AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ

ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರ ವರ್ಷಾಚರಣೆಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಅಮೃತೇಶ್ ಮನವಿ ಮಾಡಿದ್ದರು. ಇದನ್ನು ತಿರಸ್ಕರಿಸಿದ ನ್ಯಾಯಪೀಠ, ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ ಎಂದು ಅಭಿಪ್ರಾಯಪಟ್ಟಿತು.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ
ಕರ್ನಾಟಕ ಹೈಕೋರ್ಟ್
ರಮೇಶ್​ ಎಮ್​.
| Edited By: |

Updated on:Dec 28, 2023 | 12:33 PM

Share

ಬೆಂಗಳೂರು, ಡಿಸೆಂಬರ್ 28: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ (New Year celebration) ನಿರ್ಬಂಧಿಸಲು ಕರ್ನಾಟಕ ಹೈಕೋರ್ಟ್ (Karnataka High Court) ನಿರಾಕರಿಸಿದೆ. ವಕೀಲ ಎನ್​ಪಿ ಅಮೃತೇಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ನಟರಾಜ್, ಕೆವಿ ಅರವಿಂದ ಅವರಿದ್ದ ಪೀಠ, ನಿರ್ಬಂಧ ಹೇರಲು ನಿರಾಕರಿಸಿದೆ.

ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರ ವರ್ಷಾಚರಣೆಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಅಮೃತೇಶ್ ಮನವಿ ಮಾಡಿದ್ದರು. ಇದನ್ನು ತಿರಸ್ಕರಿಸಿದ ನ್ಯಾಯಪೀಠ, ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಕೋವಿಡ್​ಗೆ ಸದ್ಯಕ್ಕೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ ಎಂದು ಹೇಳಿತು. ಅಲ್ಲದೆ, ಕೋವಿಡ್ ನಿರ್ಬಂಧ ಕುರಿತ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿತು.

ಇದನ್ನೂ ಓದಿ: ಹೊಸ ವರ್ಷ ಸಂಭ್ರಮ: ಕ್ಲಬ್,‌ ಪಬ್, ರೆಸ್ಟೋರೆಂಟ್​ಗೆ ಎಂಟ್ರಿಯಾಗಲು ಬೇಕು ಆಧಾರ್! ಕಾರಣ ಇಲ್ಲಿದೆ 

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಹೊಸ ವರ್ಷದ ಪಾರ್ಟಿ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ ಮಧ್ಯೆ ಹೊಸ ವರ್ಷ ಆಚರಣೆ ವೇಳೆ ಡ್ರಗ್ಸ್ ಮಾಫಿಯಾ ಸೇರಿದಂತೆ ಇತರ ಮಾದಕ ವಸ್ತು ಸಾಗಾಟ, ಪೂರೈಕೆ ವಿರುದ್ಧ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೊಸ ವರ್ಷ ಆಚರಣೆ ಸಂದರ್ಭ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರನ್ನು ನೆಲಮಂಗಲ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಅಪರಾಧ ಪೊಲೀಸರು ಅಪರಾಧ ಚಟುವಟಿಕೆಗಳ ಮೇಲೆ ಸೂಕ್ಷ್ಮ ನಿಗಾ ಇರಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:24 pm, Thu, 28 December 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ