AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿಗೆ ಟ್ರಾಫಿಕ್ ಬಿಸಿ; ನೆರವಾದ ಪೊಲೀಸರು

ಮೆಜೆಸ್ಟಿಕ್​ನಿಂದ ಕೋರಮಂಗಲಕ್ಕೆ ತೆರಳಲು ಪರದಾಡಿದ ವಿದ್ಯಾರ್ಥಿಯೊಬ್ಬನಿಗೆ ಪೊಲೀಸರು ಸಹಾಯ ಮಾಡಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಸಿಇಟಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿಗೆ ಟ್ರಾಫಿಕ್ ಬಿಸಿ; ನೆರವಾದ ಪೊಲೀಸರು
ಸಿಇಟಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿಗೆ ಟ್ರಾಫಿಕ್ ಬಿಸಿ; ನೆರವಾದ ಪೊಲೀಸರು
Ganapathi Sharma
|

Updated on:May 20, 2023 | 6:03 PM

Share

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ನಗರದ ಹಲವೆಡೆ ಟ್ರಾಫಿಕ್ ಶನಿವಾರ ಜಾಮ್ ಉಂಟಾಯಿತು. ಇದರಿಂದ ಸಿಇಟಿ ಪರೀಕ್ಷೆ ಬರೆಯಲು ತೆರಳಿದ ಕೆಲವು ವಿದ್ಯಾರ್ಥಿಗಳೂ ತೊಂದರೆ ಅನುಭವಿಸಿದರು. ಈ ಮಧ್ಯೆ, ಮೆಜೆಸ್ಟಿಕ್​ನಿಂದ ಕೋರಮಂಗಲಕ್ಕೆ ತೆರಳಲು ಪರದಾಡಿದ ವಿದ್ಯಾರ್ಥಿಯೊಬ್ಬನಿಗೆ ಪೊಲೀಸರು ಸಹಾಯ ಮಾಡಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಕಂಠೀರವ ಸ್ಟಡೀಯಂ ಸುತ್ತಮುತ್ತ ಭಾರಿ ಟಾಫ್ರಿಕ್ ಜಾಮ್ ಇತ್ತು. ಪರಿಣಾಮವಾಗಿ ಮೆಜೆಸ್ಟಿಕ್‌ನಿಂದ ಕೋರಮಂಗಲಕ್ಕೆ ಪರೀಕ್ಷಾ ಕೇಂದ್ರಕ್ಕೆ ಹೋಗಬೇಕಿದ್ದ ವಿದ್ಯಾರ್ಥಿ ಶರವಣ ಕುಮಾರ್‌ಗೆ ಸಮಸ್ಯೆಯಾಗಿತ್ತು. ವಿದ್ಯಾರ್ಥಿ ಶರವಣ ಕುಮಾರ್‌ಗೆ ಸಹಾಯ ಮಾಡಿದ ಪೋಲೀಸರು ಕೇವಲ 15 ನಿಮೀಷದಲ್ಲಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿಬಿಟ್ಟರು. ಹೊಯ್ಸಳ ಚಾಲಕ ಎಸ್.ಟಿ.ಸೋಮಶೇಖರ್, ಹೆಡ್ ಕಾನ್‌ಸ್ಟೆಬಲ್ ಗೌರೀಶ್ ನೇತೃತ್ವದಲ್ಲಿ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲಾಯಿತು.

ವಿದ್ಯಾರ್ಥಿ ಸರವಣ ಕುಮಾರ್ ಮೆಜೆಸ್ಟಿಕ್‌ನಲ್ಲಿ ಸಿಲುಕಿಕೊಂಡಿದ್ದು, ಕೋರಮಂಗಲದಲ್ಲಿರುವ ತನ್ನ ಪರೀಕ್ಷಾ ಕೇಂದ್ರಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಪರೀಕ್ಷಾ ಕೇಂದ್ರ 10-11 ಕಿಮೀ ದೂರದಲ್ಲಿರುವುದನ್ನು ಗಮನಿಸಿದ ಹೊಯ್ಸಳ ಪೊಲೀಸರು ಆತನ ನೆರವಿಗೆ ಧಾವಿಸಿದ್ದಾರೆ.

ಇದನ್ನೂ ಓದಿ: Karnataka CM Oath Taking: ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ

ಪ್ರಮಾಣವಚನ ಸ್ವೀಕಾರ ಸಮಾರಂಭದ ಪ್ರಯುಕ್ತ ಹಲವೆಡೆ ವಾಹನ ಸಂಚಾರ ಮಾರ್ಗದಲ್ಲಿ‌ ಬದಲಾವಣೆ ಮಾಡಲಾಗಿತ್ತು. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿತ್ತು. ಈ ಮಧ್ಯೆ, ಸಿಇಟಿ ಪರೀಕ್ಷೆಗೆ ತೆರಳುವ ಯಾವುದೇ ವಿದ್ಯಾರ್ಥಿಗೆ ಸಂಚಾರ ಸಂಬಂಧಿತ ಸಹಾಯ ಬೇಕಿದ್ದಲ್ಲಿ, ರಸ್ತೆಯಲ್ಲಿ ಕರ್ತವ್ಯನಿರತ ಸಂಚಾರ ಪೊಲೀಸರನ್ನು ಸಂಪರ್ಕಿಸುವಂತೆ ಸಲಹೆ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Sat, 20 May 23

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!