ಬೆಂಗಳೂರು: ರಸ್ತೆ ಡಾಂಬರೀಕರಣಕ್ಕೆ ಸಚಿವರಿಂದಲೇ ಟ್ವೀಟ್ ಮೂಲಕ ಮನವಿ!

ಬೆಂಗಳೂರಿನ ರಸ್ತೆ ಸಮಸ್ಯೆ ಪರಿಹರಿಸಲು ನೇರವಾಗಿ ಕ್ರಮ ಕೈಗೊಳ್ಳಲಾಗದೆ ಸಚಿವರೊಬ್ಬರೇ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಅಷ್ಟಕ್ಕೂ ಯಾವ ರಸ್ತೆಯ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದಾರೆ? ಇದರಿಂದಾಗಿ ನಡೆಯುತ್ತಿರುವ ಚರ್ಚೆಗಳೇನು? ಇಲ್ಲಿದೆ ಮಾಹಿತಿ.

ಬೆಂಗಳೂರು: ರಸ್ತೆ ಡಾಂಬರೀಕರಣಕ್ಕೆ ಸಚಿವರಿಂದಲೇ ಟ್ವೀಟ್ ಮೂಲಕ ಮನವಿ!
ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Aug 15, 2024 | 1:08 PM

ಬೆಂಗಳೂರು, ಆಗಸ್ಟ್ 15: ರಾಜ್ಯದ ಅಭಿವೃದ್ಧಿ ವಿಷಯದಲ್ಲಿ, ರಸ್ತೆ ದುರಸ್ತಿಗೆ ಸಂಬಂಧಿಸಿ ಕಾಂಗ್ರೆಸ್ ಸರ್ಕಾರದ ಸಚಿವರೇ ಅಸಹಾಯಕರಾಗಿದ್ದಾರೆಯೇ? ಇಂಥದ್ದೊಂದು ಪ್ರಶ್ನೆ ಸಚಿವ ಕೃಷ್ಣಭೈರೇಗೌಡ ಮಾಡಿರುವ ಟ್ವೀಟ್​​ನಿಂದ ವ್ಯಕ್ತವಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್​​ಗೆ ನೇರವಾಗಿ ಸಮಸ್ಯೆಗಳ ಬಗ್ಗೆ ಹೇಳಲಾಗದೆ ಸಚಿವರು ಒದ್ದಾಡುತ್ತಿದ್ದಾರೆ ಎಂಬ ಅನುಮಾನ ಇದರಿಂದ ವ್ಯಕ್ತವಾಗಿದೆ.

ಕೃಷ್ಣಭೈರೇಗೌಡ ಟ್ವೀಟ್

ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್​​ಸಿಎಲ್ ಎಂಡಿ ಯಾರಾದರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಕೃಷ್ಣಭೈರೇಗೌಡ ಟ್ವೀಟ್​​​ನಲ್ಲಿ ಉಲ್ಲೇಖಿಸಿದ್ದಾರೆ.

ಒಂದಿದೆ ಡಿಕೆ ಶಿವಕುಮಾರ್ ಬ್ರ್ಯಾಂಡ್​​​ ಬೆಂಗಳೂರು ಎಂದು ಭಾಷಣ ಮಾಡುತ್ತಿದ್ದರೆ, ಇತ್ತ ಅವರದ್ದೇ ಸರ್ಕಾರದ ಸಚಿವರು ನೇರವಾಗಿ ಬೆಂಗಳೂರಿನ ರಸ್ತೆ ಸಮಸ್ಯೆ ಬಗ್ಗೆ ಹೇಳಿಕೊಳ್ಳಲಾಗದೆ ಈ ರೀತಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪ್ರಕಟಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಮಂತ್ರಿಗಳೇ ಇಷ್ಟು ಅಸಹಾಯಕರಾದರೆ ಹೇಗೆ? ಒಂದು ಫೋನ್ ಮಾಡಿದರೆ ಬಿಬಿಎಂಪಿ ಕಮಿಷನರ್ ನಿಮ್ಮ ಫೋನ್ ಸ್ವೀಕರಿಸುತ್ತಿದ್ದಾರೆ ಇಲ್ಲವೋ? ಎಂದು ನರೇಂದ್ರ ಸಿಂಹ ಮೂರ್ತಿ ಎಂಬವರು ಸಚಿವರ ಟ್ವೀಟ್​​ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರತಿ ದಿನ ರಸ್ತೆಗಿಳಿಯುತ್ತಿವೆ 2000 ಹೊಸ ವಾಹನ! ವಾಯು ಮಾಲಿನ್ಯದಲ್ಲಿ ದೆಹಲಿಯನ್ನೂ ಮೀರಿಸುವ ಆತಂಕ

ಇತ್ತೀಚೆಗೆ ಸರ್ಕಾರ ಆಡಳಿತ ಎಕ್ಸ್​ ತಾಣದ ಮುಖಾಂತರ ನಡೆಸುತ್ತಿರುವುದು ಖುಶಿ. ಆದರೆ ಸಿಲ್ಕ್​ಬೋರ್ಡ್ ಅವಸ್ಥೆ ನಿಮ್ಮ ಗಮನಕ್ಕೆ ಬಾರದಿರುವುದು ವಿಪರ್ಯಾಸ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ