AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಹ್ಲಾದ್​​ ಜೋಶಿ ಭೇಟಿಯಾದ ಕೆ.ಹೆಚ್​. ಮುನಿಯಪ್ಪ: ಎಂಎಸ್​​ಪಿ ಅನುದಾನದ ಬಾಕಿ ಮೊತ್ತ ಬಿಡುಗಡೆಗೆ ಕೇಂದ್ರ ಸಚಿವರಿಗೆ ಮನವಿ

ಕರ್ನಾಟಕದ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ, ರಾಜ್ಯಕ್ಕೆ ಬರಬೇಕಿರುವ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯ ಬಾಕಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ 1902 ಕೋಟಿ ಬಾಕಿ ಹಣ ಕೇಳ್ತಿದ್ದೇವೆ ಎಂದು ಪ್ರಹ್ಲಾದ್ ಜೋಶಿ ಅವರ ಭೇಟಿ ನಂತರ ಮುನಿಯಪ್ಪ ತಿಳಿಸಿದ್ದಾರೆ.

ಪ್ರಹ್ಲಾದ್​​ ಜೋಶಿ ಭೇಟಿಯಾದ ಕೆ.ಹೆಚ್​. ಮುನಿಯಪ್ಪ: ಎಂಎಸ್​​ಪಿ ಅನುದಾನದ ಬಾಕಿ ಮೊತ್ತ ಬಿಡುಗಡೆಗೆ ಕೇಂದ್ರ ಸಚಿವರಿಗೆ ಮನವಿ
ಎಂಎಸ್​​ಪಿ ಅನುದಾನದ ಬಾಕಿ ಮೊತ್ತ ಬಿಡುಗಡೆಗೆ ಕೇಂದ್ರ ಸಚಿವರಿಗೆ ಮನವಿ
ಪ್ರಸನ್ನ ಗಾಂವ್ಕರ್​
| Edited By: |

Updated on:Jul 08, 2026 | 6:46 PM

Share

ಮುಖ್ಯಾಂಶಗಳು

  • ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದ ಕೆ.ಹೆಚ್. ಮುನಿಯಪ್ಪ
  • MSP ಯೋಜನೆಯ ಬಾಕಿ ಅನುದಾನ ಬಿಡುಗಡೆಗೆ ಸಚಿವರಿಂದ ಮನವಿ
  • ಕೇಂದ್ರದಿಂದ ರಾಜ್ಯಕ್ಕೆ 1902 ಕೋಟಿ ಬಾಕಿ ಹಣ ಬರಬೇಕಿದೆಳ: ಸಚಿವ

ನವದೆಹಲಿ, ಜುಲೈ 08: ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಅವರನ್ನು ಕರ್ನಾಟಕದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಸಚಿವ ಕೆ.ಹೆಚ್​. ಮುನಿಯಪ್ಪ ಭೇಟಿಯಾಗಿ ಆಹಾರ ಇಲಾಖೆಗೆ ಸಂಬಂಧಿಸಿ ಮನವಿ ಸಲ್ಲಿಸಿದ್ದಾರೆ. ರಾಜ್ಯಕ್ಕೆ ಬರಬೇಕಿದ್ದ ಕನಿಷ್ಠ ಬೆಂಬಲ ಬೆಲೆ ಯೋಜನೆಯ(MSP) ಅನುದಾನ ಬಾಕಿ ಮರುಪಾವತಿ ಮೊತ್ತಗಳ ಬಿಡುಗಡೆ ಕುರಿತು ಜೋಶಿ ಜೊತೆ ಅವರು ಚರ್ಚೆ ನಡೆಸಿದ್ದಾರೆ.

1,902.58 ಕೋಟಿ ರೂ. MSP ಬಾಕಿ ಮರುಪಾವತಿ ಮೊತ್ತ ಬಿಡುಗಡೆಗೆ ಮನವಿ

ಕೆಎಂಎಸ್ 2025-26ರಲ್ಲಿ ರಾಜ್ಯವು 5.69 ಲಕ್ಷ ಮೆಟ್ರಿಕ್ ಟನ್ ರಾಗಿ, 2.21 ಲಕ್ಷ ಮೆಟ್ರಿಕ್ ಟನ್ ಜೋಳ ಹಾಗೂ 0.0567 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು ಖರೀದಿಸಿದೆ. ಇದರ ಒಟ್ಟು ಮೌಲ್ಯ 4,422.17 ಕೋಟಿ ರೂಪಾಯಿ ಆಗಿದೆ. ಈ ಪೈಕಿ ಕೇಂದ್ರ ಸರ್ಕಾರ ಈವರೆಗೆ 190.10 ಕೋಟಿ ರೂ. ಬಿಡುಗಡೆ ಮಾಡಿದೆ. ಉಳಿದ 4,232.07 ಕೋಟಿ ಮರುಪಾವತಿ ಬಿಡುಗಡೆ ಮಾಡುವಂತೆ ಮುನಿಯಪ್ಪ ಮನವಿ ಮಾಡಿದ್ದಾರೆ. ಅಲ್ಲದೆ ಕೆಎಂಎಸ್ 2022-23ಕ್ಕೆ ಸಂಬಂಧಿಸಿದ 375.99 ಕೋಟಿ ರೂ. ತಾತ್ಕಾಲಿಕ ಸಬ್ಸಿಡಿ ಹಕ್ಕುಪತ್ರವು ಕೇಂದ್ರ ಸರ್ಕಾರದ ಪರಿಶೀಲನೆಯಲ್ಲಿದ್ದು, ಅದನ್ನೂ ಶೀಘ್ರ ಮಂಜೂರು ಮಾಡುವಂತೆ ಆಗ್ರಹಿಸಿದ್ದಾರೆ. ಕೆಎಂಎಸ್ 2009-10ರಿಂದ 2024-25ರವರೆಗಿನ ಅವಧಿಗೆ ಸಂಬಂಧಿಸಿದ 1,902.58 ಕೋಟಿ ರೂ. MSP ಬಾಕಿ ಮರುಪಾವತಿ ಮೊತ್ತ ಬಿಡುಗಡೆಗೂ ಕೇಂದ್ರ ಸಚಿವರನ್ನ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಕರ್ನಾಟಕದಲ್ಲಿ ಅಕ್ರಮವಾಗಿ ಎಸ್​ಐಆರ್; ಪ್ರಲ್ಹಾದ್ ಜೋಶಿ ಆರೋಪ

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ 1902 ಕೋಟಿ ಬಾಕಿ ಹಣ ಕೇಳ್ತಿದ್ದೇವೆ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನಂತರ ನವದೆಹಲಿಯಲ್ಲಿ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಲೆಕ್ಕಪರಿಶೋಧನೆ ವರದಿ ಸಲ್ಲಿಸಿದ್ದೇವೆ. ಆ ಬಾಕಿ ಮೊತ್ತ ಬಿಡುಗಡೆ ಮಾಡಿದರೆ ರೈತರಿಗೆ ನೀಡ್ತೇವೆ. ಶೇ.10ರಷ್ಟು ಬಾಕಿ ಮೊತ್ತ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದು, ಸದ್ಯದಲ್ಲೇ ಕೇಂದ್ರದಿಂದ ರಾಜ್ಯಕ್ಕೆ 375 ಕೋಟಿ ಬಿಡುಗಡೆ ಆಗಲಿದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:45 pm, Wed, 8 July 26

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ