AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹೊಸದಾಗಿ 4,246 ಕೊರೊನಾ ಪ್ರಕರಣಗಳು ಪತ್ತೆ; ಬೆಂಗಳೂರಿನಲ್ಲಿ ಮಾತ್ರವೇ 3,605 ಕೊವಿಡ್ ಪಾಸಿಟಿವ್

ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿ ಆಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್​ ಶೇ. 3.33ರಷ್ಟಿದೆ ಎಂದು ಟ್ವಿಟರ್​​ನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಹೊಸದಾಗಿ 4,246 ಕೊರೊನಾ ಪ್ರಕರಣಗಳು ಪತ್ತೆ; ಬೆಂಗಳೂರಿನಲ್ಲಿ ಮಾತ್ರವೇ 3,605 ಕೊವಿಡ್ ಪಾಸಿಟಿವ್
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Jan 05, 2022 | 7:24 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 5) 4,246 ಕೊರೊನಾ ಪ್ರಕರಣಗಳು ಪತ್ತೆ ಆಗಿವೆ. ಬೆಂಗಳೂರಿನಲ್ಲಿ ಮಾತ್ರವೇ ಇಂದು ಒಂದೇ ದಿನ 3,605 ಜನರಿಗೆ ಸೋಂಕು ದೃಢವಾಗಿದೆ. ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿ ಆಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್​ ಶೇ. 3.33ರಷ್ಟಿದೆ ಎಂದು ಟ್ವಿಟರ್​​ನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಮಾಹಿತಿ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 05) ಹೊಸದಾಗಿ 4,246 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,17,572 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,61,772 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,357 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 17,414 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 3,605 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,72,050 ಕ್ಕೆ ಏರಿಕೆಯಾಗಿದೆ. 12,72,050 ಸೋಂಕಿತರ ಪೈಕಿ 12,40,874 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,413 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 14,762 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 6, ಬಳ್ಳಾರಿ 34, ಬೆಳಗಾವಿ 31, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 3605, ಬೀದರ್ 3, ಚಾಮರಾಜನಗರ 2, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 12, ಚಿತ್ರದುರ್ಗ 6, ದಕ್ಷಿಣ ಕನ್ನಡ 111, ದಾವಣಗೆರೆ 3, ಧಾರವಾಡ 26, ಗದಗ 5, ಹಾಸನ 20, ಹಾವೇರಿ 0, ಕಲಬುರಗಿ 28, ಕೊಡಗು 20, ಕೋಲಾರ 24, ಕೊಪ್ಪಳ 0, ಮಂಡ್ಯ 36, ಮೈಸೂರು 59, ರಾಯಚೂರು 0, ರಾಮನಗರ 4, ಶಿವಮೊಗ್ಗ 22, ತುಮಕೂರು 43, ಉಡುಪಿ 88, ಉತ್ತರ ಕನ್ನಡ 17, ವಿಜಯಪುರ 14, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊವಿಡ್ ಬೆಡ್ ನಿರ್ವಹಣೆಗೆ ಅಧಿಕಾರಿ ನೇಮಕ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ. ಬಿಬಿಎಂಪಿ ವ್ಯಾಪ್ತಿಯ ಕೊವಿಡ್‌ ಆಸ್ಪತ್ರೆಗಳಲ್ಲಿ ಬೆಡ್‌ ನಿರ್ವಹಣೆಗೆ ಐಎಫ್‌ಎಸ್ ಅಧಿಕಾರಿ ಕುಮಾರ್ ಪುಷ್ಕರ್ ನೇತೃತ್ವದ ಮೂವರು ಅಧಿಕಾರಿಗಳ ತಂಡ ನೇಮಕ ಮಾಡಲಾಗಿದೆ. ಐಎಫ್‌ಎಸ್ ಅಧಿಕಾರಿ ಬಿಶ್ವಜಿತ್ ಮಿಶ್ರಾ ಹಾಗೂ ಗಣಿ ಇಲಾಖೆ ಉಪ ನಿರ್ದೇಶಕ ಹರೀಶ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಎಷ್ಟೆಲ್ಲ ಒಳ್ಳೆಯದಾಗುತ್ತಿದೆ ಎನ್ನುತ್ತ ಬರೋಬ್ಬರಿ 11 ಡೋಸ್ ಕೊರೊನಾ ಲಸಿಕೆ ಪಡೆದ 84ರ ವೃದ್ಧ !-ತನಿಖೆಗೆ ಆದೇಶ

ಇದನ್ನೂ ಓದಿ: ಕೊರೊನಾ ಎಲ್ಲರಿಗೂ ಒಂದೇ ಅಲ್ವಾ: ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆ ಸಿದ್ಧತೆ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ

Published On - 6:18 pm, Wed, 5 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ