Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 236 ಜನರಿಗೆ ಕೊರೊನಾ ದೃಢ; 7 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 121 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,59,025 ಕ್ಕೆ ಏರಿಕೆಯಾಗಿದೆ. 12,59,025 ಸೋಂಕಿತರ ಪೈಕಿ 12,37,124 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 236 ಜನರಿಗೆ ಕೊರೊನಾ ದೃಢ; 7 ಮಂದಿ ಸಾವು
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Dec 13, 2021 | 7:43 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 13) ಹೊಸದಾಗಿ 236 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,00,671 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,55,138 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,268 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,236 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 121 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,59,025 ಕ್ಕೆ ಏರಿಕೆಯಾಗಿದೆ. 12,59,025 ಸೋಂಕಿತರ ಪೈಕಿ 12,37,124 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,369 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,531 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 121, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 9, ಚಿತ್ರದುರ್ಗ 2, ದಕ್ಷಿಣ ಕನ್ನಡ 19, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 10, ಹಾವೇರಿ 0, ಕಲಬುರಗಿ 3, ಕೊಡಗು 35, ಕೋಲಾರ 2, ಕೊಪ್ಪಳ 0, ಮಂಡ್ಯ 3, ಮೈಸೂರು 13, ರಾಯಚೂರು 0, ರಾಮನಗರ 0, ಶಿವಮೊಗ್ಗ 2, ತುಮಕೂರು 5, ಉಡುಪಿ 3, ಉತ್ತರ ಕನ್ನಡ 3, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಬಳ್ಳಾರಿ, ಬೆಳಗಾವಿ ಹಾಗೂ ಕೋಲಾರ ಜಿಲ್ಲೆಯಲ್ಲಿ ಕೊವಿಡ್​ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಧಾರವಾಡ: ಕೊರೊನಾಕ್ಕೆ ತುತ್ತಾಗಿದ್ದ 306 ವಿದ್ಯಾರ್ಥಿಗಳು ಗುಣಮುಖ ಧಾರವಾಡ ಎಸ್​ಡಿಎಮ್ ಮೆಡಿಕಲ್ ಕಾಲೇಜಿನಲ್ಲಿ ಕೊರೊನಾಕ್ಕೆ ತುತ್ತಾಗಿದ್ದ 306 ವಿದ್ಯಾರ್ಥಿಗಳು ಗುಣಮುಖರಾಗಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ. ನ.24ರಿಂದ 26ರವೆರೆಗೆ 306 ಜನರಿಗೆ ಸೋಂಕು ದೃಢಪಟ್ಟಿತ್ತು. ಈಗ ಕೊರೊನಾ ಸೋಂಕಿತ 306 ಜನರು ಗುಣಮುಖರಾಗಿದ್ದಾರೆ. ಗುಣಮುಖರಾದ ಕೆಲವರು ಈಗಾಗಲೇ ತಮ್ಮೂರಿಗೆ ತೆರಳಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ 57 ಸಕ್ರಿಯ ಪ್ರಕರಣಗಳಿವೆ. ವಿದೇಶದಿಂದ ಬಂದಿದ್ದ ಒಬ್ಬರು ಸೇರಿ ಇಬ್ಬರಿಗೆ ಪಾಸಿಟಿವ್​ ಇದೆ. ಮನೆಯಲ್ಲಿ ಚಿಕಿತ್ಸೆ ಪಡೀತಿದ್ದು ಅಧಿಕಾರಿಗಳು ನಿಗಾವಹಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಪ್ರತಿದಿನ 4,000 ಟೆಸ್ಟ್​ ಮಾಡಲಾಗುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಶಂಕಿತರಿಗೆ 2 ಬಾರಿ ಆರ್​ಟಿಪಿಸಿಆರ್ ಟೆಸ್ಟ್ ಕರ್ನಾಟಕ ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್​ ಭೀತಿ ನಡುವೆ 13 ದಿನದಲ್ಲಿ‌ ಬೆಂಗಳೂರಿಗೆ 6,920 ಪ್ರಯಾಣಿಕರು ಆಗಮಿಸಿದ್ದಾರೆ. ಹೈರಿಸ್ಕ್ ದೇಶಗಳಿಂದ ಬಂದ 13 ಪ್ರಯಾಣಿಕರಿಗೆ ಕೊರೊನಾ ದೃಢವಾಗಿದೆ. ಸೋಂಕಿತರ ಸ್ಯಾಂಪಲ್ಸ್​​ ಜಿನೋಮಿಕ್​ ಸೀಕ್ವೆನ್ಸಿಂಗ್​ಗೆ ರವಾನೆ ಮಾಡಲಾಗಿದೆ. ಶಂಕಿತರಿಗೆ 2 ಬಾರಿ ಆರ್​ಟಿಪಿಸಿಆರ್ ಟೆಸ್ಟ್​ ಮಾಡಲಾಗುತ್ತಿದೆ ಎಂದು ಟಿವಿ9ಗೆ ಬೆಂಗಳೂರು ಗ್ರಾಮಾಂತರ ಡಿಸಿ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಪಾರ್ಟಿಗೆ ತೆರಳಿ ಮೋಜು ಮಸ್ತಿ ಮಾಡಿದ ಕರೀನಾ ಕಪೂರ್​ಗೆ ಕೊರೊನಾ ಪಾಸಿಟಿವ್​; ಹೆಚ್ಚಿತು ಆತಂಕ

ಇದನ್ನೂ ಓದಿ: Omicron Death: ಒಮಿಕ್ರಾನ್​ ವೈರಸ್​ಗೆ ಇಂಗ್ಲೆಂಡ್​ನಲ್ಲಿ ಮೊದಲ ಬಲಿ; ಕೊವಿಡ್ ರೂಪಾಂತರಿಯಿಂದ ವಿಶ್ವಾದ್ಯಂತ ಹೈ ಅಲರ್ಟ್​

Published On - 7:40 pm, Mon, 13 December 21

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ