AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್‌ನಲ್ಲಿ ಗೆದ್ದರೂ ಸಿಗದ ಸರ್ಕಾರಿ ಕೆಲಸ: ಒಂದು ದಶಕದಿಂದ ಕರ್ನಾಟಕದ ಮೂವರ ನಿರಂತರ ಹೋರಾಟ!

ನಗರಾಭಿವೃದ್ಧಿ ಇಲಾಖೆಯ ವರ್ಕ್ ಇನ್ಸ್‌ಪೆಕ್ಟರ್ ಹುದ್ದೆಗೆ ಆಯ್ಕೆಯಾಗಿದ್ದ ಕರ್ನಾಟಕದ ಮೂವರು ಅಭ್ಯರ್ಥಿಗಳು ಹೈಕೋರ್ಟ್‌ನಲ್ಲಿ ಮೊಕದ್ದಮೆ ಗೆದ್ದರೂ ಉದ್ಯೋಗ ಸಿಗದೆ ದಶಕದಿಂದ ಹೋರಾಡುತ್ತಿದ್ದಾರೆ. ಕೋರ್ಟ್ ನೀಡಿದ್ದ ಎರಡು ತಿಂಗಳ ಗಡುವು ಮುಗಿದರೂ ನೇಮಕಾತಿ ಆದೇಶ ನೀಡದ ಸರ್ಕಾರದ ನಡೆಗೆ ಅಭ್ಯರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋರ್ಟ್‌ನಲ್ಲಿ ಗೆದ್ದರೂ ಸಿಗದ ಸರ್ಕಾರಿ ಕೆಲಸ: ಒಂದು ದಶಕದಿಂದ ಕರ್ನಾಟಕದ ಮೂವರ ನಿರಂತರ ಹೋರಾಟ!
ಕರ್ನಾಟಕ ಉಚ್ಛ ನ್ಯಾಯಾಲಯImage Credit source: Karnataka High court website
ಭಾವನಾ ಹೆಗಡೆ
|

Updated on: Jul 04, 2026 | 3:13 PM

Share

ಮುಖ್ಯಾಂಶಗಳು

  • ವರ್ಕ್ ಇನ್ಸ್‌ಪೆಕ್ಟರ್ ಹುದ್ದೆಗೆ ಆಯ್ಕೆಯಾಗಿದ್ದರೂ ೧೦ ವರ್ಷಗಳಿಂದ ಸಿಗದ ನೇಮಕಾತಿ.
  • ಅಭ್ಯರ್ಥಿಗಳ ಪರವಾಗಿ ಆದೇಶಿಸಿದ್ದರೂ ಕೋರ್ಟ್ ಗಡುವು ಮೀರಿದ ಸರ್ಕಾರ.
  • ವಯೋಮಿತಿ ಮೀರಿ ಸಂಕಷ್ಟದಲ್ಲಿರುವ ಅಭ್ಯರ್ಥಿಗಳಿಂದ ಸಚಿವ ಯತೀಂದ್ರ ಅವರಿಗೆ ಮನವಿ.

ಬೆಂಗಳೂರು, ಜುಲೈ 04: ಸರ್ಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಿ ತೇರ್ಗಡೆಯಾಗಿದ್ದರೂ, ಕಳೆದ ಹತ್ತು ವರ್ಷಗಳಿಂದ ಮೂವರು ಅಭ್ಯರ್ಥಿಗಳು ಕೆಲಸಕ್ಕಾಗಿ ಕೋರ್ಟ್ ಮತ್ತು ಸರ್ಕಾರಿ ಕಚೇರಿಗಳ ನಡುವೆ ಅಲೆಯುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್ (High Court) ಇವರ ಪರವಾಗಿ ಸ್ಪಷ್ಟ ಆದೇಶ ನೀಡಿದ್ದರೂ, ಇಂದಿಗೂ ಇವರಿಗೆ ನೇಮಕಾತಿ ಆದೇಶ ಪತ್ರ ಕೈಸೇರಿಲ್ಲ.

ಕಾನೂನು ಹೋರಾಟಕ್ಕಿಳಿದ ಅಭ್ಯರ್ಥಿಗಳು

ರಾಮನಗರ ಜಿಲ್ಲೆಯ ಹರೀಶ್ ಕುಮಾರ್ ಎಚ್.ಪಿ., ಕೊಪ್ಪಳ ಜಿಲ್ಲೆಯ ವಿಶ್ವನಾಥ್ ಮತ್ತು ವಿಜಯಪುರ ಜಿಲ್ಲೆಯ ಹಂಪಣ್ಣ ಕೊಲಕಾರ್ ಈ ಮೂವರೂ ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ‘ವರ್ಕ್ ಇನ್ಸ್‌ಪೆಕ್ಟರ್’ (Work Inspector) ಹುದ್ದೆಗೆ ಆಯ್ಕೆಯಾಗಿದ್ದರು. ಇಲಾಖೆಯು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ ಹೊರತಾಗಿಯೂ, ಕೆಲವು ಆಡಳಿತಾತ್ಮಕ ಕಾರಣಗಳನ್ನು ಮುಂದಿಟ್ಟುಕೊಂಡು ಇವರಿಗೆ ನೇಮಕಾತಿ ಪತ್ರ ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಈ ಮೂವರು ಅಭ್ಯರ್ಥಿಗಳು ಕಾನೂನು ಹೋರಾಟ ಆರಂಭಿಸಿದ್ದರು.

ಹೈಕೋರ್ಟ್ ಆದೇಶಕ್ಕೂ ಬೆಲೆಯಿಲ್ಲವೇ?

ಸುದೀರ್ಘ ಹೋರಾಟದ ನಂತರ, 2026 ಮಾರ್ಚ್ 23ರಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಅಭ್ಯರ್ಥಿಗಳ ಪರವಾಗಿ ಮಹತ್ವದ ತೀರ್ಪು ನೀಡಿತು. “ಸಂಬಂಧಪಟ್ಟ ವೃಂದವನ್ನು (Cadre) ಸರ್ಕಾರ ತಿದ್ದುಪಡಿಗಳ ಮೂಲಕ ರದ್ದುಗೊಳಿಸಿದ್ದರೂ, ಅರ್ಜಿದಾರರಿಗೆ ಉದ್ಯೋಗ ನಿರಾಕರಿಸುವಂತಿಲ್ಲ. ಅವರನ್ನು ತತ್ಸಮಾನ ಹುದ್ದೆಗಳಲ್ಲಿ ನಿಯೋಜಿಸಬೇಕು” ಎಂದು ತಿಳಿಸಿದ ಕೋರ್ಟ್, ಎರಡು ತಿಂಗಳ ಒಳಗಾಗಿ ಇವರಿಗೆ ನೇಮಕಾತಿ ಆದೇಶ ನೀಡುವಂತೆ ಸರ್ಕಾರಕ್ಕೆ ಗಡುವು ವಿಧಿಸಿತ್ತು. ಆದರೆ, ಆ ಗಡುವು ಮುಗಿದರೂ ತಾಂತ್ರಿಕ ಕಾರಣಗಳನ್ನು ಹೇಳಿ ಅಧಿಕಾರಿಗಳು ಪ್ರಕ್ರಿಯೆಯನ್ನು ಮುಂದೂಡುತ್ತಿದ್ದಾರೆ.

ಅಭ್ಯರ್ಥಿಗಳ ಅಳಲು

ಈ ಸುದೀರ್ಘ ಕಾನೂನು ಹೋರಾಟದ ನಡುವೆ ನಾವು ಇತರೆ ಸರ್ಕಾರಿ ಕೆಲಸಗಳಿಗೆ ಅರ್ಜಿ ಸಲ್ಲಿಸುವ ವಯೋಮಿತಿಯನ್ನು ಮೀರಿದ್ದೇವೆ. ಇದರಿಂದ ಬೇರೆ ಉದ್ಯೋಗದ ಅವಕಾಶಗಳೂ ನಮಗೆ ಬಂದ್ ಆಗಿವೆ. ಹಣಕಾಸಿನ ಮುಗ್ಗಟ್ಟು, ಕುಟುಂಬದ ಜವಾಬ್ದಾರಿಗಳ ಮಧ್ಯೆ ಬೆಂಗಳೂರಿನ ಕೋರ್ಟ್‌ಗೆ ಅಲೆದಾಡಿ ಸುಸ್ತಾಗಿದ್ದೇವೆ ಎಂದು ಈ ಮೂವರೂ ಅಳಲು ತೋಡಿಕೊಂಡಿದ್ದಾರೆ.

ಸದ್ಯ ಅಭ್ಯರ್ಥಿಗಳು ಹೊಸ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ನಾವು ಈಗ ಕೇವಲ ಕೆಲಸಕ್ಕಾಗಿ ಹೋರಾಡುತ್ತಿಲ್ಲ, ನಮಗಾದ ಅನ್ಯಾಯದ ವಿರುದ್ಧದ ನ್ಯಾಯ ಮತ್ತು ಘನತೆಗಾಗಿ ಹೋರಾಡುತ್ತಿದ್ದೇವೆ ಎಂದು ಕಣ್ಣೀರಿಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
Video: ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು!
Video: ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು!
ಇಂದು ಈ ರಾಶಿಯವರಿಗೆ ಸಾಲದಿಂದ ಮುಕ್ತಿ
ಇಂದು ಈ ರಾಶಿಯವರಿಗೆ ಸಾಲದಿಂದ ಮುಕ್ತಿ
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!