AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಸಿಎಂ ಬಸವರಾಜ ಬೊಮ್ಮಾಯಿ ಮುಂದಿನ ವಾರ ಸರ್ವಪಕ್ಷ ಸಭೆ

ಗಡಿ ವಿವಾದದ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಮುಂದಿನ ವಾರ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಸಿಎಂ ಬಸವರಾಜ ಬೊಮ್ಮಾಯಿ ಮುಂದಿನ ವಾರ ಸರ್ವಪಕ್ಷ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Nov 25, 2022 | 11:54 AM

Share

ಬೆಂಗಳೂರು: ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾಯಕರ ಹೇಳಿಕೆಗಳ ನಂತರ ಮಹಾರಾಷ್ಟ್ರ(maharashtra) ಮತ್ತು ಕರ್ನಾಟಕ(karnataka) ನಡುವಿನ ಗಡಿ ವಿವಾದವು ಗರಿಗೆದರಿದ್ದು, ವಿವಾದಾತ್ಮಕ ವಿಷಯದ ಕುರಿತು ಮುಂದಿನ ವಾರ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(basavaraj bommai) ಗುರುವಾರ(ನ.24) ಹೇಳಿದರು. ಸರ್ವಪಕ್ಷ ಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಉದ್ದೇಶಗಳ ಬಗ್ಗೆ ವಿವರವಾಗಿ ಚರ್ಚಿಸಲಿದ್ದು, ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಗಡಿ ವಿವಾದವನ್ನು ಬಗೆಹರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಗಡಿ ವಿವಾದ ಈಗಾಗಲೇ ಮುಗಿದಿದೆ ಆದರೆ ಮಹಾರಾಷ್ಟ್ರ ಸರಕಾರ ಮತ್ತೆ ಕ್ಯಾತೆ ತೆಗೆದಿದೆ. ಗ್ರಾಮ ಪಂಚಾಯತ್ ಮತ್ತು ಇತರ ಸಂಬಂಧಿತ ಸಮಸ್ಯೆಗಳ ಬಗ್ಗೆ ಪರಿಹಾರವು ನಮ್ಮ ಬಳಿ ಇದೆ. ಇವೆಲ್ಲವನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಚರ್ಚಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

ಉಭಯ ರಾಜ್ಯಗಳ ಗಡಿಯಲ್ಲಿರುವ ಹಲವು ಗ್ರಾಮಗಳ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ವಾದ ಮಂಡಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾತುಕತೆಯ ಮೂಲಕ ಈ ಬಿಕ್ಕಟ್ಟನ್ನು ಬಗೆಹರಿಸುವ ಬಗ್ಗೆ ಮಾತುಕತೆ ನಡೆದಿದೆ ಎಂಬ ಮಾಹಿತಿ ಕೂಡ ಇದೆ ಹಾಗೂ ಮಹಾರಾಷ್ಟ್ರ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದು. ಕರ್ನಾಟಕ ಸರ್ಕಾರವು ಸರ್ವಪಕ್ಷ ಸಭೆಯನ್ನು ನಡೆಸುವುದರೊಂದಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಚರ್ಚೆ ನಡೆಸಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದ; ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ

ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇದೇ ಬೇಡಿಕೆಯ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಕಾನೂನು ತಂಡವನ್ನು ಬಲಪಡಿಸಬೇಕು ಎಂದು ಅವರು ಕೋರಿದ್ದರು. ಇದರಿಂದ ಸರ್ವಪಕ್ಷ ಸಭೆ ನಡೆಸಲು ಬೊಮ್ಮಾಯಿ ನಿರ್ಧರಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ