AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರ ನಿಯಮ ಉಲ್ಲಂಘನೆ, ದಂಡ ಸಂಗ್ರಹದಲ್ಲಿ ಕರ್ನಾಟಕವೇ ಮುಂದೆ: ಎಡಿಜಿಪಿ ಅಲೋಕ್ ಕುಮಾರ್

ಆಗಸ್ಟ್ 1 ರಿಂದ 9 ರವರೆಗೆ ದೇಶಾದ್ಯಂತ ವಿತರಿಸಲಾದ ಇ-ಚಲನ್​ಗಳ ವಿವರವನ್ನು ಟ್ವೀಟ್​ ಮಾಡಿರುವ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್​‘ಇ-ಚಲನ್ ಬಳಸಿ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಸಂಗ್ರಹಕ್ಕೆ ಸಂಬಂಧಿಸಿದಂತೆ ಕರ್ನಾಟಕವು ಇಡೀ ದೇಶದಲ್ಲಿ ಬಹಳ ಮುಂದಿದೆ ಎಂದು ತಿಳಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ, ದಂಡ ಸಂಗ್ರಹದಲ್ಲಿ ಕರ್ನಾಟಕವೇ ಮುಂದೆ: ಎಡಿಜಿಪಿ ಅಲೋಕ್ ಕುಮಾರ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2023 | 4:15 PM

Share

ಬೆಂಗಳೂರು, ಆಗಸ್ಟ್​ 10: ಸಂಚಾರ ನಿಯಮ ಉಲ್ಲಂಘನೆಗೆ (traffic violations) ಸಂಬಂಧಿಸಿದಂತೆ ಇ-ಚಲನ್ ಮೂಲಕ ದಂಡ ಸಂಗ್ರಹದಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಬಹಳ ಮುಂದಿದೆ. ಕರ್ನಾಟಕದಿಂದ 50% ಕ್ಕಿಂತ ಹೆಚ್ಚು ಇ-ಚಲನ್​​ ಉತ್ಪಾದನೆ ಮಾಡಲಾಗುತ್ತಿದೆ ಎಂದು ಗುರುವಾರ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್​ ತಿಳಿಸಿದ್ದಾರೆ.

ಆಗಸ್ಟ್ 1 ರಿಂದ 9 ರವರೆಗೆ ದೇಶಾದ್ಯಂತ ವಿತರಿಸಲಾದ ಇ-ಚಲನ್​ಗಳ ವಿವರವನ್ನು ಟ್ವೀಟ್​ ಮಾಡಿರುವ ಅವರು, ‘ಇ-ಚಲನ್ ಬಳಸಿ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಸಂಗ್ರಹಕ್ಕೆ ಸಂಬಂಧಿಸಿದಂತೆ ಕರ್ನಾಟಕವು ಇಡೀ ದೇಶದಲ್ಲಿ ಬಹಳ ಮುಂದಿದೆ. ಕರ್ನಾಟಕದಿಂದಲೇ ಶೇ.50ಕ್ಕೂ ಹೆಚ್ಚು ಇ-ಚಲನ್​ ನೀಡಲಾಗಿದ್ದು, ಶೀಘ್ರದಲ್ಲೇ ಇಡೀ ರಾಜ್ಯವನ್ನು ಇ-ಚಲನ್ ವ್ಯಾಪ್ತಿಗೆ ತರಲಾಗುವುದು. ಆ ಮೂಲಕ ಈಗಿರುವ ವ್ಯವಸ್ಥೆಯನ್ನು ಕೈಬಿಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಮೂರು ದಿನ ಬೆಳಗ್ಗೆ ಕೆಲ ಗಂಟೆಗಳ ಸಮಯ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಎಡಿಜಿಪಿ ಅಲೋಕ್ ಕುಮಾರ್​ ಪ್ರಕಾರ, ಆಗಸ್ಟ್ 1 ರಿಂದ 9 ರವರೆಗೆ ಕರ್ನಾಟಕವು 24,694 ಇ-ಚಲನ್​​ಗಳನ್ನು ನೀಡಲಾಗಿದೆ. ಇವರೆಗೆ ಒಟ್ಟು 1,22,92,500 ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ. ಅಪರಾಧಿಗಳಿಂದ 55,500 ರೂ. ದಂಡ ಸಂಗ್ರಹಿಸಲಾಗಿದೆ.

ಸಂಚಾರ ನಿಯಮ ಉಲ್ಲಂಘನೆಗೆ ಇ-ಚಲನ್ ಮೂಲಕ ದಂಡ ಸಂಗ್ರಹ ವಿಚಾರವಾಗಿ ಕರ್ನಾಟಕವನ್ನು ತಮಿಳುನಾಡು ಅನುಸರಿಸುತ್ತಿದ್ದು, 7,160 ಇ-ಚಲನ್‌ ದಂಡ ಸಂಗ್ರಹಿಸಲಾಗಿದೆ. 59 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಇನ್ನು ಮಹಾರಾಷ್ಟ್ರವು 4,468 ಇ-ಚಲನ್​ಗಳನ್ನು ನೀಡುವ ಮೂಲಕ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ನಾಳೆಯಿಂದ ಆಗಸ್ಟ್ 14ರ ವರೆಗೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ; ಇಲ್ಲಿದೆ ಪೂರ್ಣ ವಿವರ

ಮಿಜೋರಾಂ, ಸಿಕ್ಕಿಂ ಮತ್ತು ಇತರ ಪ್ರಾಂತ್ಯಗಳಲ್ಲಿ ಯಾವುದೇ ಇ-ಚಲನ್‌ಗಳನ್ನು ನೀಡಿಲ್ಲ. ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಲಕ್ಷದ್ವೀಪ, ಒಡಿಶಾ ಮತ್ತು ಚಂಡೀಗಢದಲ್ಲಿ ಈ ಸಂಖ್ಯೆ ಕಡಿಮೆ ಪ್ರಮಾಣದಲ್ಲಿ ಇತ್ತು.

ಕರ್ನಾಟಕ ಸರ್ಕಾರವು ಈ ವರ್ಷದ ಫೆಬ್ರವರಿಯಲ್ಲಿ ಸಂಚಾರ ಉಲ್ಲಂಘನೆಯ ಬಗ್ಗೆ ಬಾಕಿ ಇರುವ ಇ-ಚಲನ್​ ಗಳಿಗೆ ಶೇಕಡಾ 50 ರಷ್ಟು ರಿಯಾಯಿತಿಯನ್ನು ಘೋಷಿಸಿತ್ತು. ಈ ಯೋಜನೆಯನ್ನು ಜುಲೈ 5 ರಂದು ಪುನರಾರಂಭಿಸಲಾಗಿದ್ದು, ಸೆಪ್ಟೆಂಬರ್ 9ರ ವರೆಗೆ ನಿಗದಿಪಡಿಸಲಾಗಿದೆ. ಫೆಬ್ರವರಿ 11, 2023 ರಂದು ಅಥವಾ ಅದಕ್ಕಿಂತ ಮೊದಲು ದಾಖಲಾದ ಪ್ರಕರಣಗಳಿಗೆ ಈ ರಿಯಾಯಿತಿ ಅನ್ವಯಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:11 pm, Thu, 10 August 23

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ