AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಭದ್ರತೆಗೆ ಆತಂಕ: ಆರೋಗ್ಯ ಇಲಾಖೆಯ ಟೆಂಡರ್ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್

ರಾಷ್ಟ್ರೀಯ ಹಿತಾಸಕ್ತಿ ಮತ್ತು ಭದ್ರತೆಯ ಕಾರಣದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೈಕೋರ್ಟ್​ ತಿಳಿಸಿದೆ.

ದೇಶದ ಭದ್ರತೆಗೆ ಆತಂಕ: ಆರೋಗ್ಯ ಇಲಾಖೆಯ ಟೆಂಡರ್ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:May 19, 2022 | 12:01 PM

Share

ಬೆಂಗಳೂರು: ಚೀನಾ ಕಂಪನಿಯೊಂದರ ಏಜೆಂಟ್ ಆಗಿ ಕೆಲಸ ಮಾಡುವ ​ವ್ಯಕ್ತಿಯೊಬ್ಬರಿಗೆ ಸೇರಿದ ಸಂಸ್ಥೆಗೆ ನೀಡಿದ್ದ ಟೆಂಡರ್​ ಆದೇಶವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ರಾಷ್ಟ್ರೀಯ ಹಿತಾಸಕ್ತಿ (National Security) ಮತ್ತು ಭದ್ರತೆಯ (Defence) ಕಾರಣದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೈಕೋರ್ಟ್​ ತಿಳಿಸಿದೆ. ಸಾಮಾನ್ಯ ಹಣಕಾಸು ನಿಯಮ 2017 (General Finance Rules 2017) ಉಲ್ಲೇಖಿಸಿರುವ ಹೈಕೋರ್ಟ್​, ಭಾರತದೊಂದಿಗೆ ಭೂಗಡಿ ಹಂಚಿಕೊಂಡಿರುವ ಯಾವುದೇ ದೇಶ ಟೆಂಡರ್​ನಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಈ ನಿಯಮ ತಿಳಿಸುತ್ತದೆ. ಈ ಅರ್ಜಿಯ ಪ್ರತಿವಾದಿಗಳಾಗಿ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರನ್ನೂ ಹೆಸರಿಸಲಾಗಿತ್ತು.

‘ಭಾರತದ ಭದ್ರತೆಯ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು ರೂಪಿಸಿರುವ ಈ ನಿಯಮಕ್ಕೆ ಕರ್ನಾಟಕ ಸರ್ಕಾರವು ಬದ್ಧವಾಗಿರುವುದಾಗಿ ಕರ್ನಾಟಕ ಸರ್ಕಾರವು ಒಪ್ಪಿಕೊಂಡಿದೆ. ಫೊರೆಸ್​ ಹೆಲ್ತ್​ಕೇರ್​ ಎಲ್​ಎಲ್​ಪಿ ಕಂಪನಿಗೆ ನೀಡಿದ್ದ ಟೆಂಡರ್​ಗೆ ತಡೆಯಾಜ್ಞೆ ನೀಡುವಂತೆ ಕೋರಿ ಫಿಲಿಪ್ಸ್​ ಇಂಡಿಯಾ ಲಿಮಿಟೆಡ್​ ಹೈಕೋರ್ಟ್​​ಗೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ನ್ಯಾಯಾಲಯ ಈ ಮೊದಲು ಪುರಸ್ಕರಿಸಿರಲಿಲ್ಲ. ಶಾಂಘೈ ಯುನೈಟೆಡ್ ಇಮೇಜಿಂಗ್ ಹೆಲ್ತ್​ಕೇರ್​ ಕಂಪನಿ ಲಿಮಿಟೆಡ್​ ಚೀನಾದ ಶಾಂಘೈನಲ್ಲಿ ಕೇಂದ್ರ ಕಚೇರಿ ಹೊಂದಿದೆ. ಈ ಕಂಪನಿಯ ಏಜೆಂಟ್ ಆಗಿ ಫೋರೆಸ್ ಹೆಲ್ತ್​ಕೇರ್​ ಕಾರ್ಯನಿರ್ವಹಿಸುತ್ತದೆ.

‘ಅರ್ಜಿದಾರರ ವಾದ ಆಲಿಸಿದ ನಂತರ ನಾವು ಮಧ್ಯಂತರ ತಡೆಯಾಜ್ಞೆ ನಿಡಲು ನಿರ್ಧರಿಸಿದ್ದೇವೆ’ ಎಂದು ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ವಿಭಾಗೀಯ ನ್ಯಾಯಪೀಠವು ಮೇ 5ರಂದು ಹೇಳಿತ್ತು.

ಮೇಲ್ನೋಟಕ್ಕೆ ಈ ಟೆಂಡರ್ ಮಂಜೂರಾತಿಯಿಂದ ಸಾಮಾನ್ಯ ಹಣಕಾಸು ನಿಯಮಗಳು ಉಲ್ಲಂಘನೆಯಾಗಿರುವುದು ಕಂಡು ಬಂದಿದೆ. ನೋಂದಣಿಯಾಗದ ಸಂಸ್ಥೆಗಳು ಇಂಥ ಟೆಂಡರ್​ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿವೆ ಎಂದು ನ್ಯಾಯಪೀಠವು ಹೇಳಿತ್ತು.

ಮುಂದಿನ ವಿಚಾರಣೆವರೆಗೆ ಟೆಂಡರ್ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ. ಟೆಂಡರ್ ಮಂಜೂರಾತಿ ಪಡೆದಿರುವ ಕಂಪನಿಯ 5ನೇ ಪ್ರತಿವಾದಿಯು ಚೀನಾದೊಂದಿಗೆ ಸಂಬಂಧ ಹೊಂದಿದ್ದಾರೆ. ಭಾರತದೊಂದಿಗೆ ಚೀನಾ ಭೂಗಡಿ ಹಂಚಿಕೊಂಡಿದೆ. ಹೀಗಾಗಿ ಆ ಸಂಸ್ಥೆಗೆ ಈ ಟೆಂಡರ್​ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

Published On - 12:01 pm, Thu, 19 May 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ