AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಸಂಸ್ಥೆಗೆ ತೆರಿಗೆ ಪಾವತಿಸಲು ನೊಟೀಸ್​ ಕೊಟ್ಟ ಬಿಬಿಎಂಪಿ: ಹೈಕೋರ್ಟ್​ ತಡೆ

ಸಂವಿಧಾನದ 285 (1)ನೇ ವಿಧಿಯಡಿ ತೆರಿಗೆ ಕೇಂದ್ರ ಸರ್ಕಾರದ ಸುಪರ್ದಿಯಲ್ಲಿರುವ ಆಸ್ತಿಗಳಿಗೆ ತೆರಿಗೆ ವಿಧಿಸಲು ಅವಕಾಶವಿಲ್ಲ ಎಂದು ಸಂಸ್ಥೆಯು ವಾದಿಸಿದೆ.

ಕೇಂದ್ರ ಸರ್ಕಾರದ ಸಂಸ್ಥೆಗೆ ತೆರಿಗೆ ಪಾವತಿಸಲು ನೊಟೀಸ್​ ಕೊಟ್ಟ ಬಿಬಿಎಂಪಿ: ಹೈಕೋರ್ಟ್​ ತಡೆ
ಬಿಬಿಎಂಪಿ ಮತ್ತು ಪ್ಲೈವುಡ್ ಸಂಶೋಧನಾ ಸಂಸ್ಥೆ
TV9 Web
| Edited By: |

Updated on: Dec 15, 2021 | 9:51 PM

Share

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪ್ಲೈವುಡ್ ಸಂಶೋಧನಾ ಸಂಸ್ಥೆಗೆ ಆಸ್ತಿ ತೆರಿಗೆ ಪಾವತಿಸುವಂತೆ ಸೂಚಿಸಿ ಬಿಬಿಎಂಪಿ ನೊಟೀಸ್ ಜಾರಿ ಮಾಡಿದೆ. ಈ ನೊಟೀಸ್ ಪ್ರಶ್ನಿಸಿ ಸಂಶೋಧನಾ ಸಂಸ್ಥೆಯು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಮುಂದಿನ ವಿಚಾರಣೆವರೆಗೆ ಸಂಸ್ಥೆಯ ವಿರುದ್ಧ ಯಾವುದೇ ಕ್ರಮ ಜರುಗಿಸಬಾರದು ಎಂದು ಬಿಬಿಎಂಪಿಗೆ ಸೂಚನೆ ನೀಡಿದೆ. ಸಂವಿಧಾನದ 285 (1)ನೇ ವಿಧಿಯಡಿ ತೆರಿಗೆ ಕೇಂದ್ರ ಸರ್ಕಾರದ ಸುಪರ್ದಿಯಲ್ಲಿರುವ ಆಸ್ತಿಗಳಿಗೆ ತೆರಿಗೆ ವಿಧಿಸಲು ಅವಕಾಶವಿಲ್ಲ. ಆದರೆ ತೆರಿಗೆ ಪಾವತಿಸುವಂತೆ ಬಿಬಿಎಂಪಿ ಡಿಮಾಂಡ್ ನೊಟೀಸ್ ನೀಡಿದೆ ಎಂದು ದೂರಿರುವ ಅರ್ಜಿದಾರರು ಬಿಬಿಎಂಪಿಯ ಅಧಿಕಾರ ವ್ಯಾಪ್ತಿ ಪ್ರಶ್ನಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿದ್ದ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿಗಳಿಗೆ ಹೈಕೋರ್ಟ್​ ನೊಟೀಸ್ ಜಾರಿ ಮಾಡಿದೆ. ಬಿಬಿಎಂಪಿ ಆದೇಶ ಪ್ರಶ್ನಿಸಿದ್ದ ಪ್ಲೈವುಡ್ ಸಂಶೋಧನಾ ಸಂಸ್ಥೆಯ ಪರವಾಗಿ ವಾದಿಸಿದ ವಕೀಲ ಎಂ.ಎನ್.ಕುಮಾರ್, ಬಿಬಿಎಂಪಿಗೆ ಇಂಥ ನೊಟೀಸ್ ಜಾರಿ ಮಾಡುವ ಅಧಿಕಾರವೇ ಇಲ್ಲ ಎಂದು ಹೇಳಿದರು.

ಕರ್ನಾಟಕ ಸರ್ಕಾರವು 1963ರಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ 16.18 ಎಕರೆ ಭೂಮಿಯನ್ನು ಕೇಂದ್ರ ಸರ್ಕಾರಕ್ಕೆ ಸಂಶೋಧನಾ ಸಂಸ್ಥೆ ಸ್ಥಾಪಿಸಲು ನೀಡಿತ್ತು. ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಂಸ್ಥೆಯು ಕೇಂದ್ರ ಸರ್ಕಾರದ ಕೈಗಾರಿಕಾ ಇಲಾಖೆಯಿಂದ ಅನುದಾನ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: ಮಗಳ ಕ್ಷೇಮಕ್ಕಾಗಿ ಪಾಲಕರು ನೀಡುವ ಉಡುಗೊರೆ ವರದಕ್ಷಿಣೆ ಅಲ್ಲ: ಕೇರಳ ಹೈಕೋರ್ಟ್ ಇದನ್ನೂ ಓದಿ: ಶೀಘ್ರದಲ್ಲೇ ಕೊಡವರಿಗೆ ಹಿಂದುಳಿದ ವರ್ಗ ಸ್ಥಾನಮಾನ? ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ಏನು?

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!