AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಬಳಸಿ ಹೈಕೋರ್ಟ್ ಕಲಾಪ ವೀಕ್ಷಿಸಿದ್ದ ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ ಪ್ರಕರಣದ ಕೈದಿಗಳು: ತನಿಖೆಗೆ ಸಮಿತಿ ರಚಿಸಲು ಹೈಕೋರ್ಟ್ ಇಂಗಿತ

ಜೈಲಿನಿಂದಲೂ ಉಗ್ರ ಕೃತ್ಯ ನಡೆಸಿದ ಉದಾಹರಣೆಗಳಿವೆ. ಹೀಗಾಗಿ ಮೊಬೈಲ್ ಬಳಕೆ ಬಗ್ಗೆ ತನಿಖೆ ಅಗತ್ಯ ಎಂದು ನ್ಯಾಯಮೂರ್ತಿ ಅರವಿಂದ್ ಕುಮಾರ್ ಹಾಗೂ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಸೂಚನೆ ನೀಡಿದೆ.

ಮೊಬೈಲ್ ಬಳಸಿ ಹೈಕೋರ್ಟ್ ಕಲಾಪ ವೀಕ್ಷಿಸಿದ್ದ ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ ಪ್ರಕರಣದ ಕೈದಿಗಳು: ತನಿಖೆಗೆ ಸಮಿತಿ ರಚಿಸಲು ಹೈಕೋರ್ಟ್ ಇಂಗಿತ
ಕರ್ನಾಟಕ ಹೈಕೋರ್ಟ್
TV9 Web
| Updated By: ganapathi bhat|

Updated on:Jul 28, 2021 | 9:28 PM

Share

ಬೆಂಗಳೂರು: ನಗರದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಹೈಕೋರ್ಟ್ ಕಲಾಪವನ್ನು ಕೈದಿಗಳು ಮೊಬೈಲ್ ಬಳಸಿ ವೀಕ್ಷಿಸಿದ್ದ ಘಟನೆಯ ಕುರಿತು ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಯೋಜಿಸಿದೆ. ಅದಕ್ಕಾಗಿ ತನಿಖಾ ಸಮಿತಿ ರಚಿಸಲು ಹೈಕೋರ್ಟ್ ಇಂಗಿತ ವ್ಯಕ್ತಪಡಿಸಿದೆ.

ಮೊಹಮ್ಮದ್ ಶರೀಫ್, ಶೇಖ್ ಬಿಲಾಲ್​ ಎಂಬವರು ವಿಡಿಯೋ ಕಾನ್ಫರೆನ್ಸ್ ಲಿಂಕ್ ಬಳಸಿ ಕಲಾಪ ವೀಕ್ಷಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಕಲಾಪವನ್ನು ವೀಕ್ಷಿಸಿದ್ದರು. ಹೀಗೆ ಜೈಲಿನೊಳಗೆ ಮೊಬೈಲ್‌ ಬಳಕೆ‌ ಬಗ್ಗೆ ಹೈಕೋರ್ಟ್ ಗರಂ ಆಗಿದೆ.

ನಿವೃತ್ತ ನ್ಯಾಯಮೂರ್ತಿ, ಐಎಎಸ್, ಐಪಿಎಸ್ ಅಧಿಕಾರಿ‌ಗಳಿಂದ‌‌ ತನಿಖೆ ನಡೆಸಲು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ನಿವೃತ್ತ ಅಧಿಕಾರಿಗಳ‌ ಹೆಸರು ನೀಡಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ದಕ್ಷಿಣ ವಲಯ ಐಜಿಪಿಯಿಂದ ತನಿಖೆಗೆ ಸರ್ಕಾರ ಪ್ರಸ್ತಾಪ ಮಾಡಿದೆ. ಆದರೆ, ಸರ್ಕಾರದ ಪ್ರಸ್ತಾಪವನ್ನು ಹೈಕೋರ್ಟ್ ತಿರಸ್ಕರಿಸಿದೆ.

ಜೈಲಿನಿಂದಲೂ ಉಗ್ರ ಕೃತ್ಯ ನಡೆಸಿದ ಉದಾಹರಣೆಗಳಿವೆ. ಹೀಗಾಗಿ ಮೊಬೈಲ್ ಬಳಕೆ ಬಗ್ಗೆ ತನಿಖೆ ಅಗತ್ಯ ಎಂದು ನ್ಯಾಯಮೂರ್ತಿ ಅರವಿಂದ್ ಕುಮಾರ್ ಹಾಗೂ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಸೂಚನೆ ನೀಡಿದೆ.

ಕೊವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಂದ‌ ದುಬಾರಿ ಶುಲ್ಕ; ದೂರು ಪರಿಹಾರ ಸಮಿತಿ ರಚನೆಗೆ ಹೈಕೋರ್ಟ್ ಸೂಚನೆ ಕೊವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಂದ‌ ದುಬಾರಿ ಶುಲ್ಕ ಹಿನ್ನೆಲೆಯಲ್ಲಿ ದೂರು ಪರಿಹಾರ ಸಮಿತಿ ರಚನೆಗೆ ಹೈಕೋರ್ಟ್ ಸೂಚನೆ ನೀಡಿದೆ. ಸರ್ಕಾರಿ ಕೋಟಾದ ಬೆಡ್​ಗಳಿಗೂ ಶುಲ್ಕ ವಸೂಲಿ ಮಾಡಲಾಗಿದೆ. ಹೀಗೆ ಶುಲ್ಕ ವಸೂಲಿ ಬಗ್ಗೆ ಹಲವು ದೂರುಗಳು ಬಂದಿವೆ ಎಂದು ಹೈಕೋರ್ಟ್​ಗೆ ವಕೀಲ‌ ಶ್ರೀಧರ್ ಪ್ರಭು ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ತಕ್ಷಣ ದೂರು ಪರಿಹಾರ ಸಮಿತಿ ರಚನೆಗೆ ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲು ಕ್ರಮ ಕೈಗೊಳ್ಳಿ ಎಂದು ಹೇಳಿ, ವಿಶೇಷ ಲಸಿಕಾ ಅಭಿಯಾನ ನಡೆಸಲು ಕೂಡ ಹೈಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ: ಕೊವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಂದ‌ ದುಬಾರಿ ಶುಲ್ಕ; ದೂರು ಪರಿಹಾರ ಸಮಿತಿ ರಚನೆಗೆ ಹೈಕೋರ್ಟ್ ಸೂಚನೆ

ಕೊವಿಡ್​ನಿಂದಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ‌ ಸಮೀಕ್ಷೆ ನಡೆಸಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

(Karnataka High Court on DJ Halli KJ Halli Case Mobile Phone Usage inside Jail)

Published On - 9:25 pm, Wed, 28 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ