AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಭದ್ರತೆಗೆ ಆತಂಕ: ಆರೋಗ್ಯ ಇಲಾಖೆಯ ಟೆಂಡರ್ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್

ರಾಷ್ಟ್ರೀಯ ಹಿತಾಸಕ್ತಿ ಮತ್ತು ಭದ್ರತೆಯ ಕಾರಣದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೈಕೋರ್ಟ್​ ತಿಳಿಸಿದೆ.

ದೇಶದ ಭದ್ರತೆಗೆ ಆತಂಕ: ಆರೋಗ್ಯ ಇಲಾಖೆಯ ಟೆಂಡರ್ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:May 19, 2022 | 12:01 PM

Share

ಬೆಂಗಳೂರು: ಚೀನಾ ಕಂಪನಿಯೊಂದರ ಏಜೆಂಟ್ ಆಗಿ ಕೆಲಸ ಮಾಡುವ ​ವ್ಯಕ್ತಿಯೊಬ್ಬರಿಗೆ ಸೇರಿದ ಸಂಸ್ಥೆಗೆ ನೀಡಿದ್ದ ಟೆಂಡರ್​ ಆದೇಶವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ರಾಷ್ಟ್ರೀಯ ಹಿತಾಸಕ್ತಿ (National Security) ಮತ್ತು ಭದ್ರತೆಯ (Defence) ಕಾರಣದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೈಕೋರ್ಟ್​ ತಿಳಿಸಿದೆ. ಸಾಮಾನ್ಯ ಹಣಕಾಸು ನಿಯಮ 2017 (General Finance Rules 2017) ಉಲ್ಲೇಖಿಸಿರುವ ಹೈಕೋರ್ಟ್​, ಭಾರತದೊಂದಿಗೆ ಭೂಗಡಿ ಹಂಚಿಕೊಂಡಿರುವ ಯಾವುದೇ ದೇಶ ಟೆಂಡರ್​ನಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಈ ನಿಯಮ ತಿಳಿಸುತ್ತದೆ. ಈ ಅರ್ಜಿಯ ಪ್ರತಿವಾದಿಗಳಾಗಿ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರನ್ನೂ ಹೆಸರಿಸಲಾಗಿತ್ತು.

‘ಭಾರತದ ಭದ್ರತೆಯ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು ರೂಪಿಸಿರುವ ಈ ನಿಯಮಕ್ಕೆ ಕರ್ನಾಟಕ ಸರ್ಕಾರವು ಬದ್ಧವಾಗಿರುವುದಾಗಿ ಕರ್ನಾಟಕ ಸರ್ಕಾರವು ಒಪ್ಪಿಕೊಂಡಿದೆ. ಫೊರೆಸ್​ ಹೆಲ್ತ್​ಕೇರ್​ ಎಲ್​ಎಲ್​ಪಿ ಕಂಪನಿಗೆ ನೀಡಿದ್ದ ಟೆಂಡರ್​ಗೆ ತಡೆಯಾಜ್ಞೆ ನೀಡುವಂತೆ ಕೋರಿ ಫಿಲಿಪ್ಸ್​ ಇಂಡಿಯಾ ಲಿಮಿಟೆಡ್​ ಹೈಕೋರ್ಟ್​​ಗೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ನ್ಯಾಯಾಲಯ ಈ ಮೊದಲು ಪುರಸ್ಕರಿಸಿರಲಿಲ್ಲ. ಶಾಂಘೈ ಯುನೈಟೆಡ್ ಇಮೇಜಿಂಗ್ ಹೆಲ್ತ್​ಕೇರ್​ ಕಂಪನಿ ಲಿಮಿಟೆಡ್​ ಚೀನಾದ ಶಾಂಘೈನಲ್ಲಿ ಕೇಂದ್ರ ಕಚೇರಿ ಹೊಂದಿದೆ. ಈ ಕಂಪನಿಯ ಏಜೆಂಟ್ ಆಗಿ ಫೋರೆಸ್ ಹೆಲ್ತ್​ಕೇರ್​ ಕಾರ್ಯನಿರ್ವಹಿಸುತ್ತದೆ.

‘ಅರ್ಜಿದಾರರ ವಾದ ಆಲಿಸಿದ ನಂತರ ನಾವು ಮಧ್ಯಂತರ ತಡೆಯಾಜ್ಞೆ ನಿಡಲು ನಿರ್ಧರಿಸಿದ್ದೇವೆ’ ಎಂದು ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ವಿಭಾಗೀಯ ನ್ಯಾಯಪೀಠವು ಮೇ 5ರಂದು ಹೇಳಿತ್ತು.

ಮೇಲ್ನೋಟಕ್ಕೆ ಈ ಟೆಂಡರ್ ಮಂಜೂರಾತಿಯಿಂದ ಸಾಮಾನ್ಯ ಹಣಕಾಸು ನಿಯಮಗಳು ಉಲ್ಲಂಘನೆಯಾಗಿರುವುದು ಕಂಡು ಬಂದಿದೆ. ನೋಂದಣಿಯಾಗದ ಸಂಸ್ಥೆಗಳು ಇಂಥ ಟೆಂಡರ್​ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿವೆ ಎಂದು ನ್ಯಾಯಪೀಠವು ಹೇಳಿತ್ತು.

ಮುಂದಿನ ವಿಚಾರಣೆವರೆಗೆ ಟೆಂಡರ್ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ. ಟೆಂಡರ್ ಮಂಜೂರಾತಿ ಪಡೆದಿರುವ ಕಂಪನಿಯ 5ನೇ ಪ್ರತಿವಾದಿಯು ಚೀನಾದೊಂದಿಗೆ ಸಂಬಂಧ ಹೊಂದಿದ್ದಾರೆ. ಭಾರತದೊಂದಿಗೆ ಚೀನಾ ಭೂಗಡಿ ಹಂಚಿಕೊಂಡಿದೆ. ಹೀಗಾಗಿ ಆ ಸಂಸ್ಥೆಗೆ ಈ ಟೆಂಡರ್​ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

Published On - 12:01 pm, Thu, 19 May 22

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ