AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆದ ಕರ್ನಾಟಕ: 15,395 ಎಂಬಿಬಿಎಸ್ ಸೀಟುಗಳೊಂದಿಗೆ ದಾಖಲೆ ಬರೆದ ರಾಜ್ಯ!

ನ್ಯಾಷನಲ್ ಮೆಡಿಕಲ್ ಕಮಿಷನ್ (NMC) ಬಿಡುಗಡೆ ಮಾಡಿರುವ ಹೊಸ ಪಟ್ಟಿಯ ಪ್ರಕಾರ, ಕರ್ನಾಟಕವು ಒಟ್ಟು 15,395 ಎಂಬಿಬಿಎಸ್ ಸೀಟುಗಳನ್ನು ಹೊಂದುವ ಮೂಲಕ ದೇಶದಲ್ಲೇ ವೈದ್ಯಕೀಯ ಶಿಕ್ಷಣದಲ್ಲಿ ಅಗ್ರಸ್ಥಾನಕ್ಕೇರಿದೆ. ಈ ವರ್ಷ ಖಾಸಗಿ ಕಾಲೇಜುಗಳಲ್ಲಿ 1,150 ಮತ್ತು ಸರ್ಕಾರಿ ಕಾಲೇಜುಗಳಲ್ಲಿ 150 ಸೀಟುಗಳು ಹೆಚ್ಚಾಗಿದ್ದು, ಇನ್ನೂ 6 ಸರ್ಕಾರಿ ಕಾಲೇಜುಗಳು ಹೆಚ್ಚುವರಿ ಸೀಟುಗಳಿಗಾಗಿ ಕಾಯುತ್ತಿವೆ.

ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆದ ಕರ್ನಾಟಕ: 15,395 ಎಂಬಿಬಿಎಸ್ ಸೀಟುಗಳೊಂದಿಗೆ ದಾಖಲೆ ಬರೆದ ರಾಜ್ಯ!
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Jul 19, 2026 | 10:14 AM

Share

ಮುಖ್ಯಾಂಶಗಳು

  • ದೇಶದಲ್ಲೇ ಗರಿಷ್ಠ 15,395 ಎಂಬಿಬಿಎಸ್ ಸೀಟು ಹೊಂದುವ ಮೂಲಕ ಕರ್ನಾಟಕ ಮೊದಲ ಸ್ಥಾನದಲ್ಲಿದೆ.
  • ಈ ಬಾರಿ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ 1,150 ಸೀಟುಗಳು ಹೆಚ್ಚಳವಾಗಿವೆ.
  • ರಾಜ್ಯದ ಮತ್ತೂ 6 ಸರ್ಕಾರಿ ಮೆಡಿಕಲ್ ಕಾಲೇಜುಗಳು ಸೀಟು ಹೆಚ್ಚಳಕ್ಕಾಗಿ ಮೇಲ್ಮನವಿ ಸಲ್ಲಿಸಿವೆ.

ಬೆಂಗಳೂರು, ಜುಲೈ 19: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಮತ್ತೊಮ್ಮೆ ಐತಿಹಾಸಿಕ ಸಾಧನೆ ಮಾಡಿದೆ. ನ್ಯಾಷನಲ್ ಮೆಡಿಕಲ್ ಕಮಿಷನ್ (NMC) ಬಿಡುಗಡೆ ಮಾಡಿರುವ ಹೊಸ ಸೀಟ್ ಮ್ಯಾಟ್ರಿಕ್ಸ್ ಹೇಳುವಂತೆ ಈ ವರ್ಷ ಕರ್ನಾಟಕದಲ್ಲಿ ಒಟ್ಟು ಎಂಬಿಬಿಎಸ್ (MBBS) ಸೀಟುಗಳ ಸಂಖ್ಯೆ ಬರೋಬ್ಬರಿ 15,395 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಇಡೀ ದೇಶದಲ್ಲೇ ಅತಿ ಹೆಚ್ಚು ವೈದ್ಯಕೀಯ ಸೀಟುಗಳನ್ನು ಹೊಂದಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಹೆಚ್ಚಾದ ವೈದ್ಯಕೀಯ ಸೀಟುಗಳು

ಈ ಬಾರಿ ಖಾಸಗಿ ಮೆಡಿಕಲ್ ಕಾಲೇಜುಗಳು ಸೀಟುಗಳ ಹೆಚ್ಚಳದಲ್ಲಿ ಪ್ರಮುಖ ಪಾತ್ರ ವಹಿಸಿವೆ. ರಾಜ್ಯದ ಸರ್ಕಾರಿ ಮೆಡಿಕಲ್ ಕಾಲೇಜುಗಳ ಒಟ್ಟು ಸಾಮರ್ಥ್ಯ 4,250 ರಿಂದ 4,400 ಕ್ಕೆ ಏರಿಕೆಯಾಗಿದೆ. ಅಂದರೆ ಸರ್ಕಾರಿ ವಲಯದಲ್ಲಿ 150 ಹೊಸ ಸೀಟುಗಳು ಸೇರ್ಪಡೆಯಾಗಿವೆ. ಇತ್ತೀಚಿನ ಅನುಮೋದನೆಯಂತೆ ಎಚ್.ಕೆ. ಪಾಟೀಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಕರ್ನಾಟಕ ಮೆಡಿಕಲ್ ಕಾಲೇಜ್ ಮತ್ತು ರಿಸರ್ಚ್ ಇನ್‌ಸ್ಟಿಟ್ಯೂಟ್, ಹಾಗೂ ಮಂಡ್ಯ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (MIMS) ಕಾಲೇಜುಗಳಿಗೆ ತಲಾ 50 ಹೆಚ್ಚುವರಿ ಸೀಟುಗಳನ್ನು ನೀಡಲಾಗಿದೆ.

ಮತ್ತೊಂದೆಡೆ, ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ದಾಖಲೆಯ 1,150 ಸೀಟುಗಳು ಹೆಚ್ಚಾಗಿದ್ದು, ಖಾಸಗಿ ವಲಯದ ಒಟ್ಟು ಸೀಟುಗಳ ಸಂಖ್ಯೆ 10,995 ಕ್ಕೆ ತಲುಪಿದೆ. ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (150 ಸೀಟುಗಳು) ಮತ್ತು ಚೆಟ್ಟಿನಾಡ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಶನ್ (100 ಸೀಟುಗಳು) ಎಂಬ ಎರಡು ಹೊಸ ಖಾಸಗಿ ಕಾಲೇಜುಗಳಿಗೆ ಅನುಮತಿ ಸಿಕ್ಕಿದೆ. ಇದರೊಂದಿಗೆ ಪಿಇಎಸ್ ಯುನಿವರ್ಸಿಟಿ, ಶ್ರೀ ಸಿದ್ಧಾರ್ಥ ಮತ್ತು ಬಿಜಿಎಸ್ ಗ್ಲೋಬಲ್ ಮೆಡಿಕಲ್ ಕಾಲೇಜುಗಳಿಗೆ ತಲಾ 100 ಹೆಚ್ಚುವರಿ ಸೀಟುಗಳು ಹಾಗೂ ಇತರ 12 ಕಾಲೇಜುಗಳಿಗೆ ತಲಾ 50 ಸೀಟುಗಳನ್ನು ಮಂಜೂರು ಮಾಡಲಾಗಿದೆ.

ಮಂಡ್ಯ ಮತ್ತು ಮೈಸೂರಿನಲ್ಲೂ ಸೀಟುಗಳ ಸಂಖ್ಯೆಯಲ್ಲಿ ಏರಿಕೆ

ಎನ್‌ಎಂಸಿಯ ಮೆಡಿಕಲ್ ಅಸೆಸ್‌ಮೆಂಟ್ ಆಂಡ್ ರೇಟಿಂಗ್ ಬೋರ್ಡ್ (MARB) ವರದಿ ಪ್ರಕಾರ, ಮಂಡ್ಯ ಮೆಡಿಕಲ್ ಕಾಲೇಜಿನ (MIMS) ಸೀಟುಗಳು 150 ರಿಂದ 200 ಕ್ಕೆ ಏರಿಕೆಯಾಗಿವೆ. ಮೈಸೂರಿನ ಫಾರೂಕ್ ಅಕಾಡೆಮಿ ಆಫ್ ಮೆಡಿಕಲ್ ಎಜುಕೇಶನ್‌ಗೆ ಸೀಟುಗಳನ್ನು 100 ರಿಂದ 150 ಕ್ಕೆ ಹೆಚ್ಚಿಸಲು ಅನುಮತಿ ನೀಡಲಾಗಿದೆ. ಮಂಡ್ಯದ ಎಂಐಎಂಎಸ್ ನಿರ್ದೇಶಕರಾದ ಡಾ. ನರಸಿಂಹಸ್ವಾಮಿ ಪಿ. ಅವರು ಮಾತನಾಡಿ, ಎನ್‌ಎಂಸಿ ವಿಧಿಸಿರುವ ಎಲ್ಲಾ ನಿಯಮ ಮತ್ತು ಸೌಲಭ್ಯಗಳನ್ನು ನಾವು ಪೂರೈಸಲಿದ್ದೇವೆ ಎಂದಿದ್ದಾರೆ. ಕಳೆದ ವರ್ಷವಷ್ಟೇ ಶತಮಾನದ ಇತಿಹಾಸವಿರುವ ಮೈಸೂರು ಮೆಡಿಕಲ್ ಕಾಲೇಜು (MMCRI) ಮತ್ತು ಜೆಎಸ್ಎಸ್ ಕಾಲೇಜುಗಳ ಸೀಟು ಸಾಮರ್ಥ್ಯವನ್ನು ತಲಾ 250 ಕ್ಕೆ ಹೆಚ್ಚಿಸಲಾಗಿತ್ತು.

ಇನ್ನೂ ಹೆಚ್ಚಾಗಲಿದೆಯೇ ಸೀಟುಗಳ ಸಂಖ್ಯೆ?

ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಪ್ರಕಾರ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿರುವುದರಿಂದ ಅಲ್ಲಿ ಹೆಚ್ಚಿನ ಸೀಟುಗಳನ್ನು ನೀಡುವುದು ರಾಜ್ಯದ ವಿದ್ಯಾರ್ಥಿಗಳಿಗೆ ಮತ್ತು ಆಲ್ ಇಂಡಿಯಾ ಕೋಟಾದ ಅಭ್ಯರ್ಥಿಗಳಿಗೆ ಸಹಕಾರಿಯಾಗಲಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಸುಜಾತಾ ರಾಥೋಡ್ ಈ ಬಗ್ಗೆ ಮಾಹಿತಿ ನೀಡಿ, ಕಾರವಾರ, ಯಾದಗಿರಿ, ಕೊಪ್ಪಳ, ಹಾವೇರಿ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ರಾಜ್ಯದ ಮತ್ತೂ 6 ಸರ್ಕಾರಿ ಮೆಡಿಕಲ್ ಕಾಲೇಜುಗಳು ಹೆಚ್ಚುವರಿ ಸೀಟುಗಳಿಗಾಗಿ ಮೇಲ್ಮನವಿ ಸಲ್ಲಿಸಿವೆ. ಅಲ್ಲಿನ ಮೂಲಸೌಕರ್ಯ ಕೊರತೆಗಳನ್ನು ನೀಗಿಸುವ ಭರವಸೆಯನ್ನು ಸರ್ಕಾರ ನೀಡಿದ್ದು, ಕೌನ್ಸೆಲಿಂಗ್‌ನ ಕೊನೆಯ ಕ್ಷಣದವರೆಗೂ ಎನ್‌ಎಂಸಿಯಿಂದ ಮತ್ತಷ್ಟು ಸೀಟುಗಳು ಮಂಜೂರಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಹಾಸನ (200 ಸೀಟುಗಳು), ಚಿಕ್ಕಮಗಳೂರು, ಚಾಮರಾಜನಗರ ಹಾಗೂ ಕೊಡಗು (ತಲಾ 150 ಸೀಟುಗಳು) ಕಾಲೇಜುಗಳ ಸೀಟುಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ