AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಜಿನಿಯರ್​ಗಳು ಜನರ ಜೀವನದ ಜೊತೆ ಆಟವಾಡುತ್ತಿದ್ದಾರೆ; ಬಿಬಿಎಂಪಿ ನಿರ್ಮಿಸಿದ ರಸ್ತೆಗಳಲ್ಲಿ ಗುಂಡಿ: ಹೈಕೋರ್ಟ್ ತರಾಟೆ

ರಿಪೇರಿಯಾದ ರಸ್ತೆಗಳೇ ಗುಂಡಿ ಏಕೆ ಬೀಳುತ್ತಿವೆ. ಕಳಪೆ ರಸ್ತೆಗಳಿಗೆ ಕಾರಣರಾದ ಅಧಿಕಾರಿಗಳನ್ನು ಬಿಡಲ್ಲ ಎಂದು ಬಿಬಿಎಂಪಿಗೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಎಚ್ಚರಿಕೆ ನೀಡಿದ್ದಾರೆ.

ಇಂಜಿನಿಯರ್​ಗಳು ಜನರ ಜೀವನದ ಜೊತೆ ಆಟವಾಡುತ್ತಿದ್ದಾರೆ; ಬಿಬಿಎಂಪಿ ನಿರ್ಮಿಸಿದ ರಸ್ತೆಗಳಲ್ಲಿ ಗುಂಡಿ: ಹೈಕೋರ್ಟ್ ತರಾಟೆ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Feb 07, 2022 | 6:03 PM

Share

ಬೆಂಗಳೂರು: ಬಿಬಿಎಂಪಿ ನಿರ್ಮಿಸಿದ ರಸ್ತೆಗಳಲ್ಲಿ ಗುಂಡಿ ವಿಚಾರವಾಗಿ ಹೈಕೋರ್ಟ್​ಗೆ ಬಿಬಿಎಂಪಿ ಮುಖ್ಯ ಇಂಜಿನಿಯರ್ ಹಾಜರಾಗಿದ್ದಾರೆ. ಬಿಬಿಎಂಪಿ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್ ಅತೃಪ್ತಿ ವ್ಯಕ್ತಪಡಿಸಿದೆ. ರಸ್ತೆ ಗುಂಡಿಯಿಂದ 9 ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಿಮ್ಮ ಮುಖ್ಯ ಇಂಜಿನಿಯರ್ ಮೇಲೇಕೆ FIR ದಾಖಲಿಸಬಾರದು. ನಿಮ್ಮ ಇಂಜಿನಿಯರ್​ಗಳು ಜೈಲಿಗೆ ಹೋಗಲಿ. ಇಂಜಿನಿಯರ್​ಗಳು ಜನರ ಜೀವನದ ಜೊತೆ ಆಟವಾಡುತ್ತಿದ್ದಾರೆ. ಪ್ರತಿ ಮಳೆಯ ನಂತರ ರಸ್ತೆ ಗುಂಡಿಗಳು ಏಕಾಗುತ್ತವೆ. ಡಾಂಬರು ಗುಣಮಟ್ಟ ಕಾಪಾಡದವರ ಮೇಲಿನ ಕ್ರಮವೇನು ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ.

ಇಂತಹ ಕೆಟ್ಟ ದುರಸ್ತಿ ಮಾಡಲು ಎಂತಹ ತಂತ್ರಜ್ಞಾನ ಬಳಸುತ್ತೀರಿ. ಜನರ ತೆರಿಗೆ ಹಣ ವ್ಯರ್ಥವಾಗುತ್ತಿರುವ ಬಗ್ಗೆ ಆತಂಕವಿದೆ. ರಿಪೇರಿಯಾದ ರಸ್ತೆಗಳೇ ಗುಂಡಿ ಏಕೆ ಬೀಳುತ್ತಿವೆ. ಕಳಪೆ ರಸ್ತೆಗಳಿಗೆ ಕಾರಣರಾದ ಅಧಿಕಾರಿಗಳನ್ನು ಬಿಡಲ್ಲ ಎಂದು ಬಿಬಿಎಂಪಿಗೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಿ.ಎಸ್. ಪ್ರಹ್ಲಾದ್​ರನ್ನು ಹೈ ತರಾಟೆಗೆ ತೆಗೆದುಕೊಳ್ಳಲಾಗಿದೆ. ನೀವು ಯಾಂತ್ರಿಕ ಗುಂಡಿ ಮುಚ್ಚುವ ಯಂತ್ರ ಬಳಸಿದ್ದೀರಾ ಎಂಬ ಹೈಕೋರ್ಟ್ ಪ್ರಶ್ನೆಗೆ ಪ್ರಹ್ಲಾದ್ ಗೊಂದಲಕಾರಿ ಉತ್ತರ ನೀಡಿದ್ದಾರೆ. ಮೊದಲಿಗೆ ಹೌದು ಎಂದು ನಂತರ ಇಲ್ಲ ಎಂದು ಹೇಳಿದ್ದಾರೆ. ಬಿಬಿಎಂಪಿ ಮುಖ್ಯ ಇಂಜಿನಿಯರ್​ಗೆ ಹೈಕೋರ್ಟ್ ತಪರಾಕಿ ಹಾಕಿದೆ. ನ್ಯಾಯಾಲಯದ ದಾರಿ ತಪ್ಪಿಸಲು ಯತ್ನಿಸಿದರೆ ಹುಷಾರ್, ಇಲ್ಲಿಂದಲೇ ನಿಮ್ಮನ್ನು ಜೈಲಿಗೆ ಕಳುಹಿಸ್ತೇವೆಂದು ಎಚ್ಚರಿಕೆ ನೀಡಿದ್ದಾರೆ. ನೀವು ಕೋರ್ಟ್​ನಲ್ಲಿದ್ದೀರಾ ಎಚ್ಚರವಿರಲಿ ಎಂದು ಕೋರ್ಟ್ ಹೇಳಿದೆ. ಮುಖ್ಯ ಇಂಜಿನಿಯರ್​ಗೆ ಸಿಜೆ ರಿತುರಾಜ್ ಅವಸ್ತಿ ತರಾಟೆ ತೆಗೆದುಕೊಂಡಿದ್ದಾರೆ.

ಗುಂಡಿ ಮುಚ್ಚುವ ಯಂತ್ರ ಬಳಸಿದ ಮೊದಲ ಸಂಸ್ಥೆ BBMP ಎಂಬ ಬಿಬಿಎಂಪಿ ವಕೀಲರ ಸಮರ್ಥನೆಗೆ ಹೈಕೋರ್ಟ್ ಗರಂ ಆಗಿದೆ. ಬಿಬಿಎಂಪಿಯ ಯೋಗ್ಯತೆ ಏನೆಂದು ಎಲ್ಲರಿಗೂ ಗೊತ್ತಿದೆ. ಈ ತಂತ್ರಜ್ಞಾನ ಬಳಸಿದ ನಗರವೆಂದು ಹೇಳಿಕೊಳ್ಳುತ್ತೀರಿ. ಮಳೆಯ ನಂತರ ನಿಮ್ಮ ರಸ್ತೆಗಳಲ್ಲಿ ವಾಹನ ಚಲಾಯಿಸಲಾಗಲ್ಲ. ಜನರು ಈ ರೀತಿ ಸಾಯುವುದನ್ನು ನೋಡಲು ಸಾಧ್ಯವಿಲ್ಲ. ಬಿಬಿಎಂಪಿ ಮುಖ್ಯ ಇಂಜಿನಿಯರ್ ಅಮಾನತು ಮಾಡುತ್ತೇವೆ. ಬಿಬಿಎಂಪಿಯವರು ಇಂಪ್ರೂವ್ ಆಗುವಂತೆ ಕಾಣುತ್ತಿಲ್ಲ. ನಿಮಗೆ ಇದೇ ಅಭ್ಯಾಸ ಆಗಿಬಿಟ್ಟಿದೆ ಎಂದು ಕೋರ್ಟ್​ ಗರಂ ಆಗಿದೆ.

ನೀವು ಹವಾನಿಯಂತ್ರಿತ ಕೊಠಡಿಯಲ್ಲಿ ಕೂತಿರುತ್ತೀರಿ. ಜನರ ಕಷ್ಟಗಳ ಬಗ್ಗೆ ನಿಮಗೆ ಅರಿವಿಲ್ಲ ಎಂದು ಮುಖ್ಯ ಇಂಜಿನಿಯರ್ ಪ್ರಹ್ಲಾದ್​ಗೆ ಹೈಕೋರ್ಟ್ ತಪರಾಕಿ ಹಾಕಿದೆ. ಈ ಬಗ್ಗೆ ಬಿಬಿಎಂಪಿ ವಕೀಲ ವಿ. ಶ್ರೀನಿಧಿ 1 ವಾರ ಸಮಯ ಕೋರಿದ್ದಾರೆ. ಫೆಬ್ರವರಿ 15ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ರಸ್ತೆ ಗುಂಡಿ ಮುಚ್ಚುವ ನೀಲನಕ್ಷೆಗೆ ಕೋರ್ಟ್​​ ಸೂಚನೆ ನೀಡಿದೆ. ಯಾಂತ್ರಿಕ ರಸ್ತೆ ಗುಂಡಿ ಮುಚ್ಚುವ ತಂತ್ರಜ್ಞಾನ ಬಳಸಿ, ಗುಣಮಟ್ಟ ಉತ್ತಮವಾಗಿದ್ದರೆ ಮಾತ್ರ ಈ ತಂತ್ರಜ್ಞಾನ ಬಳಸಿ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್ ಹಾಜರಿಗೆ ಸೂಚನೆ ನೀಡಿದೆ.

ಇದನ್ನೂ ಓದಿ: ಬೆಂಗಳೂರು: 2021ರಲ್ಲಿ ರಸ್ತೆ ಗುಂಡಿಗಳಿಗೆ ಬಲಿಯಾದ ಜೀವಗಳೆಷ್ಟು ಗೊತ್ತಾ? ಹೈಕೋರ್ಟ್ ಬಿಬಿಎಂಪಿಗೆ ಕೊಟ್ಟ ಸೂಚನೆ ಇಲ್ಲಿದೆ

ಇದನ್ನೂ ಓದಿ: ಬೆಂಗಳೂರಿನಲ್ಲಿ ಅನುಮತಿ ಇಲ್ಲದೆ ರಸ್ತೆ ಅಗೆಯುತ್ತಿರುವವರ ವಿರುದ್ಧ ಎಫ್​ಐಆರ್ ದಾಖಲಿಸಲು ಮನವಿ: ಬಿಬಿಎಂಪಿ ಆಯುಕ್ತ

Published On - 6:02 pm, Mon, 7 February 22

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ