AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರ ನಿಯಮ ಉಲ್ಲಂಘನೆ, ದಂಡ ಸಂಗ್ರಹದಲ್ಲಿ ಕರ್ನಾಟಕವೇ ಮುಂದೆ: ಎಡಿಜಿಪಿ ಅಲೋಕ್ ಕುಮಾರ್

ಆಗಸ್ಟ್ 1 ರಿಂದ 9 ರವರೆಗೆ ದೇಶಾದ್ಯಂತ ವಿತರಿಸಲಾದ ಇ-ಚಲನ್​ಗಳ ವಿವರವನ್ನು ಟ್ವೀಟ್​ ಮಾಡಿರುವ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್​‘ಇ-ಚಲನ್ ಬಳಸಿ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಸಂಗ್ರಹಕ್ಕೆ ಸಂಬಂಧಿಸಿದಂತೆ ಕರ್ನಾಟಕವು ಇಡೀ ದೇಶದಲ್ಲಿ ಬಹಳ ಮುಂದಿದೆ ಎಂದು ತಿಳಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ, ದಂಡ ಸಂಗ್ರಹದಲ್ಲಿ ಕರ್ನಾಟಕವೇ ಮುಂದೆ: ಎಡಿಜಿಪಿ ಅಲೋಕ್ ಕುಮಾರ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2023 | 4:15 PM

Share

ಬೆಂಗಳೂರು, ಆಗಸ್ಟ್​ 10: ಸಂಚಾರ ನಿಯಮ ಉಲ್ಲಂಘನೆಗೆ (traffic violations) ಸಂಬಂಧಿಸಿದಂತೆ ಇ-ಚಲನ್ ಮೂಲಕ ದಂಡ ಸಂಗ್ರಹದಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಬಹಳ ಮುಂದಿದೆ. ಕರ್ನಾಟಕದಿಂದ 50% ಕ್ಕಿಂತ ಹೆಚ್ಚು ಇ-ಚಲನ್​​ ಉತ್ಪಾದನೆ ಮಾಡಲಾಗುತ್ತಿದೆ ಎಂದು ಗುರುವಾರ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್​ ತಿಳಿಸಿದ್ದಾರೆ.

ಆಗಸ್ಟ್ 1 ರಿಂದ 9 ರವರೆಗೆ ದೇಶಾದ್ಯಂತ ವಿತರಿಸಲಾದ ಇ-ಚಲನ್​ಗಳ ವಿವರವನ್ನು ಟ್ವೀಟ್​ ಮಾಡಿರುವ ಅವರು, ‘ಇ-ಚಲನ್ ಬಳಸಿ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಸಂಗ್ರಹಕ್ಕೆ ಸಂಬಂಧಿಸಿದಂತೆ ಕರ್ನಾಟಕವು ಇಡೀ ದೇಶದಲ್ಲಿ ಬಹಳ ಮುಂದಿದೆ. ಕರ್ನಾಟಕದಿಂದಲೇ ಶೇ.50ಕ್ಕೂ ಹೆಚ್ಚು ಇ-ಚಲನ್​ ನೀಡಲಾಗಿದ್ದು, ಶೀಘ್ರದಲ್ಲೇ ಇಡೀ ರಾಜ್ಯವನ್ನು ಇ-ಚಲನ್ ವ್ಯಾಪ್ತಿಗೆ ತರಲಾಗುವುದು. ಆ ಮೂಲಕ ಈಗಿರುವ ವ್ಯವಸ್ಥೆಯನ್ನು ಕೈಬಿಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಮೂರು ದಿನ ಬೆಳಗ್ಗೆ ಕೆಲ ಗಂಟೆಗಳ ಸಮಯ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಎಡಿಜಿಪಿ ಅಲೋಕ್ ಕುಮಾರ್​ ಪ್ರಕಾರ, ಆಗಸ್ಟ್ 1 ರಿಂದ 9 ರವರೆಗೆ ಕರ್ನಾಟಕವು 24,694 ಇ-ಚಲನ್​​ಗಳನ್ನು ನೀಡಲಾಗಿದೆ. ಇವರೆಗೆ ಒಟ್ಟು 1,22,92,500 ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ. ಅಪರಾಧಿಗಳಿಂದ 55,500 ರೂ. ದಂಡ ಸಂಗ್ರಹಿಸಲಾಗಿದೆ.

ಸಂಚಾರ ನಿಯಮ ಉಲ್ಲಂಘನೆಗೆ ಇ-ಚಲನ್ ಮೂಲಕ ದಂಡ ಸಂಗ್ರಹ ವಿಚಾರವಾಗಿ ಕರ್ನಾಟಕವನ್ನು ತಮಿಳುನಾಡು ಅನುಸರಿಸುತ್ತಿದ್ದು, 7,160 ಇ-ಚಲನ್‌ ದಂಡ ಸಂಗ್ರಹಿಸಲಾಗಿದೆ. 59 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಇನ್ನು ಮಹಾರಾಷ್ಟ್ರವು 4,468 ಇ-ಚಲನ್​ಗಳನ್ನು ನೀಡುವ ಮೂಲಕ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ನಾಳೆಯಿಂದ ಆಗಸ್ಟ್ 14ರ ವರೆಗೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ; ಇಲ್ಲಿದೆ ಪೂರ್ಣ ವಿವರ

ಮಿಜೋರಾಂ, ಸಿಕ್ಕಿಂ ಮತ್ತು ಇತರ ಪ್ರಾಂತ್ಯಗಳಲ್ಲಿ ಯಾವುದೇ ಇ-ಚಲನ್‌ಗಳನ್ನು ನೀಡಿಲ್ಲ. ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಲಕ್ಷದ್ವೀಪ, ಒಡಿಶಾ ಮತ್ತು ಚಂಡೀಗಢದಲ್ಲಿ ಈ ಸಂಖ್ಯೆ ಕಡಿಮೆ ಪ್ರಮಾಣದಲ್ಲಿ ಇತ್ತು.

ಕರ್ನಾಟಕ ಸರ್ಕಾರವು ಈ ವರ್ಷದ ಫೆಬ್ರವರಿಯಲ್ಲಿ ಸಂಚಾರ ಉಲ್ಲಂಘನೆಯ ಬಗ್ಗೆ ಬಾಕಿ ಇರುವ ಇ-ಚಲನ್​ ಗಳಿಗೆ ಶೇಕಡಾ 50 ರಷ್ಟು ರಿಯಾಯಿತಿಯನ್ನು ಘೋಷಿಸಿತ್ತು. ಈ ಯೋಜನೆಯನ್ನು ಜುಲೈ 5 ರಂದು ಪುನರಾರಂಭಿಸಲಾಗಿದ್ದು, ಸೆಪ್ಟೆಂಬರ್ 9ರ ವರೆಗೆ ನಿಗದಿಪಡಿಸಲಾಗಿದೆ. ಫೆಬ್ರವರಿ 11, 2023 ರಂದು ಅಥವಾ ಅದಕ್ಕಿಂತ ಮೊದಲು ದಾಖಲಾದ ಪ್ರಕರಣಗಳಿಗೆ ಈ ರಿಯಾಯಿತಿ ಅನ್ವಯಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:11 pm, Thu, 10 August 23

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!