AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಗೆ ಹೈಕೋರ್ಟ್ ತರಾಟೆ: ಬೆಂಗಳೂರಿನಾದ್ಯಂತ ಫ್ಲೆಕ್ಸ್, ಹೋರ್ಡಿಂಗ್ ಸರ್ವೆಗೆ ಹೈಕೋರ್ಟ್ ಆದೇಶ

ಬೆಂಗಳೂರಿನಲ್ಲಿ ಫ್ಲೆಕ್ಸ್, ಹೋರ್ಡಿಂಗ್ಸ್​ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ ಬಿಬಿಎಂಪಿಗೆ ತರಾಟಗೆ ತೆಗೆದುಕೊಂಡಿದ್ದು, ಇದುವರೆಗೂ ಜಾಹಿರಾತುಗಳಿಂದ ಬಂ ಆದಾಯ ಎಷ್ಟು ಎಂದು ಲೆಕ್ಕ ನೀಡುವಂತೆ ಆದೇಶಿಸಿದೆ.

ಬಿಬಿಎಂಪಿಗೆ ಹೈಕೋರ್ಟ್ ತರಾಟೆ: ಬೆಂಗಳೂರಿನಾದ್ಯಂತ ಫ್ಲೆಕ್ಸ್, ಹೋರ್ಡಿಂಗ್ ಸರ್ವೆಗೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on:Oct 11, 2023 | 12:33 PM

Share

ಬೆಂಗಳೂರು, (ಅಕ್ಟೋಬರ್ 11): ಕರ್ನಾಟಕ ಹೈಕೋರ್ಟ್​ (Karnataka High Court) ಆದೇಶದ ನಡುವೆಯೂ ಬೆಂಗಳೂರು ನಗರದಲ್ಲಿ ಫೆಕ್ಸ್, ಬ್ಯಾನರ್ಸ್,  ಹೋರ್ಡಿಂಗ್ಸ್​, ಹಾವಳಿ ಹೆಚ್ಚುತ್ತಲ್ಲೇ ಇದೆ. ಮತ್ತೊಂದೆಡೆ ಈ ಜಾಹಿರಾತು ಫಲಕಗಳ ತಡೆಗೆ ಬಿಬಿಎಂಪಿ (BBMP) ಸೂಕ್ತ ಕಟ್ಟುನಿಟ್ಟಿನ ಕ್ರಮಕೈಗೊಂಡಿಲ್ಲ. ಇದರಿಂದ ಇದೀಗ ಹೈಕೋರ್ಟ್, ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಬೆಂಗಳೂರಿನಾದ್ಯಂತ ಫ್ಲೆಕ್ಸ್, ಹೋರ್ಡಿಂಗ್ ಗಳ ಸರ್ವೆಗೆ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ಎಷ್ಟು ಜಾಹಿರಾತುಗಳಿಗೆ ಅನುಮತಿ ನೀಡಲಾಗಿದೆ? ಜಾಹಿರಾತು ಫಲಕಗಳಿಂದ ಎಷ್ಟು ಆದಾಯ ಸಂಗ್ರಹಿಸಲಾಗಿದೆ? ಅವಧಿ ಮೀರಿದ ಜಾಹಿರಾತು ಫಲಕಗಳ ವಿರುದ್ಧ ಕ್ರಮವೇನು? ಅನುಮತಿಯಿಲ್ಲದೇ ಅಳವಡಿಸಲಾದ ಫಲಕಗಳ ವಿರುದ್ಧ ಕೈಗೊಂಡ ಕ್ರಮಗಳೇನು? ಎಂದು ನವೆಂಬರ್ 28ರೊಳಗೆ ಸರ್ವೆ ನಡೆಸಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ.

ಇದನ್ನೂ ಓದಿ: ಹೈಕೋರ್ಟ್ ಛೀಮಾರಿ ಹಾಕಿದ ಬಳಿಕ ಎಚ್ಚೆತ್ತ ಬಿಬಿಎಂಪಿ, 59,000 ಫ್ಲೆಕ್ಸ್ ಬ್ಯಾನರ್ ತೆರವು

ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬಿಬಿಎಂಪಿ ನಡೆ ಬಗ್ಗೆ ಗರಂ ಆದ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ, ಅಕ್ರಮ ಹೋರ್ಡಿಂಗ್ ಗಳಿಂದ ಬಿಬಿಎಂಪಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಜಾಹಿರಾತಿನಿಂದ ಪಡೆಯಬೇಕಾದ ತೆರಿಗೆಯನ್ನು ನಾಗರಿಕರ ಮೇಲೆ ಹೊರಿಸುತ್ತಿದ್ದೀರಿ. ಬಿಬಿಎಂಪಿ ವೈಫಲ್ಯದಿಂದ ಜನಸಾಮಾನ್ಯರ ಮೇಲೆ‌ ತೆರಿಗೆ ಹೊರೆ ಬಿದ್ದಿದೆ. ಬಿಬಿಎಂಪಿ ನಗರಕ್ಕೆ ಮೊದಲ ಶತ್ರು ವಾಗಿ ಪರಿಣಮಿಸಿದೆ. ಒಂದೆಡೆ ಜಾಹಿರಾತು ಫಲಕಗಳಿಂದ ತೆರಿಗೆ ಸಂಗ್ರಹಿಸಲು ವಿಫಲರಾಗಿದ್ದೀರಿ. ಮತ್ತೊಂದೆಡೆ ನಾಗರಿಕರಿಗೆ ಸೌಲಭ್ಯ ಕಲ್ಪಿಸಲು ಬಿಬಿಎಂಪಿ ಹಣವಿಲ್ಲವೆನ್ನುತ್ತಿದ್ದು, ಬೆಂಗಳೂರಿನ ಅಭಿವೃದ್ಧಿಗೆ ಹಣವಿಲ್ಲವೆಂದು ಬಿಬಿಎಂಪಿ ಕೈ ಮೇಲೆತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:31 pm, Wed, 11 October 23

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!