AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ-ಮಹಾರಾಷ್ಟ್ರ ಭಾಷಾ ಸಮಸ್ಯೆ ಬಗೆಹರಿಸಲು ಕೇಂದ್ರ ಮುಂದಾಗಲಿ: ರಾಷ್ಟ್ರಪತಿಗೆ ಪತ್ರ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರದ ಮಧ್ಯಪ್ರವೇಶ ಅಗತ್ಯವಿದೆ. ಸಂವಿಧಾನದ 350(ಬಿ) ವಿಧಿಯಡಿ ಭಾಷಾ ಅಲ್ಪಸಂಖ್ಯಾತರಿಗೆ ವಿಶೇಷ ಅಧಿಕಾರಿ ನೇಮಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಭಾಷಾ ಸಮಸ್ಯೆ ಬಗೆಹರಿಸಲು ಕೇಂದ್ರ ಮುಂದಾಗಲಿ: ರಾಷ್ಟ್ರಪತಿಗೆ ಪತ್ರ
ಕರ್ನಾಟಕ-ಮಹಾರಾಷ್ಟ್ರ ಭಾಷಾ ಗಲಾಟೆ ಸಮಸ್ಯೆ ಬಗೆಹರಿಸಲು ಕೇಂದ್ರ ಮುಂದಾಗಲಿ: ರಾಷ್ಟ್ರಪತಿಗೆ ಪತ್ರ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 27, 2025 | 6:19 PM

ಬೆಂಗಳೂರು, ಫೆಬ್ರವರಿ 27: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮಹಾದೇವಪ್ಪ ಹುಕ್ಕೇರಿ ಮೇಲೆ ಮರಾಠಿ ಪುಂಡರು ಹಲ್ಲೆ ಮಾಡಿದ ಬಳಿಕ ಎರಡು ರಾಜ್ಯಗಳ ನಡುವೆ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿತ್ತು. ಇದು ಭಾಷಾ ಗಲಾಟೆಗೂ ಕಾರಣವಾಗಿತ್ತು. ಹೀಗಾಗಿ ಕರ್ನಾಟಕ-ಮಹಾರಾಷ್ಟ್ರ ನಡುವೆ ಭಾಷೆ ಗಲಾಟೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಮುಂದಾಗಿ ಸಂವಿಧಾನದ ಅವಕಾಶಗಳಂತೆ ವಿಶೇಷಾಧಿಕಾರಿ ನೇಮಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ (Droupadi Murmu) ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ.

ಪತ್ರದಲ್ಲೇನಿದೆ?

ಇದೀಗ ಮತ್ತೊಮ್ಮೆ ಉಲ್ಬಣಗೊಂಡಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನಲೆ ನಿಮಗೆ ಈ ಪತ್ರವನ್ನು ಬರೆಯಲಾಗುತ್ತಿದೆ. ಎರಡೂ ರಾಜ್ಯಗಳ ಸರ್ಕಾರಗಳು ವಿವಾದವನ್ನು ತಣ್ಣಗಾಗಿಸುವ ನಿಟ್ಟಿನಲ್ಲಿ  ಸಕ್ರಿಯವಾಗಿ ತೊಡಗಿಸಿಕೊಂಡಿದ್ದ-ರೂ, ಕಣ್ಣಿಗೆ ಕಾಣದ ಸಂಗತಿಗಳಿವೆ. ದೊಡ್ಡ ಪ್ರಮಾಣದ ಹಿಂಸಾಚಾರ, ಆಸ್ತಿಪಾಸ್ತಿ ನಷ್ಟ ಮತ್ತು ಗಡಿಯ ಎರಡೂ ಬದಿಗಳಲ್ಲಿನ ಆಡಳಿತಾತ್ಮಕ ವ್ಯವಸ್ಥೆಯ ಮೇಲೆ ಆಳವಾದ ಪರಿಣಾಮ ಬೀರಿದೆ. ಹಾಗಾಗಿ ಈ ಸಂದರ್ಭದಲ್ಲಿ ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಕೇಂದ್ರ ಸರ್ಕಾರದ ಪಾತ್ರವು ಪ್ರಾಮುಖ್ಯತೆಯನ್ನು ಪಡೆಯುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಸ್ವಾಭಿಮಾನ ಹತ್ತಿಕ್ಕಲು ಶಿವಸೇನೆ ಮತ್ತು ಎಂಇಎಸ್ ಪುಂಡರಿಗೆ ಬಿಡೋದಿಲ್ಲ: ಪ್ರವೀಣ್ ಶೆಟ್ಟಿ, ಕರವೇ

ರಾಷ್ಟ್ರಪತಿಗಳು ಭಾಷಾ ಅಲ್ಪಸಂಖ್ಯಾತರಿಗೆ ವಿಶೇಷ ಅಧಿಕಾರಿಯನ್ನು ನೇಮಿಸತಕ್ಕದ್ದು. ಅದರ ಅಡಿಯಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ ಒದಗಿಸಲಾದ ರಕ್ಷಣೋಪಾಯಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ತನಿಖೆ ಮಾಡುವುದು ಮತ್ತು ರಾಷ್ಟ್ರಪತಿಗಳು ನಿರ್ದೇಶಿಸಬಹುದಾದಂತಹ ಮಧ್ಯಂತರಗಳಲ್ಲಿ ಆ ವಿಷಯಗಳ ಬಗ್ಗೆ ರಾಷ್ಟ್ರಪತಿಗಳಿಗೆ ವರದಿ ಮಾಡುವುದು ವಿಶೇಷ ಅಧಿಕಾರಿಯ ಕರ್ತವ್ಯವಾಗಿರತಕ್ಕದ್ದು ಮತ್ತು ರಾಷ್ಟ್ರಪತಿಗಳು ಅಂಥ ಎಲ್ಲಾ ವರದಿಗಳನ್ನು ಸಂಸತ್ತಿನ ಪ್ರತಿಯೊಂದು ಸದನದ ಮುಂದೆ ಇಡುವಂತೆ ಮಾಡತಕ್ಕದ್ದು ಮತ್ತು ಸಂಬಂಧಿತ ರಾಜ್ಯಗಳ ಸರ್ಕಾರಗಳಿಗೆ ಕಳುಹಿಸಬೇಕು.

ಇದನ್ನೂ ಓದಿ: ಬೆಳಗಾವಿ ಕಂಡಕ್ಟರ್​​ ವಿರುದ್ಧ ಪೋಕ್ಸೋ ಕೇಸ್​ ವಾಪಸ್​ ಪಡೆದಿದ್ದೇವೆ: ಸಂತ್ರಸ್ತ ಬಾಲಕಿಯ ತಾಯಿ

ಭಾಷಾ ಅಲ್ಪಸಂಖ್ಯಾತರ ವಿಶೇಷ ಅಧಿಕಾರಿಯನ್ನು ಕೂಡಲೇ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ದಯಮಾಡಿ ನಿರ್ದೇಶಿಸಬೇಕೆಂದು ವಿನಂತಿಸಲಾಗಿದೆ. ಅವರು ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಮತ್ತು ಕೇಂದ್ರಕ್ಕೆ ವರದಿ ಸಲ್ಲಿಸುತ್ತಾರೆ. ಬಳಿಕ ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಒದಗಿಸಲು ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಬಹುದಾಗಿದೆ. ನಂತರ ಎರಡೂ ಕಡೆಯ ಸಾಮಾನ್ಯ ಜನರು ಶಾಂತಿಯುತ ಜೀವನ ನಡೆಸಬಹುದಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:19 pm, Thu, 27 February 25

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ