AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ!

ಕರ್ನಾಟಕದ ನೂತನ ಅಬಕಾರಿ ನೀತಿಯಿಂದ ಬಿಯರ್ ಮತ್ತು ಪ್ರೀಮಿಯಂ ಸ್ಕಾಚ್ ದರ ಶೇ. 20-25 ರಷ್ಟು ಇಳಿಕೆಯಾಗಿದೆ. ಮೇ 11 ರಿಂದ ಜಾರಿಗೆ ಬಂದಿರುವ ಈ ನಿಯಮದಡಿ 16 ಸ್ಲ್ಯಾಬ್‌ಗಳನ್ನು 8ಕ್ಕೆ ಇಳಿಸಲಾಗಿದ್ದು, ಆಲ್ಕೋಹಾಲ್ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತಿದೆ.

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ!
ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ
ಭಾವನಾ ಹೆಗಡೆ
|

Updated on:May 15, 2026 | 10:02 AM

Share

ಬೆಂಗಳೂರು, ಮೇ 15: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯು ಸಿಹಿ ಸುದ್ದಿ ಕೊಟ್ಟಿದೆ. ರಾಜ್ಯ ಸರ್ಕಾರವು ಮೇ 11 ರಿಂದ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯನ್ನು ಜಾರಿಗೊಳಿಸಿದ್ದು, ಇದರಿಂದ ಪ್ರೀಮಿಯಂ ಬಿಯರ್ (Beer) ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ ಸಾಮಾನ್ಯ ಜನರು ಬಳಸುವ ಕಡಿಮೆ ದರದ ಮದ್ಯದ ಬೆಲೆ ಏರಿಕೆಯಾಗಿದೆ.

ಮುಖ್ಯಾಂಶಗಳು

  • ನೂತನ ಅಬಕಾರಿ ನೀತಿಯಿಂದ ಬಿಯರ್ ದರದಲ್ಲಿ ಶೇ 25 ರಷ್ಟು ಇಳಿಕೆ.
  •  ಪ್ರೀಮಿಯಂ ಸ್ಕಾಚ್ ವಿಸ್ಕಿಗಳ ಬೆಲೆ ಬಾಟಲಿಗೆ ಸಾವಿರ ರೂಪಾಯಿಗಳಷ್ಟು ಕಡಿತವಾಗಿದೆ.
  •  ಕಡಿಮೆ ದರದ ಮದ್ಯದ ಬೆಲೆ ಏರಿಕೆ, 16 ತೆರಿಗೆ ಸ್ಲ್ಯಾಬ್‌ಗಳು ಎಂಟಕ್ಕೆ ಇಳಿಕೆ.

ಬಿಯರ್ ದರದಲ್ಲಿ 20-25% ಇಳಿಕೆ

ಹೊಸ ನೀತಿಯನ್ವಯ ಶೇ 5ರಷ್ಟು ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಮತ್ತು ಲಾಗರ್ ಬಿಯರ್‌ಗಳ ಬೆಲೆ ಶೇ 20 ರಿಂದ 25 ರಷ್ಟು ಇಳಿಕೆಯಾಗಿದೆ. ಕಿಂಗ್‌ಫಿಶರ್ ಪ್ರೀಮಿಯಂ ಮತ್ತು ಅಲ್ಟ್ರಾ 650 ಎಂಎಲ್ ಬಾಟಲಿಗಳ ಮೇಲೆ ಸುಮಾರು 75 ರೂ. ಇಳಿಕೆಯಾಗಿದ್ದರೆ, ಹೈನೆಕೆನ್ ಮೇಲೆ 70 ರೂ., ಯುಬಿ ಎಕ್ಸ್‌ಪೋರ್ಟ್ ಮೇಲೆ 25 ರೂ. ಹಾಗೂ ಬಡ್‌ವೈಸರ್ ಪ್ರೀಮಿಯಂ ಮೇಲೆ 20 ರೂ.ಗಳವರೆಗೆ ರಿಯಾಯಿತಿ ಸಿಗಲಿದೆ.

ಪ್ರೀಮಿಯಂ ಸ್ಕಾಚ್ ಮತ್ತು ವಿಸ್ಕಿ ಅಗ್ಗ

ಬಿಯರ್ ಮಾತ್ರವಲ್ಲದೆ, ವಿದೇಶಿ ಬ್ರಾಂಡ್‌ನ ಸ್ಕಾಚ್ ವಿಸ್ಕಿಗಳ ಬೆಲೆಯೂ ಶೇ. 20 ರಷ್ಟು ಕಡಿಮೆಯಾಗಿದೆ. ಉದಾಹರಣೆಗೆ, ಬ್ಲ್ಯಾಕ್ ಲೇಬಲ್ ಮತ್ತು ಶಿವಾಸ್ ರೀಗಲ್‌ನ 750 ಎಂಎಲ್ ಬಾಟಲಿಯ ಬೆಲೆ 5,190 ರೂ.ಗಳಿಂದ 4,100 ರೂ.ಗೆ ಇಳಿದಿದೆ. ಇದು ಶ್ರೀಮಂತ ವರ್ಗದ ಮದ್ಯಪ್ರಿಯರಿಗೆ ದೊಡ್ಡ ಸಮಾಧಾನ ತಂದಿದೆ.

ಇದನ್ನೂ ಓದಿ ‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ

ಹೊಸ ನೀತಿಯ ವಿಶೇಷತೆ

ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ ಈ AiB ತೆರಿಗೆ ನೀತಿಯನ್ನು ಜಾರಿಗೆ ತಂದಿದೆ. ಈ ಹಿಂದೆ ಇದ್ದ 16 ತೆರಿಗೆ ಸ್ಲ್ಯಾಬ್‌ಗಳನ್ನು ಈಗ 8ಕ್ಕೆ ಇಳಿಸಲಾಗಿದೆ. ಅರವತ್ತು ವರ್ಷಗಳ ಹಳೆಯ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ಸರ್ಕಾರ ನಿರ್ಧರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Fri, 15 May 26

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!