AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ರಮೇಶ್ ಬಿ. ಜವಳಗೇರಾ
|

Updated on:May 30, 2023 | 1:24 PM

Share

ಮುಖ್ಯಾಂಶಗಳು

  • ಸಿಎಂ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪ
  • ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ ಹೈಕೋರ್ಟ್ ರಿಲೀಫ್
  • ಮೈಸೂರಿನ ದೇವರಾಜ ಠಾಣೆಯ ಎಫ್ಐಆರ್​​​ಗೆ ಹೈಕೋರ್ಟ್ ತಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ(BJP MLA CN Ashwath Narayan)  ಕರ್ನಾಟಕ ಹೈಕೋರ್ಟ್(Karnataka High Court)ಬಿಗ್ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್​​​ಗೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಎಫ್ಐಆರ್ ರದ್ದು ಕೋರಿ ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ ಅವರು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇಂದು(ಮೇ,30) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶ್ವತ್ಥ್ ನಾರಾಯಣ ವಿರುದ್ಧ ಎಫ್​ಐಆರ್​ಗೆ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: FIR ರದ್ದು ಕೋರಿ ಹೈಕೋರ್ಟ್‌ ಮೊರೆ ಹೋದ ಅಶ್ವತ್ಥ್‌ ನಾರಾಯಣ

ಚುನಾವಣೆಯಲ್ಲಿ ಸೋಲಿಸಬೇಕೆಂಬ ರೀತಿಯಲ್ಲಿ ನೀಡಿದ ಹೇಳಿಕೆ ನೀಡಲಾಗಿತ್ತು. ಫೆಬ್ರವರಿ ತಿಂಗಳ ದೂರು ಸಂಬಂಧ ಎನ್​​​ಸಿಆರ್ ದಾಖಲಾಗಿತ್ತು. ಸರ್ಕಾರ ಬದಲಾದ ನಂತರ ಹೊಸ ದೂರು ನೀಡಲಾಗಿದೆ. ದುರುದ್ದೇಶ ಪೂರ್ವಕವಾಗಿ ಎಫ್ಐಆರ್ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಐಪಿಸಿ ಸೆಕ್ಷನ್153 ರಂತೆ ಅಪರಾಧವಾಗುವ ಅಂಶಗಳಿಲ್ಲ ಹೀಗಾಗಿ ಎಫ್​ಐಆರ್​ಗೆ ತಡೆ ನೀಡುವಂತೆ ಅಶ್ವತ್ಥ್ ನರಾಯಣ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ಇನ್ನು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲ, ಜಾಮೀನು ನೀಡಬಹುದಾದ ಪ್ರಕರಣವಾದ್ದರಿಂದ ತಡೆ ಬೇಡ ಎಂದು ವಾದಿಸಿದರು. ಈ ವಾದ ವಿವಾದ ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ಎಫ್​ಐಆರ್​ಗೆ​ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಇದನ್ನೂ ಓದಿ: ಅಶ್ವತ್ಥ ನಾರಾಯಣ ವಿರುದ್ಧದ ಪ್ರಕರಣ ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

ಏನಿದು ಪ್ರಕರಣ?:

2023ರ ಫೆ.15ರಂದು ಮಂಡ್ಯದ ಸಾತನೂರಿನ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಂದು ಸಚಿವರಾಗಿದ್ದ ಅಶ್ವತ್ಥನಾರಾಯಣ ((Dr CN ashwath naryana)) ಅವರು, ಟಿಪ್ಪುವನ್ನು ಉರಿಗೌಡ-ನಂಜೇಗೌಡರು(Urigowda Nanjegowda) ಮುಗಿಸಿದಂತೆ ಸಿದ್ದರಾಮಯ್ಯ(Siddaramaiah) ಅವರನ್ನು ಹೊಡೆದುಹಾಕಿ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಮೈಸೂರಿನ ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ ಅವರು ಫೆ.17ರಂದು ದೂರು ನೀಡಿದ್ದರು. ಆ ದೂರು ಆಧರಿಸಿ ಮ. 24ರಂದು ಮೈಸೂರಿನ ದೇವರಾಜ ಠಾಣಾ ಪೊಲೀಸರು, ಕ್ರಿಮಿನಲ್‌ ಬೆದರಿಕೆ ಹಾಗೂ ಗಲಭೆಗೆ ಪ್ರಚೋದನೆ ನೀಡಿದ ಅಪರಾಧ ಸಂಬಂಧ ಎಫ್‌ಐಆರ್‌ ದಾಖಲಿಸಿದ್ದರು. ಆ ನಂತರ ಪ್ರಕರಣವನ್ನು ಮಂಡ್ಯ ಠಾಣೆಗೆ ವರ್ಗಾಯಿಸಲಾಗಿತ್ತು.

Published On - 1:04 pm, Tue, 30 May 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ