ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
Follow us
|

Updated on:May 30, 2023 | 1:24 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ(BJP MLA CN Ashwath Narayan)  ಕರ್ನಾಟಕ ಹೈಕೋರ್ಟ್(Karnataka High Court)ಬಿಗ್ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್​​​ಗೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಎಫ್ಐಆರ್ ರದ್ದು ಕೋರಿ ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ ಅವರು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇಂದು(ಮೇ,30) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶ್ವತ್ಥ್ ನಾರಾಯಣ ವಿರುದ್ಧ ಎಫ್​ಐಆರ್​ಗೆ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: FIR ರದ್ದು ಕೋರಿ ಹೈಕೋರ್ಟ್‌ ಮೊರೆ ಹೋದ ಅಶ್ವತ್ಥ್‌ ನಾರಾಯಣ

ಚುನಾವಣೆಯಲ್ಲಿ ಸೋಲಿಸಬೇಕೆಂಬ ರೀತಿಯಲ್ಲಿ ನೀಡಿದ ಹೇಳಿಕೆ ನೀಡಲಾಗಿತ್ತು. ಫೆಬ್ರವರಿ ತಿಂಗಳ ದೂರು ಸಂಬಂಧ ಎನ್​​​ಸಿಆರ್ ದಾಖಲಾಗಿತ್ತು. ಸರ್ಕಾರ ಬದಲಾದ ನಂತರ ಹೊಸ ದೂರು ನೀಡಲಾಗಿದೆ. ದುರುದ್ದೇಶ ಪೂರ್ವಕವಾಗಿ ಎಫ್ಐಆರ್ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಐಪಿಸಿ ಸೆಕ್ಷನ್153 ರಂತೆ ಅಪರಾಧವಾಗುವ ಅಂಶಗಳಿಲ್ಲ ಹೀಗಾಗಿ ಎಫ್​ಐಆರ್​ಗೆ ತಡೆ ನೀಡುವಂತೆ ಅಶ್ವತ್ಥ್ ನರಾಯಣ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ಇನ್ನು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲ, ಜಾಮೀನು ನೀಡಬಹುದಾದ ಪ್ರಕರಣವಾದ್ದರಿಂದ ತಡೆ ಬೇಡ ಎಂದು ವಾದಿಸಿದರು. ಈ ವಾದ ವಿವಾದ ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ಎಫ್​ಐಆರ್​ಗೆ​ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಇದನ್ನೂ ಓದಿ: ಅಶ್ವತ್ಥ ನಾರಾಯಣ ವಿರುದ್ಧದ ಪ್ರಕರಣ ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

ಏನಿದು ಪ್ರಕರಣ?:

2023ರ ಫೆ.15ರಂದು ಮಂಡ್ಯದ ಸಾತನೂರಿನ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಂದು ಸಚಿವರಾಗಿದ್ದ ಅಶ್ವತ್ಥನಾರಾಯಣ ((Dr CN ashwath naryana)) ಅವರು, ಟಿಪ್ಪುವನ್ನು ಉರಿಗೌಡ-ನಂಜೇಗೌಡರು(Urigowda Nanjegowda) ಮುಗಿಸಿದಂತೆ ಸಿದ್ದರಾಮಯ್ಯ(Siddaramaiah) ಅವರನ್ನು ಹೊಡೆದುಹಾಕಿ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಮೈಸೂರಿನ ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ ಅವರು ಫೆ.17ರಂದು ದೂರು ನೀಡಿದ್ದರು. ಆ ದೂರು ಆಧರಿಸಿ ಮ. 24ರಂದು ಮೈಸೂರಿನ ದೇವರಾಜ ಠಾಣಾ ಪೊಲೀಸರು, ಕ್ರಿಮಿನಲ್‌ ಬೆದರಿಕೆ ಹಾಗೂ ಗಲಭೆಗೆ ಪ್ರಚೋದನೆ ನೀಡಿದ ಅಪರಾಧ ಸಂಬಂಧ ಎಫ್‌ಐಆರ್‌ ದಾಖಲಿಸಿದ್ದರು. ಆ ನಂತರ ಪ್ರಕರಣವನ್ನು ಮಂಡ್ಯ ಠಾಣೆಗೆ ವರ್ಗಾಯಿಸಲಾಗಿತ್ತು.

Published On - 1:04 pm, Tue, 30 May 23

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ