AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಬಿಗ್​ ರಿಲೀಫ್ ನೀಡಿದ ಹೈಕೋರ್ಟ್, ಏನಿದು ಕೇಸ್?

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಕರ್ನಾಟಕ ಹೈಕೋರ್ಟ್​ ಬಿಗ್ ರಿಲೀಫ್ ನೀಡಿದೆ. ಅಲ್ಲದೇ ದಂಡದ ಹಣವನ್ನು ಶಾಸಕರಿಗೆ ಹಿಂದಿರುಗಿಸುವಂತೆ ಹೈಕೋರ್ಟ್​ ಆದೇಶದಲ್ಲಿ ಸೂಚಿಸಿದೆ.

ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಬಿಗ್​ ರಿಲೀಫ್ ನೀಡಿದ ಹೈಕೋರ್ಟ್, ಏನಿದು ಕೇಸ್?
ಉದಯ್ ಗರುಡಾಚಾರ್​ ,ಬಿಜೆಪಿ ಶಾಸಕ
Ramesha M
| Edited By: |

Updated on: Apr 24, 2024 | 5:53 PM

Share

ಬೆಂಗಳೂರು, (ಏಪ್ರಿಲ್ 24): ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎನ್ನುವ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ವಿರುದ್ಧದ ಪ್ರಕರಣವನ್ನು (BJP MLA uday garudachar)  ಕರ್ನಾಟಕ ಹೈಕೋರ್ಟ್(Karnataka High Court) ರದ್ದುಗೊಳಿಸಿದೆ. ಪ್ರಕರಣ ರದ್ದುಪಡಿಸಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್​ರಿದ್ದ ಹೈಕೋರ್ಟ್ ಪೀಠ ಇಂದು (ಏಪ್ರಿಲ್ 24) ಆದೇಶ ಹೊರಡಿಸಿದೆ. ಅಲ್ಲದೇ ದಂಡದ ಹಣವನ್ನು ಶಾಸಕರಿಗೆ ಹಿಂದಿರುಗಿಸಲು ಆದೇಶದಲ್ಲಿ ಸೂಚಿಸಿದೆ. ಇದರಿಂದ ಶಾಸಕ ಉದಯ್ ಗರುಡಾಚಾರ್​ಗೆ ಬಿಗ್ ರಿಲಿಫ್ ಸಿಕ್ಕಂತಾಗಿದೆ.

2018 ರಲ್ಲಿ ಚಿಕ್ಕಪೇಟೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಪ್ರಮಾಣಪತ್ರದಲ್ಲಿ ಕ್ರಿಮಿನಲ್ ಕೇಸ್ ಗಳ ಮಾಹಿತಿ ನೀಡಿರಲಿಲ್ಲ ಎಂದು ಪ್ರಕಾಶ್ ಎಂ ಶೆಟ್ಟಿ ಎಂಬುವರು ಉದಯ್ ಗರುಡಾಚಾರ್​ ವಿರುದ್ಧ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರ್‌ಒಸಿಯಿಂದ ಉದಯ್ ಗರುಡಾಚಾರ್ ಹಾಗೂ ಪತ್ನಿ ಅನರ್ಹಗೊಂಡಿದ್ದರು. ಈ ಮಾಹಿತಿಯನ್ನು ಪ್ರಮಾಣಪತ್ರದಿಂದ ಮುಚ್ಚಿಟ್ಟಿದ್ದರು. ಮೆವರಿಕ್ ಹೋಲ್ಡಿಂಗ್ಸ್ ನಲ್ಲಿ ಎಂಡಿ ಆಗಿದ್ದರೂ ಹೂಡಿಕೆದಾರ ಎಂದು ನಮೂದು. ಪತ್ನಿ ನಿರ್ದೇಶಕರಾಗಿರುವುದನ್ನು ನಮೂದಿಸಿಲ್ಲ. ಪತ್ನಿಯ ಬ್ಯಾಂಕ್ ವಿವರ ನೀಡದೇ ಮುಚ್ಚಿಟ್ಟ ಆರೋಪ. ಈ ಎಲ್ಲದರ ಬಗ್ಗೆ ಹೆಚ್.ಜಿ.ಪ್ರಶಾಂತ್ ಅವರು ದೂರು ದಾಖಲಿಸಿದ್ದರು.

ಇದನ್ನೂ ಓದಿ: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪ: ಶಾಸಕ ಉದಯ್ ಗರುಡಾಚಾರ್​ಗೆ ಜಾಮೀನು

ಈ ಎಲ್ಲಾ ಆರೋಪಗಳು ಸಾಬೀತಾಗಿರುವುದರಿಂದ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಉದಯ್ ಗರುಡಾಚಾರ್ ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿತ್ತು. ಬಳಿಕ ಜಾಮೀನು ಸಹ ನೀಡಿತ್ತು. ಬಳಿಕ ಉದಯ್ ಗರುಡಾಚಾರ್ ಅವರು ತಮ್ಮ ವಿರುದ್ಧ ಈ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಉದಯ್ ಗರುಡಾಚಾರ್ ವಿರುದ್ಧ ಪ್ರಕರಣವನ್ನು ರದ್ದುಗೊಳಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesha M
Ramesha M
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ