AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಆವರಣದಲ್ಲಿ ಗಾಂಜಾ ಗಿಡ: ಬೆಂಗಳೂರಿನ ಹಿರಿಯ ನಾಗರಿಕನಿಗೆ ಹೈಕೋರ್ಟ್ ರಿಲೀಫ್

ಮನೆ ಆವರಣದಲ್ಲಿ ಬೆಳೆದಿದ್ದ ಗಾಂಜಾ ಗಿಡದಿಂದಾಗಿ ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದ 67 ವರ್ಷದ ಬೆಂಗಳೂರಿನ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ ಬಿಗ್​ ರಿಲೀಫ್ ನೀಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು ಸುಪ್ರೀಂಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ಅರ್ಜಿದಾರರಿಗೆ ರಿಲೀಫ್ ನೀಡಿದೆ. ಹಾಗಾದ್ರೆ, ಏನಿದು ಪ್ರಕರಣ? ಯಾರು ಆ ವ್ಯಕ್ತಿ? ಹೈಕೋರ್ಟ್ ಹೇಳಿದ್ದೇನು? ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಮನೆ ಆವರಣದಲ್ಲಿ ಗಾಂಜಾ ಗಿಡ: ಬೆಂಗಳೂರಿನ ಹಿರಿಯ ನಾಗರಿಕನಿಗೆ ಹೈಕೋರ್ಟ್ ರಿಲೀಫ್
Karnataka High Court
ರಮೇಶ್​ ಎಮ್​.
| Edited By: |

Updated on: May 05, 2025 | 4:20 PM

Share

ಬೆಂಗಳೂರು, (ಮೇ 05): ಮನೆ ಆವರಣದಲ್ಲಿ ಬೆಳೆದಿದ್ದ ಗಾಂಜಾ ಗಿಡದಿಂದಾಗಿ (Cannabis Plants) ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದ 67 ವರ್ಷದ ವ್ಯಕ್ತಿಗೆ ಹೈಕೋರ್ಟ್  (Karnataka High Court)  ರಿಲೀಫ್ ನೀಡಿದೆ. 2023ರಲ್ಲಿ ಬೆಂಗಳೂರಿನ (Bengaluru) ಜಯನಗರದ ಚಂದ್ರಶೇಖರ್ ಎಂಬುವರ ಮನೆ ಆವರಣದಲ್ಲಿ ಐದು ಗಾಂಜಾ ಗಿಡಗಳು ಬೆಳೆದಿದ್ದವು. ಈ ಪ್ರಕರಣ ಸಂಬಂಧ ಪೊಲೀಸರು ಚಂದ್ರಶೇಖರ್​ ವಿರುದ್ಧ ಕೇಸ್ ದಾಖಲಿಸಿದ್ದರು. ಆದ್ರೆ, ಇದೀಗ ಆ ಪ್ರಕರಣವನ್ನು ಹೈಕೋರ್ಟ್ ಇಂದು (ಮೇ 05) ರದ್ದುಗೊಳಸಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಹಿರಿಯ ನಾಗರಿಕ ಚಂದ್ರಶೇಖರ್ ವಿರುದ್ಧದ ದೋಷಾರೋಪ ಪಟ್ಟಿಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಚಂದ್ರಶೇಖರ್, ತಾನು ಉದ್ದೇಶಪೂರ್ವಕವಾಗಿ ಗಾಂಜಾ ಬೆಳೆದಿಲ್ಲ, ತನ್ನಷ್ಟಕ್ಕೇ ಅದು ಬೆಳೆದಿತ್ತು ಎಂದು ವಾದ ಮಂಡಿಸಿದ್ರು. ಚಂದ್ರಶೇಖರ್ ಪರ ವಾದ ಮಂಡಿಸಿದ ವಕೀಲ ಜಯಶ್ಯಾಮ್ ಜಯಸಿಂಹರಾವ್, ಪರಾಗಸ್ಪರ್ಶದಿಂದಲೂ ತನ್ನಿಂತಾನೇ ಐದು ಗಾಂಜಾ ಬೆಳೆದಿವೆ. ಈ ಬಗ್ಗೆ ಮನೆ ಮಾಲೀಕ ಚಂದ್ರಶೇಖರ್ ಗೆ ಅರಿವಿಲ್ಲ. ಪೊಲೀಸರು ಹೇಳುವಂತೆ 27 ಕೆಜಿ ಗಾಂಜಾ ಸಿಕ್ಕಿಲ್ಲ, ಗಾಂಜಾ ಗಿಡವನ್ನು ಅದರ ಬೇರು, ರೆಂಬೆ ಕೊಂಬೆ, ಎಲೆ ಸಹಿತವಾಗಿ ತೂಕ ಹಾಕಿರುವುದು ಸರಿಯಲ್ಲ. ಗಾಂಜಾವನ್ನು ಪ್ರತ್ಯೇಕಿಸಿ ತೂಕ ಹಾಕಿಲ್ಲ ಹೀಗಾಗಿ ಒಟ್ಟಾರೆ ಪ್ರಕ್ರಿಯೆಯೇ ಕಾನೂನುಬಾಹಿರವೆಂದು ವಾದಿಸಿದ್ದರು.

ಇದನ್ನೂ ಓದಿ: ಕಲಬುರಗಿ: ವಿದ್ಯಾರ್ಥಿ ಸ್ವಯಂ ಪ್ರೇರಿತವಾಗಿ ಜನಿವಾರ ತೆಗೆದಿದ್ದನೇ? ಸಿಬ್ಬಂದಿ ಈಗ ಹೇಳೋದೇ ಬೇರೆ!

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ 67 ವಯಸ್ಸಿನ ಹಿರಿಯ ನಾಗರಿಕ ಚಂದ್ರಶೇಖರ್ ವಿರುದ್ಧದ ದೋಷಾರೋಪ ಪಟ್ಟಿಯನ್ನು ರದ್ದುಪಡಿಸಿದೆ. ಸುಪ್ರೀಂಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ಅರ್ಜಿದಾರರಿಗೆ ರಿಲೀಫ್ ನೀಡಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್