಳೆ ಹೈಕೋರ್ಟ್​​ನಲ್ಲೇ ಪ್ರಯಾಣದ ದರ ಫೈನಲ್​ ಆಗುತ್ತಾ? ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರ ನಿಗದಿ ಮಾಡಿದ್ದ ದರ ಹಾಗೂ ನಿಯಮವನ್ನು ಉಲ್ಲಂಘಿಸಿ ಸೇವೆ ನೀಡುತ್ತಿದ್ದ ಓಲಾ, ಉಬರ್, ಱಪಿಡೋ ಸೇವೆ ಬಂದ್ ಮಾಡಲು ಸರ್ಕಾರ ನಿರ್ಧರಿಸಿತ್ತು. ಬಳಿಕ ಹೈಕೋರ್ಟ್ ಮಧ್ಯ ಪ್ರವೇಶಿಸಿ ಆ್ಯಪ್ ಆಧರಿತ ಆಟೋ, ಕ್ಯಾಬ್​ಗಳನ್ನು ಜನ ಹೆಚ್ಚಾಗಿ ಅವಲಂಬಿತರಾಗಿದ್ದಾರೆ. ಹೀಗಾಗಿ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಓಲಾ, ಉಬರ್ ಕಂಪನಿಗಳ ಜೊತೆ ಸಭೆ ನಡೆಸಿ 15 ದಿನದೊಳಗೆ ಹೊಸ ದರ ನಿಗದಿಗೆ ಹೈಕೋರ್ಟ್ ಆದೇಶಿಸಿತ್ತು. ಆದ್ರೆ ಡೆಡ್​ಲೈನ್​ ಮುಗಿದರೂ ಸಾರಿಗೆ ಇಲಾಖೆ ಮಾತ್ರ ಇನ್ನೂ ದರ ಫಿಕ್ಸ್ ಮಾಡಿಲ್ಲ.

ಇದನ್ನೂ ಓದಿ: ಓಲಾ, ಉಬರ್​​ ಹಾಗೂ ರ‍್ಯಾಪಿಡೋ ಜೊತೆಗಿನ ಸಭೆ ಅಂತ್ಯ: 2 ಕಿ.ಮೀ.ಗೆ ಆಟೋ ದರ 100 ರೂ. ನಿಗದಿ ಮಾಡಲು ಮನವಿ

ಓಲಾ, ಉಬರ್, ರ್ಯಾಪಿಡೋ ಕಂಪನಿಗಳೊಂದಿಗೆ ಸಭೆ ನಡೆಸಿ ದರ ನಿಗದಿ ಬಗ್ಗೆ ಚರ್ಚಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು ಕಾಟಚಾರಕ್ಕೆ ಮೀಟಿಂಗ್ ಮಾಡಿ ಸುಮ್ಮನಾಗಿದ್ದಾರೆ. ಆ್ಯಪ್ ಆಧಾರಿತ ಓಲಾ- ಉಬರ್ ರ್ಯಾಪಿಡೋ ಹಾಗೂ ಸರ್ಕಾರದ ನಡುವೆ ದರ ನಿಗದಿ ಹಗ್ಗಜಗ್ಗಾಟ ಮುಂದುವರೆದಿದೆ. ಸಭೆಯಲ್ಲಿ ಕನಿಷ್ಠ 2 ಕಿ.ಮೀ.ಗೆ 100 ರೂ. ನಿಗದಿ ಮಾಡುವಂತೆ ಕಂಪನಿಗಳು ಡಿಮ್ಯಾಂಡ್ ಮಾಡಿದ್ದವು. ಹಾಗಾಗಿ ದರ ನಿಗದಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ಮುಂದಾಗಿಲ್ಲ. ಹೈಕೋರ್ಟ್ ನಿರ್ಧಾರದಂತೆ ನಾಳೆ ದರ ನಿಗದಿ ಮಾಡುವ ಸಾಧ್ಯತೆ ಇದೆ.

ಟ್ರಾನ್ಸ್‌ಪೋರ್ಟ್‌ ಕಮೀಷನರ್ ವರ್ಗಾವಣೆ, ಜನರ ಆಕ್ರೋಶ

ಕೋರ್ಟ್​ನಲ್ಲಿ ಕೇಸ್ ಇರುವಾಗಲೇ ಟ್ರಾನ್ಸ್‌ಪೋರ್ಟ್‌ ಕಮೀಷನರ್ ವರ್ಗಾವಣೆ ಮಾಡಲಾಗಿದೆ. ಟ್ರಾನ್ಸ್‌ಪೋರ್ಟ್‌ ಕಮೀಷನರ್ ಗಳನ್ನ ಮೂರು ತಿಂಗಳಿಗೆ ಆರು ತಿಂಗಳಿಗೆ ಟ್ರಾನ್ಸ್ಫರ್ ಮಾಡ್ತಿದ್ದಾರೆ. ಇವರು ಸರ್ಕಾರ ನಡೆಸುತ್ತಿದ್ದಾರಾ? ಅಥವಾ ಓಲಾ, ಉಬರ್ ಕಂಪನಿಗಳಿಗೆ ತಲೆ ಹಿಡಿಯುತ್ತಿದ್ದಾರಾ ಗೊತ್ತಿಲ್ಲ ಎಂದು ಸರ್ಕಾರದ ವಿರುದ್ದ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರ ಜನಸಾಮಾನ್ಯರ ಪರ ನಿಲ್ಲದೆ ಹಣವಂತರ ಪರ ನಿಲ್ಲುತ್ತಿದ್ದಾರೆ. ಆಟೋ ವಿಚಾರವಾಗಿ ಕೋರ್ಟ್ ನಲ್ಲಿ ಇರುವ ಕೇಸ್ ಇನ್ನು ಮುಗಿದಿಲ್ಲ. ಆಗಲೇ ಒಬ್ಬ ಜನಪರವಾಗಿ ನಿಂತ ಅಧಿಕಾರಿಯನ್ನ ಟ್ರಾನ್ಫರ್ ಮಾಡಿದ್ದಾರೆ. ಎಲ್ಲರೂ ಅವರವರು ಲಾಭ ಮಾಡುತ್ತಿದ್ದಾರೆ ಅಷ್ಟೇ. ಯಾಕಂದ್ರೆ ಅವರು ಸಾರ್ವಜನಿಕ ವಲಯದಲ್ಲಿ ಇಲ್ವಲ್ಲ. ಇವರು ರೇಟ್ ಫೀಕ್ಸ್ ಮಾಡುವ ಮುಂಚೆ ಆಟೋ ಚಾಲಕ ಅಸೋಸಿಯೇಷನ್ ಜೊತೆ ಚರ್ಚೆ ಮಾಡಬೇಕು. ಸರ್ಕಾರ ಯಾವ ಚರ್ಚೆಯನ್ನು ಮಾಡಿಲ್ಲ.

ಒಂದು ಡಿಪಾರ್ಟ್ಮೆಂಟ್ ಗೆ ಹಾಕಬೇಕು ಅಂದ್ರೆ ಆ ಡಿಪಾರ್ಟ್ಮೆಂಟ್ ಬಗ್ಗೆ ಅವರಿಗೆ ಗೊತ್ತಿರಬೇಕು. ಒಂದು ಡಿಪಾರ್ಟ್ಮೆಂಟ್ ಬಗ್ಗೆ ತಿಳಿದುಕೊಳ್ಳಲು 4 ರಿಂದ 5 ತಿಂಗಳು ಬೇಕು. ಆದ್ರೆ ಸರ್ಕಾರ ಆರು ತಿಂಗಳಿಗೆ ಒಬ್ಬರನ್ನ ಚೇಂಜ್ ಮಾಡ್ತಿದ್ದಾರೆ. ಈ ರೀತಿ ಚೇಂಜ್ ಮಾಡ್ತಿದ್ದಾರೆ ನಾಳೆ ಅಧಿಕಾರಿ ಏನು ವರದಿ ಸಲ್ಲಿಸುತ್ತಾರೆ. ಕಂಪನಿ ಏನ್ ಕೊಟ್ಟಿರುತ್ತಾರೆ ಅದನ್ನೆ ಹೊಸಬರು ಕೋರ್ಟ್ ಗೆ ಸಲ್ಲಿಸುತ್ತಾರೆ. ನಿಷ್ಠಾವಂತ ಅಧಿಕಾರಿಗಳು ನಮ್ಮ ಸರ್ಕಾರದಲ್ಲಿ ಕೆಲಸ ಮಾಡಲು ಸಾಧ್ಯವೇ ಇಲ್ಲ. ನಾಳೆ ಕೋರ್ಟ್ ನಲ್ಲಿ ಯಾವ ರೀತಿ ವರದಿ ಸಲ್ಲಿಸುತ್ತಾರೆ ನೋಡಬೇಕು ಎಂದು ಭಾರತ್ ಟ್ರಾನ್ಸ್‌ಪೋರ್ಟ್‌ ಅಸೋಸಿಯೇಷನ್ ನ ರಾಜ್ಯಾಧ್ಯಕ್ಷ ಜಯಣ್ಣ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Published On - 12:21 pm, Sun, 6 November 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!