AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿದ್ದರಾಮಯ್ಯ ಆಪ್ತನಿಗೆ ಒಲಿದ ಟಿಕೆಟ್‌

ಮೈಸೂರು ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತನಾಗಿದ್ದ C.N.ಮಂಜೇಗೌಡರಿಗೆ ಈ ಬಾರಿ ಟಿಕಿಟ್ ನೀಡಲಾಗಿದೆ. ನಿನ್ನೆಯಷ್ಟೇ ಮೈಸೂರಿನಲ್ಲಿ ಜೆಡಿಎಸ್ ಸೇರಿದ್ದ ಮಂಜೇಗೌಡರಿಗೆ ಟಿಕೆಟ್ ಒಲಿದು ಬಂದಿದೆ.

ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿದ್ದರಾಮಯ್ಯ ಆಪ್ತನಿಗೆ ಒಲಿದ ಟಿಕೆಟ್‌
ಜೆಡಿಎಸ್
TV9 Web
| Edited By: ಆಯೇಷಾ ಬಾನು|

Updated on:Nov 23, 2021 | 7:50 AM

Share

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸೋಕೆ ಇವತ್ತು ಕೊನೇ ದಿನ. ಈಗಾಗಲೇ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್​ ಬಹುತೇಕ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಸದ್ಯ ಇಂದು ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.

ಮೈಸೂರು ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತನಾಗಿದ್ದ C.N.ಮಂಜೇಗೌಡರಿಗೆ ಈ ಬಾರಿ ಟಿಕಿಟ್ ನೀಡಲಾಗಿದೆ. ನಿನ್ನೆಯಷ್ಟೇ ಮೈಸೂರಿನಲ್ಲಿ ಜೆಡಿಎಸ್ ಸೇರಿದ್ದ ಮಂಜೇಗೌಡರಿಗೆ ಟಿಕೆಟ್ ಒಲಿದು ಬಂದಿದೆ. ಆದರೆ ಸಂದೇಶ್ ನಾಗರಾಜ್‌ಗೆ ಜೆಡಿಎಸ್‌ ಪಕ್ಷದ ಟಿಕೆಟ್‌ ಕೈತಪ್ಪಿದೆ. ಕೊನೆ ಕ್ಷಣದವರಿಗೂ JDS ಟಿಕೆಟ್‌ಗಾಗಿ ಸಂದೇಶ್ ಸರ್ಕಸ್‌ ನಡೆಸಿದ್ದರು. ನಿನ್ನೆಯೂ ಹೆಚ್‌ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದರು. ಆದರೂ ಸಂದೇಶ್ ನಾಗರಾಜ್‌ಗೆ ಜೆಡಿಎಸ್‌ ಟಿಕೆಟ್‌ ಸಿಕ್ಕಿಲ್ಲ. ಜೆಡಿಎಸ್‌ ಪಕ್ಷ ಅಳೆದು ತೂಗಿ ಮಂಜೇಗೌಡನಿಗೆ ಟಿಕೆಟ್ ನೀಡಿದೆ. ಬಿಜೆಪಿಯ ಟಿಕೆಟ್ ಸಹ ಸಿಗದೆ ಸಂದೇಶ್ ನಾಗರಾಜ್ ಅತಂತ್ರರಾಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸುವ ಕನಸು ಭಗ್ನವಾಗಿದೆ.

ವಿಧಾನ ಪರಿಷತ್ನ ಹಾಲಿ ಜೆಡಿಎಸ್ ಸದಸ್ಯ ಸಂದೇಶ್ ನಾಗರಾಜ್ ಪಕ್ಷದಿಂದ ಒಂದು ಹೆಜ್ಜೆ ಹೊರ ಇಟ್ಟಿದ್ರು. ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸೋದಾಗಿ ಘೋಷಣೆಯನ್ನೂ ಮಾಡಿದ್ರು. ಆದ್ರೆ ಬಿಜೆಪಿ ಕಲಿಗಳು ಅದೇಕೋ ಸಂದೇಶ್ಗೆ ಕೈಕೊಟ್ಟಿದ್ದಾರೆ. ಹೀಗಾಗಿ ಸಂದೇಶ್ ಮತ್ತೆ ಜೆಡಿಎಸ್ ಕದ ತಟ್ಟಿದ್ದು, ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಸಿದ್ದರು. ಆದ್ರೆ ಈಗ ಜೆಡಿಎಸ್ನಲ್ಲೂ ಟಿಕೆಟ್ ಸಿಗದೆ ಅತಂತ್ರರಾಗಿದ್ದಾರೆ.

7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಜೆಡಿಎಸ್‌ ಪಕ್ಷ ಮಂಡ್ಯ ಕ್ಷೇತ್ರ-ಅಪ್ಪಾಜಿಗೌಡ ತುಮಕೂರು ಕ್ಷೇತ್ರ-ಅನಿಲ್ ಕುಮಾರ್‌ ಮೈಸೂರು ಕ್ಷೇತ್ರ-ಸಿ.ಎನ್.ಮಂಜೇಗೌಡ ಕೋಲಾರ ಕ್ಷೇತ್ರ-ವಕ್ಕಲೇರಿ ರಾಮು ಬೆಂಗಳೂರು ಗ್ರಾಮಾಂತರ-ಹೆಚ್.ಎಂ.ರಮೇಶ್ ಗೌಡ ಕೊಡಗು ಕ್ಷೇತ್ರ-ಹೆಚ್‌.ಯು.ಇಸಾಕ್ ಖಾನ್‌ ಹಾಸನ ಕ್ಷೇತ್ರ-ಸೂರಜ್ ರೇವಣ್ಣ

ಇದನ್ನೂ ಓದಿ: Karnataka Congress: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಪ್ರಕಟ

Published On - 7:45 am, Tue, 23 November 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು