AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruling BJP trailing: ಅಪಜಯ ಅನುಭವಿಸಿದರೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಯುವುದು ಯಾವಾಗ? ಪ್ರಕ್ರಿಯೆ ಏನು?

ಕರ್ನಾಟಕ ಅಸೆಂಬ್ಲಿಗೆ ನಡೆದ ಮಹಾ ಚುನಾವಣೆಯ ಫಲಿತಾಂಶ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಆಡಳಿತಾರೂಢ ಬಿಜೆಪಿ ಪಕ್ಷವೂ ಹಿನ್ನಡೆ ಸಾಧಿಸಿದೆ. ಈ ವಿದ್ಯಮಾನದ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಾಂವಿಧಾನಿಕವಾಗಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮುಂದುವರಿದಿದ್ದಾರೆ.

Ruling BJP trailing: ಅಪಜಯ ಅನುಭವಿಸಿದರೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಯುವುದು ಯಾವಾಗ? ಪ್ರಕ್ರಿಯೆ ಏನು?
ಸಿಎಂ ಬೊಮ್ಮಾಯಿ
ಸಾಧು ಶ್ರೀನಾಥ್​
|

Updated on:May 13, 2023 | 10:11 AM

Share

ಬೆಂಗಳೂರು: ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ  ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಬೆಳೆಗ್ಗೆ 10 ಗಂಟೆ ವೇಳೆಗೆ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ ಸಧ್ಯದ ಟ್ರೆಂಡ್​ ಪ್ರಕಾರ ಅನೇಕ ಮಹಾಮಹಿಮರು ಹಿನ್ನಡೆ ಸಾಧಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಪಕ್ಷವೂ ಹಿನ್ನಡೆ ಸಾಧಿಸಿದೆ. ಈ ವಿದ್ಯಮಾನದ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಾಂವಿಧಾನಿಕವಾಗಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮುಂದುವರಿದಿದ್ದಾರೆ.

ಆದರೆ ಆರಂಭಿಕ ಟ್ರೆಂಡ್​​ ನೋಡಿದರೆ ಅವರ ಪಕ್ಷ ಸೋಲಿನತ್ತ ಮುಖಮಾಡಿದೆ. ಹೀಗಾಗಿ ಅವರು ಮುಖ್ಯಮಂತ್ರಿ ಪಟ್ಟದಿಂದ ವಿಮುಖರಾಗಬೇಕಾಗುತ್ತದೆ. ಹಾಗಾದರೆ ಆ ಪ್ರಕ್ರಿಯೆ ಹೇಗೆ ನಡೆಯಬಹುದು ಅಂದರೆ… ಮೊದಲಿಗೆ ಸದ್ಯದ ಮುನ್ನೆಡೆಯಲ್ಲಿರುವಂತೆ ಇಂದು ಮಧ್ಯಾಹ್ನದ ವೇಳೆಗೆ ಕಾಂಗ್ರೆಸ್​​ ಪಕ್ಷವೇ ನೂರಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ/ ಗೆಲುವು ಸಾಧಿಸುವಂತಾದರೆ ಸಿಎಂ ಬೊಮ್ಮಾಯಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸ್ವಯಂ ಪ್ರೇರಿತರಾಗಿ ರಾಜೀನಾಮೆ ಸಲ್ಲಿಸಬೇಕಾಗುತ್ತದೆ.

ಆಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ನೀಡುವ ರಾಜೀನಾಮೆಯನ್ನು ಅಂಗೀಕರಿಸುತ್ತಾರೆ. ಬಳಿಕ ಮುಂದಿನ ವ್ಯವಸ್ಥೆ ಆಗುವವರೆಗೂ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಸೂಚಿಸುತ್ತಾರೆ. ಅದರ ಅನ್ವಯ ಮುಂದೆ ಬಹುಮತ ಸಾಧಿಸಿದರೆ ಕಾಂಗ್ರೆಸ್ ಪಕ್ಷ ಅಧಿಕಾರ ವಹಿಸಿಕೊಳ್ಳುವ ದಿನಾಂಕ ನಿಗದಿಪಡಿಸುತ್ತದೆ. ಅಲ್ಲಿಯವರೆಗೂ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮುಂದುವರಿಯಲಿದ್ದಾರೆ. ಆದರೆ…

ಅಲ್ಲಿಯವರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಸ್ತುವಾರಿಯಾಗಿ ಇರುತ್ತಾರೆಯಷ್ಟೇ ಹೊರತು ಯಾವುದೇ ಸರ್ಕಾರಿ ಆದೇಶಗಳನ್ನು (G.O.) ಹೊರಡಿಸುವಂತಿಲ್ಲ. ಯಾವುದೇ ಯೋಜನೆಗಳನ್ನು ಪ್ರಕಟಿಸುವಂತಿಲ್ಲ. ಅದರಾಚೆಗೂ ಪ್ರಕಟಿಸಿದ್ದೇ ಆದರೆ ಮುಂಬರುವ ಮುಖ್ಯಮಂತ್ರಿ ತಮ್ಮ ಮೊದಲ ಆದೇಶದಲ್ಲಿಯೇ ಆ ಸರಕಾರಿ ಆದೇಶವನ್ನು ಅನೂರ್ಜಿತಗೊಳಿಸಬಹುದು. ಆದರೆ ಈ ಮಧ್ಯೆ ಹಾಲಿ ಮುಖ್ಯಮಂತ್ರಿಗೆ ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಹೊರಡಿಸುವ ಪ್ರಮುಖ ಆದೇಶಗಳು ಮಾತ್ರ ಜಾರಿಗೆ ಬರುತ್ತದೆ.

ಕರ್ನಾಟಕ ಚುನಾವಣಾ ಫಲಿತಾಂಶ ಲೈವ್​ ಅಪ್ಡೇಟ್ಸ್​ಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:44 am, Sat, 13 May 23

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?