AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಚ್ಚಿಬೀಳಿಸುವಂತಿದೆ ಗೃಹ ಇಲಾಖೆಯ ವರದಿ: ರಾಜ್ಯದಲ್ಲಿರುವ ಅಕ್ರಮ ವಲಸಿಗರ ಸಂಖ್ಯೆ ಎಷ್ಟು ಗೊತ್ತಾ?

Illegal Immigrants: ರಾಜ್ಯ ಗೃಹ ಇಲಾಖೆ ಸಿದ್ಧಪಡಿಸಿದ ಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ ಒಟ್ಟು 13,675 ಅಕ್ರಮ ವಲಸಿಗರು ಪತ್ತೆಯಾಗಿದ್ದು, ರಾಜಧಾನಿ ಬೆಂಗಳೂರು ನಗರವೊಂದರಲ್ಲೇ 10,650 ಕ್ಕೂ ಹೆಚ್ಚು ಮಂದಿ ಇರುವುದು ಬೆಳಕಿಗೆ ಬಂದಿದೆ. ಮತ್ತೊಂದೆಡೆ ಮೈಸೂರಿಗೆ ಕಳೆದವಾರ ಅಕ್ರಮ ಬಾಂಗ್ಲಾ ವಲಸಿಗರು ಬಂದಿರುವ ಬಗ್ಗೆ ವದಂತಿ ಉಂಟಾಗಿದ್ದ ಹಿನ್ನೆಲೆ ಎಚ್ಚೆತ್ತ ರೈಲ್ವೆ ಪೊಲೀಸರು ಪಶ್ಚಿಮ ಬಂಗಾಳದಿಂದ ಆಗಮಿಸಿದ ಹೌರಾ ಎಕ್ಸ್‌ಪ್ರೆಸ್‌‌‌ ರೈಲಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

ಬೆಚ್ಚಿಬೀಳಿಸುವಂತಿದೆ ಗೃಹ ಇಲಾಖೆಯ ವರದಿ: ರಾಜ್ಯದಲ್ಲಿರುವ ಅಕ್ರಮ ವಲಸಿಗರ ಸಂಖ್ಯೆ ಎಷ್ಟು ಗೊತ್ತಾ?
ಅಕ್ರಮ ವಲಸಿಗರುImage Credit source: Tv9 Kannada
ರಾಚಪ್ಪಾಜಿ ನಾಯ್ಕ್
| Edited By: |

Updated on:Jun 28, 2026 | 9:20 AM

Share

ಮುಖ್ಯಾಂಶಗಳು

  • ರಾಜ್ಯದಲ್ಲಿದ್ದಾರೆ ಬರೋಬ್ಬರಿ 13 ಸಾವಿರಕ್ಕೂ ಹೆಚ್ಚು ಅಕ್ರಮ ವಲಸಿಗರು
  • ಬೆಂಗಳೂರಿಗೆ ರಾಜ್ಯದಲ್ಲಿ ಮೊದಲನೇ ಸ್ಥಾನ, ಮೈಸೂರಿಗೆ 2ನೇ ರ್ಯಾಂಕ್​​
  • ಮೈಸೂರು ರೈಲ್ವೆ ನಿಲ್ದಾಣದಲ್ಲಿ ಪೊಲೀಸರಿಂದ ತೀವ್ರ ತಪಾಸಣೆ

ಬೆಂಗಳೂರು/ಮೈಸೂರು, ಜೂನ್​​ 28: ರಾಜ್ಯ ಗೃಹ ಇಲಾಖೆ ಅಕ್ರಮ ವಲಸಿಗರ ಪಟ್ಟಿ ರೆಡಿ ಮಾಡಿದ್ದು, ಕರ್ನಾಟಕದಲ್ಲಿ ಒಟ್ಟು 13,675 ಅಕ್ರಮ ವಲಸಿಗರು ಇರುವುದು ಪತ್ತೆಯಾಗಿದೆ. ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಕ್ರಮ ವಲಸಿಗರು ಇರೋದು ಗೊತ್ತಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿಯೇ ಅತಿಹೆಚ್ಚು ಅಂದರೆ ಬರೋಬ್ಬರಿ 10 ಸಾವಿರಕ್ಕೂ ಅಧಿಕ ಅಕ್ರಮ ವಲಸಿಗರಿದ್ದಾರೆ. ನಂತರದ ಸ್ಥಾನಗಳಲ್ಲಿ ಮೈಸೂರು, ಉತ್ತರ ಕನ್ನಡ, ಉಡುಪಿ ಮತ್ತು ಬೆಳಗಾವಿ ಜಿಲ್ಲೆಗಳಿವೆ ಎಂಬುದು ಬೆಳಕಿಗೆ ಬಂದಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಅಕ್ರಮ ವಲಸಿಗರು?

ಜಿಲ್ಲೆ ಸಂಖ್ಯೆ
ಬೆಂಗಳೂರು ನಗರ 10650
ಬೆಳಗಾವಿ 458
ಬಳ್ಳಾರಿ 53
ಚಾಮರಾಜನಗರ 3
ಚಿಕ್ಕಬಳ್ಳಾಪುರ 38
ಚಿತ್ರದುರ್ಗ 8
ದಕ್ಷಿಣ ಕನ್ನಡ 268
ದಾವಣಗೆರೆ 20
ಹಾಸನ 5
ಹುಬ್ಬಳ್ಳಿ/ಧಾರವಾಡ 35
ಕಲಬುರಗಿ 9
ಕೋಲಾರ 13
ಕೊಡಗು 10
ಕೊಪ್ಪಳ 10
ಮಂಡ್ಯ 37
ಮೈಸೂರು 810
ರಾಯಚೂರು 19
ರಾಮನಗರ 191

ಇದನ್ನೂ ಓದಿ: ಮಾಸ್ತಿ ಗ್ರಾಮದಲ್ಲಿ ಏಕಾಏಕಿ ನೂರಾರು ವಲಸಿಗರು! ಬಾಂಗ್ಲಾದಿಂದ ಬಂದವರೆಂಬ ಶಂಕೆ

ಮೈಸೂರಲ್ಲಿ ರೈಲ್ವೆ ಪೊಲೀಸರು ಅಲರ್ಟ್​

ಮೈಸೂರಿಗೆ ಬಾಂಗ್ಲಾ ವಲಸಿಗರು ಬರುತ್ತಿದ್ದಾರೆಂಬ ವದಂತಿ ವಿಚಾರ ಹಿನ್ನೆಲೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಅಲರ್ಟ್​ ಆಗಿದ್ದಾರೆ. ಪಶ್ಚಿಮ ಬಂಗಾಳದಿಂದ ಆಗಮಿಸಿದ ಹೌರಾ ಎಕ್ಸ್‌ಪ್ರೆಸ್‌‌‌ನಲ್ಲಿ ಪರಿಶೀಲನೆ ನಡೆಸಲಾಗಿದೆ. ಕಳೆದ ಪಶ್ಚಿಮ ಬಂಗಾಳದಿಂದ ಬಂದವರನ್ನು ವಲಸಿಗರು ಎಂದು ಹೇಳಿ ಹಿಂದೂ ಕಾರ್ಯಕರ್ತರು ಆರೋಪಿಸಿದ್ದ ಕಾರಣ ಭಾರಿ ಹೈಡ್ರಾಮಾ ನಡೆದಿತ್ತು. ಆದರೆ ದಾಖಲೆ ಪರಿಶೀಲನೆ ವೇಳೆ ಯಾವುದೇ ಬಾಂಗ್ಲಾ ವಲಸಿಗರು ಪತ್ತೆಯಾಗಿರಲಿಲ್ಲ. ಹೀಗಾಗಿ ವದಂತಿ ತಪ್ಪಿಸಲು ಈ ಬಾರಿ ಪರಿಶೀಲನೆಗೆ ಸ್ವತಃ ರೈಲ್ವೆ ಪೊಲೀಸರೇ ಮುಂದಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:58 am, Sun, 28 June 26

Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!