AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2023: ಕೇಂದ್ರ ಬಜೆಟ್​ ಬಗ್ಗೆ ರಾಜ್ಯ ನಾಯಕರು ಏನು ಹೇಳಿದರು?

ಕೇಂದ್ರ ಬಜೆಟ್​ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧನ್ಯವಾದ ತಿಳಿಸಿದ್ದಾರೆ.

Union Budget 2023: ಕೇಂದ್ರ ಬಜೆಟ್​ ಬಗ್ಗೆ ರಾಜ್ಯ ನಾಯಕರು ಏನು ಹೇಳಿದರು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Feb 01, 2023 | 2:11 PM

Share

ಬೆಂಗಳೂರು: ಇಂದು (ಫೆ.1) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ (Nirmala Sitharaman) ಬಜೆಟ್​ (Union Budget) ಘೋಷಣೆ ಮಾಡಿದ್ದು, ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್​​ನಲ್ಲಿ 5,300 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸಂಸತಸ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. “ಈ ಸಾಲಿನ ಕೇಂದ್ರ ಬಜೆಟ್​ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು.” ಎಂದು ಟ್ವೀಟ್​ ಮಾಡಿದ್ದಾರೆ.

ಈ ಯೋಜನೆಯಿಂದ ಬರಗಾಲ ಪೀಡಿತ ಬಿಸಿಲು ಪ್ರದೇಶದ ನಾಡಿಗೆ ನೀರಾವರಿಗೆ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ತಸ್ತಾವನೆ ಕಳಿಸಿದ್ದೆವು. ಈ ಯೋಜನೆ ಬಹಳ ಪ್ರಮುಖವಾಗಿದೆ. ಇಷ್ಟು ದೊಡ್ಡ ಪ್ರಮಾಣದ ಅನುನಾದ ಘೋಷಣೆ ಮಾಡಿದ್ದು ಸಂತಸದ ಸಂಗತಿ ಎಂದು ಹೇಳಿದ್ದಾರೆ.

ಬಜೆಟ್ ಘೋಷಣೆ ಕೇವಲ ಕಾಟಾಚಾರಕ್ಕೆ ಮಾತ್ರ

ದಾವಣಗೆರೆ: ಇಂದಿನ ಕೇಂದ್ರ ಬಜೆಟ್ ಘೋಷಣೆ ಕೇವಲ ಕಾಟಾಚಾರಕ್ಕೆ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವನ್ನು ಚುನಾವಣೆ ಹಿನ್ನೆಲೆ ತಾತ್ಕಾಲಿಕವಾಗಿ ಜನರ ಮೆಚ್ಚಿಸಲು ಘೋಷಣೆ ಮಾಡಿದ್ದಾರೆ. ಜನ ಬಿಜೆಪಿ ತಿರಸ್ಕರಿಸಿದರೆ ಎಷ್ಟು ಅನುದಾನ ನೀಡುತ್ತಾರೆಂದು ಗೊತ್ತಿದೆ. ಇಂದಿನ ಘೋಷಣೆಗಳು ಎಷ್ಟರ ಮಟ್ಟರ ಅನುಷ್ಠಾನಕ್ಕೆ ಬರುತ್ತೆ ಗೊತ್ತು. ಮುಂದಿನ ಸರ್ಕಾರ ಬಂದಾಗಲೇ ಯೋಜನೆ ಅನುಷ್ಠಾನಕ್ಕೆ ಬರುವುದು ಎಂದು ಕುಹಕವಾಡಿದರು.

ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ

ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ನೀಡಲಾಗಿದೆ. ಯೋಜನೆ ವ್ಯಾಪ್ತಿಯಿಂದ ಜನರಿಗೆ ಕುಡಿಯುವ ನೀರು, ಕೃಷಿಗೆ ಅನುಕೂಲವಾಗುತ್ತದೆ. ಕೃಷಿ, ಸಹಕಾರಿ ಕ್ಷೇತ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಯುವಕರಿಗೆ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಕ್ರಮಕೈಗೊಳ್ಳಲಾಗಿದೆ. ವೈದ್ಯಕೀಯ ಕ್ಷೇತ್ರ ಹಾಗೂ ನರ್ಸಿಂಗ್ ಕಾಲೇಜುಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ರಸ್ತೆ, ರೈಲ್ವೆ ವಲಯದ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇದರಿಂದ ರಾಜ್ಯಕ್ಕೂ ಅನುಕೂಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:10 pm, Wed, 1 February 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!