AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 5,339 ಜನರಿಗೆ ಕೊರೊನಾ ದೃಢ; 48 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 2,161 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,64,476 ಕ್ಕೆ ಏರಿಕೆಯಾಗಿದೆ. 17,64,476 ಸೋಂಕಿತರ ಪೈಕಿ 17,23,340 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 5,339 ಜನರಿಗೆ ಕೊರೊನಾ ದೃಢ; 48 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 09, 2022 | 8:18 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 9) ಹೊಸದಾಗಿ 5,339 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,12,100 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,11,615 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 48 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,495 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 60,956 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 2,161 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,64,476 ಕ್ಕೆ ಏರಿಕೆಯಾಗಿದೆ. 17,64,476 ಸೋಂಕಿತರ ಪೈಕಿ 17,23,340 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 16 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,724 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 24,411 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಬಾಗಲಕೋಟೆ 67, ಬಳ್ಳಾರಿ 173, ಬೆಳಗಾವಿ 327, ಬೆಂಗಳೂರು ಗ್ರಾಮಾಂತರ 69, ಬೆಂಗಳೂರು ನಗರ 2,161, ಬೀದರ್ 28, ಚಾಮರಾಜನಗರ 111, ಚಿಕ್ಕಬಳ್ಳಾಪುರ 70, ಚಿಕ್ಕಮಗಳೂರು 53, ಚಿತ್ರದುರ್ಗ 136, ದಕ್ಷಿಣ ಕನ್ನಡ 103, ದಾವಣಗೆರೆ 28, ಧಾರವಾಡ 132, ಗದಗ 31, ಹಾಸನ 139, ಹಾವೇರಿ 55, ಕಲಬುರಗಿ 111, ಕೊಡಗು 119, ಕೋಲಾರ 50, ಕೊಪ್ಪಳ 25, ಮಂಡ್ಯ 158, ಮೈಸೂರು 293, ರಾಯಚೂರು 75, ರಾಮನಗರ 32, ಶಿವಮೊಗ್ಗ 185, ತುಮಕೂರು 342, ಉಡುಪಿ 97, ಉತ್ತರ ಕನ್ನಡ 60, ವಿಜಯಪುರ 103, ಯಾದಗಿರಿ ಜಿಲ್ಲೆಯಲ್ಲಿ 6 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 16 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5, ಬಳ್ಳಾರಿ ಜಿಲ್ಲೆಯಲ್ಲಿ 4, ಚಿತ್ರದುರ್ಗ, ತುಮಕೂರು ಜಿಲ್ಲೆಯಲ್ಲಿ 3, ಧಾರವಾಡ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ 2, ಬಾಗಲಕೋಟೆ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ರಾಮನಗರ ಜಿಲ್ಲೆಯಲ್ಲಿ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಇದು ಮಾದರಿ: ಕೊರೊನಾದಿಂದ ಮೃತಪಟ್ಟ ಸ್ನೇಹಿತನ ಹೆಂಡತಿಯ ವರಿಸಿದ ಗೆಳೆಯ, ದೃಢ ನಿರ್ಧಾರ ಮೆಚ್ಚಿಕೊಂಡ ಜನ

ಇದನ್ನೂ ಓದಿ: ಸಮವಸ್ತ್ರಕ್ಕೆ ಸಂಬಂಧಿಸಿದಂತೆ ತಲೆದೋರಿರುವ ಸ್ಥಿತಿ ಕೊವಿಡ್-19 ಸೃಷ್ಟಿಸಿದ ಸ್ಥಿತಿಗಿಂತ ಭಯಾನಕ: ಡಾ ಶಿವಮೂರ್ತಿ ಮುರುಘಾ ಶರಣರು

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು