AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹೊಸದಾಗಿ 4,246 ಕೊರೊನಾ ಪ್ರಕರಣಗಳು ಪತ್ತೆ; ಬೆಂಗಳೂರಿನಲ್ಲಿ ಮಾತ್ರವೇ 3,605 ಕೊವಿಡ್ ಪಾಸಿಟಿವ್

ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿ ಆಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್​ ಶೇ. 3.33ರಷ್ಟಿದೆ ಎಂದು ಟ್ವಿಟರ್​​ನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಹೊಸದಾಗಿ 4,246 ಕೊರೊನಾ ಪ್ರಕರಣಗಳು ಪತ್ತೆ; ಬೆಂಗಳೂರಿನಲ್ಲಿ ಮಾತ್ರವೇ 3,605 ಕೊವಿಡ್ ಪಾಸಿಟಿವ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 05, 2022 | 7:24 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 5) 4,246 ಕೊರೊನಾ ಪ್ರಕರಣಗಳು ಪತ್ತೆ ಆಗಿವೆ. ಬೆಂಗಳೂರಿನಲ್ಲಿ ಮಾತ್ರವೇ ಇಂದು ಒಂದೇ ದಿನ 3,605 ಜನರಿಗೆ ಸೋಂಕು ದೃಢವಾಗಿದೆ. ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿ ಆಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್​ ಶೇ. 3.33ರಷ್ಟಿದೆ ಎಂದು ಟ್ವಿಟರ್​​ನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಮಾಹಿತಿ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 05) ಹೊಸದಾಗಿ 4,246 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,17,572 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,61,772 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,357 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 17,414 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 3,605 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,72,050 ಕ್ಕೆ ಏರಿಕೆಯಾಗಿದೆ. 12,72,050 ಸೋಂಕಿತರ ಪೈಕಿ 12,40,874 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,413 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 14,762 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 6, ಬಳ್ಳಾರಿ 34, ಬೆಳಗಾವಿ 31, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 3605, ಬೀದರ್ 3, ಚಾಮರಾಜನಗರ 2, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 12, ಚಿತ್ರದುರ್ಗ 6, ದಕ್ಷಿಣ ಕನ್ನಡ 111, ದಾವಣಗೆರೆ 3, ಧಾರವಾಡ 26, ಗದಗ 5, ಹಾಸನ 20, ಹಾವೇರಿ 0, ಕಲಬುರಗಿ 28, ಕೊಡಗು 20, ಕೋಲಾರ 24, ಕೊಪ್ಪಳ 0, ಮಂಡ್ಯ 36, ಮೈಸೂರು 59, ರಾಯಚೂರು 0, ರಾಮನಗರ 4, ಶಿವಮೊಗ್ಗ 22, ತುಮಕೂರು 43, ಉಡುಪಿ 88, ಉತ್ತರ ಕನ್ನಡ 17, ವಿಜಯಪುರ 14, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊವಿಡ್ ಬೆಡ್ ನಿರ್ವಹಣೆಗೆ ಅಧಿಕಾರಿ ನೇಮಕ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ. ಬಿಬಿಎಂಪಿ ವ್ಯಾಪ್ತಿಯ ಕೊವಿಡ್‌ ಆಸ್ಪತ್ರೆಗಳಲ್ಲಿ ಬೆಡ್‌ ನಿರ್ವಹಣೆಗೆ ಐಎಫ್‌ಎಸ್ ಅಧಿಕಾರಿ ಕುಮಾರ್ ಪುಷ್ಕರ್ ನೇತೃತ್ವದ ಮೂವರು ಅಧಿಕಾರಿಗಳ ತಂಡ ನೇಮಕ ಮಾಡಲಾಗಿದೆ. ಐಎಫ್‌ಎಸ್ ಅಧಿಕಾರಿ ಬಿಶ್ವಜಿತ್ ಮಿಶ್ರಾ ಹಾಗೂ ಗಣಿ ಇಲಾಖೆ ಉಪ ನಿರ್ದೇಶಕ ಹರೀಶ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಎಷ್ಟೆಲ್ಲ ಒಳ್ಳೆಯದಾಗುತ್ತಿದೆ ಎನ್ನುತ್ತ ಬರೋಬ್ಬರಿ 11 ಡೋಸ್ ಕೊರೊನಾ ಲಸಿಕೆ ಪಡೆದ 84ರ ವೃದ್ಧ !-ತನಿಖೆಗೆ ಆದೇಶ

ಇದನ್ನೂ ಓದಿ: ಕೊರೊನಾ ಎಲ್ಲರಿಗೂ ಒಂದೇ ಅಲ್ವಾ: ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆ ಸಿದ್ಧತೆ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ

Published On - 6:18 pm, Wed, 5 January 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು