AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ

ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರ ವರ್ಷಾಚರಣೆಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಅಮೃತೇಶ್ ಮನವಿ ಮಾಡಿದ್ದರು. ಇದನ್ನು ತಿರಸ್ಕರಿಸಿದ ನ್ಯಾಯಪೀಠ, ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ ಎಂದು ಅಭಿಪ್ರಾಯಪಟ್ಟಿತು.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ
ಕರ್ನಾಟಕ ಹೈಕೋರ್ಟ್
Ramesha M
| Updated By: Ganapathi Sharma|

Updated on:Dec 28, 2023 | 12:33 PM

Share

ಬೆಂಗಳೂರು, ಡಿಸೆಂಬರ್ 28: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ (New Year celebration) ನಿರ್ಬಂಧಿಸಲು ಕರ್ನಾಟಕ ಹೈಕೋರ್ಟ್ (Karnataka High Court) ನಿರಾಕರಿಸಿದೆ. ವಕೀಲ ಎನ್​ಪಿ ಅಮೃತೇಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ನಟರಾಜ್, ಕೆವಿ ಅರವಿಂದ ಅವರಿದ್ದ ಪೀಠ, ನಿರ್ಬಂಧ ಹೇರಲು ನಿರಾಕರಿಸಿದೆ.

ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರ ವರ್ಷಾಚರಣೆಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಅಮೃತೇಶ್ ಮನವಿ ಮಾಡಿದ್ದರು. ಇದನ್ನು ತಿರಸ್ಕರಿಸಿದ ನ್ಯಾಯಪೀಠ, ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಕೋವಿಡ್​ಗೆ ಸದ್ಯಕ್ಕೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ ಎಂದು ಹೇಳಿತು. ಅಲ್ಲದೆ, ಕೋವಿಡ್ ನಿರ್ಬಂಧ ಕುರಿತ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿತು.

ಇದನ್ನೂ ಓದಿ: ಹೊಸ ವರ್ಷ ಸಂಭ್ರಮ: ಕ್ಲಬ್,‌ ಪಬ್, ರೆಸ್ಟೋರೆಂಟ್​ಗೆ ಎಂಟ್ರಿಯಾಗಲು ಬೇಕು ಆಧಾರ್! ಕಾರಣ ಇಲ್ಲಿದೆ 

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಹೊಸ ವರ್ಷದ ಪಾರ್ಟಿ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ ಮಧ್ಯೆ ಹೊಸ ವರ್ಷ ಆಚರಣೆ ವೇಳೆ ಡ್ರಗ್ಸ್ ಮಾಫಿಯಾ ಸೇರಿದಂತೆ ಇತರ ಮಾದಕ ವಸ್ತು ಸಾಗಾಟ, ಪೂರೈಕೆ ವಿರುದ್ಧ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೊಸ ವರ್ಷ ಆಚರಣೆ ಸಂದರ್ಭ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರನ್ನು ನೆಲಮಂಗಲ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಅಪರಾಧ ಪೊಲೀಸರು ಅಪರಾಧ ಚಟುವಟಿಕೆಗಳ ಮೇಲೆ ಸೂಕ್ಷ್ಮ ನಿಗಾ ಇರಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:24 pm, Thu, 28 December 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ