AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಕೋರ್ಟ್ ತಡೆ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​ ವಿರುದ್ಧ ವಿರುದ್ಧ ರಾಜ್ಯ ಸರ್ಕಾರ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ಅವರನ್ನು ನೇಮಕ ಮಾಡಿದ್ದು, ಇದೀಗ ಈ ನೇಮಕಾತಿಗೆ ಕರ್ನಾಟಕ ಹೈಕೋರ್ಟ್​ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಕೋರ್ಟ್ ತಡೆ
ರಮೇಶ್​ ಎಮ್​.
| Edited By: |

Updated on: Apr 08, 2024 | 3:51 PM

Share

ಬೆಂಗಳೂರು, (ಏಪ್ರಿಲ್ 08): ಮುಸ್ಲಿಂ ಮಹಿಳೆಯರ ‘ಶಾಶ್ವತ ಗಂಡ’ ಎನ್ನುವ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ (kalladka prabhakar bhat) ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್ (Karnataka High Court) ತಡೆಯಾಜ್ಞೆ ನೀಡಿದೆ. ಮುಸ್ಲಿಂ ಮಹಿಳೆಯರ ಬಗ್ಗೆ ಹೇಳಿಕೆ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಈ ನೇಮಕ ಪ್ರಶ್ನಿಸಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಏಪ್ರಿಲ್ 08) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಕೇಸ್, ಪ್ರಭಾಕರ್ ಭಟ್​ಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್

ಏನಿದು ಪ್ರಭಾಕರ ಭಟ್ಟರ ಪ್ರಕರಣ ?

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ’ ಎಂದು ಭಟ್ ಹೇಳಿದ್ದರು. ಇನ್ನು ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಲಾಗಿದೆ. ಇದೀಗ ಈ ಎಫ್​ಐಆರ್ ರದ್ದು ಕೋರಿ ಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!