AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​​: ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ನಡೆದಿರುವ ಬಗ್ಗೆ ತನಿಖೆಗಾಗಿ ಬಿಜೆಪಿ ಸಿ.ಟಿ.ರವಿ ನೇತೃತ್ವದ ತ್ರಿಸದಸ್ಯ ಸತ್ಯಶೋಧನಾ ಸಮಿತಿ ರಚಿಸಿದೆ. ಮತ್ತೊಂದೆಡೆ ಕ್ರಾಸ್​​ ವೋಟಿಂಗ್​​ ಸಂಬಂಧ ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ ಶಿಸ್ತು ಕ್ರಮಕ್ಕೆ ಆಗ್ರಹಿಸಿ ರಾಜ್ಯ ಬಿಜೆಪಿ ಅಧ್ಯಕ್ಷೆಇಗೆ ಪತ್ರ ಬರೆದಿದ್ದಾರೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಿಗೂ ಈ ಸಂಬಂಧ ಮನವಿ ಮಾಡಿದ್ದಾರೆ.

ವಿಧಾನ ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​​: ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ
ಸಾಂದರ್ಭಿಕ ಚಿತ್ರImage Credit source: PTI
Kiran HV
| Edited By: |

Updated on:Jun 19, 2026 | 2:06 PM

Share

ಬೆಂಗಳೂರು, ಜೂನ್​​ 19: ವಿಧಾನ ಪರಿಷತ್​​ ಚುನಾವಣೆಯಲ್ಲಿ ಭಾರಿ ಅಡ್ಡಮತದಾನದ ಪರಿಣಾಮ ಕೂದಲೆಳೆ ಅಂತರದಲ್ಲಿ ಮುಖಭಂಗ ತಪ್ಪಿಸಿಕೊಂಡಿರುವ ಕರ್ನಾಟಕ ಬಿಜೆಪಿ ಕ್ರಾಸ್​​ ವೋಟಿಂಗ್​​ ವಿಚಾರವಾಗಿ ಸತ್ಯಶೋಧನಾ ಸಮಿತಿ ರಚನೆ ಮಾಡಿದೆ. ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಎನ್​.ಮಹೇಶ್, ಶಾಸಕ ಮಹೇಶ್ ಟೆಂಗಿನಕಾಯಿ ಒಳಗೊಂಡ ತ್ರಿಸದಸ್ಯ ಸಮಿತಿಗೆ ಜೂನ್ 25ರೊಳಗೆ ವರದಿ ನೀಡುವಂತೆ ಬಿ.ವೈ.ವಿಜಯೇಂದ್ರ ಸೂಚನೆ ನೀಡಿದ್ದಾರೆ.

ಭಗವಂತ್ ಖೂಬಾ ಪತ್ರ

ಬಿಜೆಪಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ರಾಜ್ಯ ಬಿಜೆಪಿ ಅದ್ಯಕ್ಷ ಬಿ.ವೈ.ವಿಜಯೇಂದ್ರಗೆ ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ ಪತ್ರ ಬರೆದಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧವೇ ರಾಜಾರೋಷವಾಗಿ ಕೆಲಸ ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಇದರಿಂದಾಗಿಯೇ ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿದೆ. ಎಷ್ಟೋ ಕಡೆ ಶಾಸಕರು ತಮ್ಮ ಬೆಂಬಲಿಗರಿಗೆ ಮುನ್ಸೂಚನೆ ನೀಡುತ್ತಿದ್ದಾರೆ ಕಾರ್ಯಕರ್ತರು ಸಂಘಟನೆಯಲ್ಲಿ ಕೆಲಸ ಮಾಡದೇ ದೂರ ಉಳಿಯುತ್ತಿದ್ದಾರೆ. ಹಣ ಕೊಟ್ಟು ಜನರನ್ನು ಕರೆತಂದು ಕಾರ್ಯಕರ್ತರು ಎಂದು ಬಿಂಬಿಸುವ ಕೆಲಸ ಆಗುತ್ತಿದ್ದರೂ ಇದ್ಯಾವುದನ್ನೂ ಪ್ರಶ್ನಿಸುತ್ತಿಲ್ಲ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ. 2028ರಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಶಿಸ್ತು ಕ್ರಮ ಆಗಲೇಬೇಕು ಎಂದು ಗೌಪ್ಯ ಪತ್ರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಒತ್ತಾಯಿಸಿರುವ ಖೂಬಾ, ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಿಗೂ ಈ ಸಂಬಂಧ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು; ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ

‘ಅಡ್ಡ ಮತದಾನದಿಂದ ಬೇಸರವಾಗಿದೆ’

ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಅಡ್ಡಮತದಾನದಿಂದ ನಮಗೂ ಬೇಸರ ಹಾಗೂ ನೋವಾಗಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಅಡ್ಡಮತದಾನ ಆಗಬಾರದಿತ್ತು, ಆದರೆ ದುರಾದೃಷ್ಟವಶಾತ್ ಆಗಿದೆ. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಈ ಬೆಳವಣಿಗೆಯಿಂದ ವಿಚಲಿತ ಆಗಿ ಓಡಿಹೋಗುವವನು ನಾನಲ್ಲ. ಇದನ್ನು ಅರಗಿಸಿಕೊಳ್ಳುವ ಶಕ್ತಿ ನನಗಿದೆ. ನಾನು ರಾಜ್ಯ ಬಿಜೆಪಿ ಅಧ್ಯಕ್ಷ, ಬಿ.ಎಸ್​.ಯಡಿಯೂರಪ್ಪನವರ ಮಗ. ಅಡ್ಡಮತದಾನ ಬಗ್ಗೆ ಯಾರಿಗೆ ಹೇಳಬೇಕೋ ಹೇಳುತ್ತೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:05 pm, Fri, 19 June 26

Follow Us
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ