AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Hijab Row: ಇತ್ಯರ್ಥವಾಗದ ವಿವಾದ; ಹಿಜಾಬ್ ವಿಚಾರಣೆ ಫೆ 9ರ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್

ಹಿಜಾಬ್ ವಿವಾದ ಸಂಬಂಧಿಸಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಾಳೆ (ಫೆಬ್ರವರಿ 8) ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ. ಬುಧವಾರ ಸರ್ಕಾರ ಹಾಗೂ ಮಧ್ಯಂತರ ಅರ್ಜಿದಾರರ ವಾದವನ್ನು ಹೈಕೋರ್ಟ್ ಆಲಿಸಲಿದೆ.

Karnataka Hijab Row: ಇತ್ಯರ್ಥವಾಗದ ವಿವಾದ; ಹಿಜಾಬ್ ವಿಚಾರಣೆ ಫೆ 9ರ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 08, 2022 | 11:01 PM

Share

ಬೆಂಗಳೂರು: ಹಿಜಾಬ್ ವಿವಾದ ಸಂಬಂಧಿಸಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಫೆ 9) ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ. ಬುಧವಾರ ಸರ್ಕಾರ ಹಾಗೂ ಮಧ್ಯಂತರ ಅರ್ಜಿದಾರರ ವಾದವನ್ನು ಹೈಕೋರ್ಟ್ ಆಲಿಸಲಿದೆ. ಅರ್ಜಿದಾರರ ಸಂಪೂರ್ಣ ವಾದ ಕೇಳಿದ್ದೇನೆ. ಎಲ್ಲ ಜನರೂ ಒಳ್ಳೆಯ ಜನರೆಂದೇ ಭಾವಿಸಿದ್ದೇನೆ. ಕೆಲವರಷ್ಟೇ ಶಾಂತಿಗೆ ಭಂಗ ತರುವವರು. ವಿದ್ಯಾರ್ಥಿಗಳು ಹೊಡೆದಾಟದಲ್ಲಿ ತೊಡಗುವುದು ಸರಿಯಲ್ಲ. ಶಾಂತಿ ಭಂಗದ ಚಟುವಟಿಕೆಯಲ್ಲಿ ತೊಡಗದಂತೆ ಮನವಿ ಮಾಡುತ್ತೇನೆ ಎಂದು ಹೈಕೋರ್ಟ್ ನ್ಯಾ.ಕೃಷ್ಣ ದೀಕ್ಷಿತ್ ಮನವಿ ಮಾಡಿಕೊಂಡಿದ್ದಾರೆ. ಅರ್ಜಿದಾರರ ಪರವಾಗಿ ದೇವದತ್ ಕಾಮತ್ ಹಾಗೂ ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದಾರೆ.

ವಾದ ವಿವಾದದ ವೇಳೆ, ಸರ್ಕಾರದ ಕ್ರಮ ಸಂವಿಧಾನದ 25(1) ರ ವಿಧಿಗೆ ವಿರುದ್ಧವಾಗಿದೆ. ಹಿಜಾಬ್ ಮುಸ್ಲಿಂ ಹೆಣ್ಣುಮಕ್ಕಳ ಅತ್ಯಗತ್ಯ ಭಾಗವಾಗಿದೆ. ಕಾನೂನು ಸುವ್ಯವಸ್ಥೆಯ ಹೆಸರಲ್ಲಿ ನಿರ್ಬಂಧ ಸರಿಯಲ್ಲ. ಸರ್ಕಾರಕ್ಕೆ ಈ ಆದೇಶ ಹೊರಡಿಸುವ ಅಧಿಕಾರವಿಲ್ಲ. ವಿಚಾರಣೆ ಇನ್ನಷ್ಟು ಕಾಲ ಹಿಡಿಯುವ ಸಾಧ್ಯತೆಯಿದೆ. ಹೀಗಾಗಿ ಹಿಜಾಬ್ ನೊಂದಿಗೆ ಕಾಲೇಜಿಗೆ ತೆರಳಲು ಅನುಮತಿ ನೀಡಿ. ಹೈಕೋರ್ಟ್ ತೀರ್ಪಿನವರೆಗೆ ಅನುಮತಿ ನೀಡಿ ಎಂದು ಅರ್ಜಿದಾರರು ಇಂದು ಕೇಳಿದ್ದರು.

ಬೇರೆ ಬೇರೆ ಧರ್ಮಗಳಿಗೆ ಗೌರವ ನೀಡುವುದು ಜಾತ್ಯಾತೀತತೆ. ನಾಮ, ಕ್ರಾಸ್, ಹಿಜಾಬ್ ಧರಿಸುವುದು ಜಾತ್ಯಾತೀತತೆಗೆ ಪೂರಕವಾಗಿದೆ. ಧಾರ್ಮಿಕ ಅಸ್ಪೃಶ್ಯತೆಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ನಿನ್ನೆ ಹಿಜಾಬ್ ಧರಿಸಿದ್ದವರನ್ನು ಪ್ರತ್ಯೇಕವಾಗಿ ಕೂರಿಸಿದ್ದರು ಎಂಬ ದೇವದತ್ ಕಾಮತ್ ವಾದಕ್ಕೆ ಎಜಿ ಪ್ರಭುಲಿಂಗ್ ನಾವದಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅರ್ಜಿದಾರರು ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆಂದು ಆಕ್ಷೇಪ ವ್ಯಕ್ತಪಡಿಸಲಾಗಿದೆ. ನಾನು ವಾದ ಮುಗಿಸಿದ ನಂತರ ನಿಮ್ಮದು ಹೇಳಿ ಎಂದು ದೇವದತ್ ಕಾಮತ್ ಹೇಳಿದ್ದಾರೆ. ದೆಹಲಿಯಲ್ಲಿ ಈಗ ಬಿಸಿಲು ಜೋರಿದೆಯೇ ಎಂದು ಕೋರ್ಟ್ ಪ್ರಶ್ನಿಸಿದೆ. ನ್ಯಾ.ಕೃಷ್ಣ ದೀಕ್ಷಿತ್ ವಾತಾವರಣ ತಿಳಿಗೊಳಿಸಿದ್ದರು.

ಸಿಖ್ಖರಿಗೆ ಪಂಚಕಗಳನ್ನು ಕಡ್ಡಾಯ ಮಾಡಲಾಗಿದೆ. ಗುರು ಗ್ರಂಥ ಸಾಹೀಬದಲ್ಲಿ ಇದನ್ನು ಉಲ್ಲೇಖಿಸಲಾಗಿದೆ. ಕೇಶ್, ಕಂಗನ್, ಖಡಾ, ಕಚ್ಚಾ, ಕೃಪಾನ್ ಕಡ್ಡಾಯ ಇದು ಸಿಖ್ಖರ ಅತ್ಯಗತ್ಯ ಧಾರ್ಮಿಕ ಆಚರಣೆ. ಇದೇ ರೀತಿ ಹಿಜಾಬ್ ಕೂಡಾ ಅತ್ಯಗತ್ಯ ಧಾರ್ಮಿಕ ಆಚರಣೆಯೇ ಎಂದು ಅರ್ಜಿದಾರರಿಗೆ ನ್ಯಾ.ಕೃಷ್ಣ ಎಸ್ ದೀಕ್ಷಿತ್ ಪ್ರಶ್ನೆ ಮಾಡಿದ್ದರು.

ಕೇರಳ ಹೈಕೋರ್ಟ್​ನ ಮತ್ತೊಂದು ತೀರ್ಪಿನ ಉಲ್ಲೇಖ ಮಾಡಲಾಗಿದೆ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಹಿಜಾಬ್ ನಿರ್ಬಂಧಿಸಿತ್ತು. ಹಿಜಾಬ್ ನಿರ್ಬಂಧವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಖಾಸಗಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗೆ ಹೆಚ್ಚಿನ ಹಕ್ಕಿದೆ. ಹೈಕೋರ್ಟ್ ತೀರ್ಪು ಸರ್ಕಾರಕ್ಕೆ ಅನುಕೂಲಕರವಾಗಿಲ್ಲ. ಸರ್ಕಾರ ಹಾಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗೆ ವ್ಯತ್ಯಾಸವಿದೆ ಎಂದು ಅರ್ಜಿದಾರರ ಪರ ದೇವದತ್ ಕಾಮತ್ ವಾದ ನಡೆಸಿದ್ದರು.

ಕಾನೂನು ಪ್ರಕಾರ ವಿಚಾರಣೆ ನಡೆಸೋಣ. ಎಲ್ಲಾ ಭಾವನೆಗಳನ್ನು ಹೊರಗಿಡಿ. ಸಂವಿಧಾನವೇ ಭಗವದ್ಗೀತೆ  ಇದ್ದಂತೆ. ಹೀಗಾಗಿ ಸಂವಿಧಾನದ ಪ್ರಕಾರ ವಿಚಾರಣೆ ನಡೆಸೋಣ ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅಭಿಪ್ರಾಯಪಟ್ಟಿದ್ದರು. ಇದೀಗ, ಹಿಜಾಬ್ ವಿವಾದ ಸಂಬಂಧಿಸಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಫೆಬ್ರವರಿ 9) ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ. ಸರ್ಕಾರ ಹಾಗೂ ಮಧ್ಯಂತರ ಅರ್ಜಿದಾರರ ವಾದವನ್ನು ಬುಧವಾರ ಮತ್ತೆ  ಹೈಕೋರ್ಟ್ ಆಲಿಸಲಿದೆ. ಮುಂದಿನ ತೀರ್ಪಿಗಾಗಿ ಕಾದುನೋಡಬೇಕಿದೆ.

ಇದನ್ನೂ ಓದಿ: Hijab Row Hearing Live: ವಿಚಾರಣೆ ಮುಂದೂಡಿದ ಹೈಕೋರ್ಟ್; 3 ದಿನ ಕಾಲೇಜುಗಳಿಗೆ ರಜೆ ಘೋಷಣೆ

ಇದನ್ನೂ ಓದಿ: Hijab Row: ಶಿವಮೊಗ್ಗದಲ್ಲಿ ತಾರಕಕ್ಕೇರಿದ ಕೇಸರಿ ಶಾಲು- ಹಿಜಾಬ್ ಗಲಾಟೆ; ರಾಷ್ಟ್ರಧ್ವಜ ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ ವಿದ್ಯಾರ್ಥಿ

Published On - 4:40 pm, Tue, 8 February 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ