Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 42,470 ಜನರಿಗೆ ಕೊರೊನಾ ದೃಢ; 26 ಮಂದಿ ಸಾವು

| Updated By: ganapathi bhat

Updated on: Jan 22, 2022 | 10:34 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 17,266 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 15,59,358 ಕ್ಕೆ ಏರಿಕೆಯಾಗಿದೆ. 15,59,358 ಸೋಂಕಿತರ ಪೈಕಿ 13,24,538 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 42,470 ಜನರಿಗೆ ಕೊರೊನಾ ದೃಢ; 26 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 22) ಹೊಸದಾಗಿ 42,470 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 34,67,472 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 30,98,432 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 26 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,563 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 3,30,447 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 17,266 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 15,59,358 ಕ್ಕೆ ಏರಿಕೆಯಾಗಿದೆ. 15,59,358 ಸೋಂಕಿತರ ಪೈಕಿ 13,24,538 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,490 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 2,18,329 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಬಾಗಲಕೋಟೆ 42, ಬಳ್ಳಾರಿ 845, ಬೆಳಗಾವಿ 405, ಬೆಂಗಳೂರು ಗ್ರಾಮಾಂತರ 958, ಬೆಂಗಳೂರು ನಗರ 17,266, ಬೀದರ್ 138, ಚಾಮರಾಜನಗರ 397, ಚಿಕ್ಕಬಳ್ಳಾಪುರ 892, ಚಿಕ್ಕಮಗಳೂರು 166, ಚಿತ್ರದುರ್ಗ 622, ದಕ್ಷಿಣ ಕನ್ನಡ 795, ದಾವಣಗೆರೆ 645, ಧಾರವಾಡ 790, ಗದಗ 306, ಹಾಸನ 2679, ಹಾವೇರಿ 124, ಕಲಬುರಗಿ 665, ಕೊಡಗು 653, ಕೋಲಾರ 1417, ಕೊಪ್ಪಳ 138, ಮಂಡ್ಯ 1822, ಮೈಸೂರು 4601, ರಾಯಚೂರು 236, ರಾಮನಗರ 506, ಶಿವಮೊಗ್ಗ 474, ತುಮಕೂರು 3417, ಉಡುಪಿ 877, ಉತ್ತರ ಕನ್ನಡ 390, ವಿಜಯಪುರ 125, ಯಾದಗಿರಿ ಜಿಲ್ಲೆಯಲ್ಲಿ 79 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಮಂದಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ 2 ಮತ್ತು ಚಾಮರಾಜನಗರ, ಧಾರವಾಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ವಿಜಯಪುರ ಜಿಲ್ಲೆಯಲ್ಲಿ ತಲಾ 1 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: ಕೊರೊನಾದಿಂದ ಮೃತಪಡುತ್ತಿರುವ ಶೇ.60ರಷ್ಟು ಜನರು ಲಸಿಕೆ ಹಾಕಿಸದವರು, ಭಾಗಶಃ ಲಸಿಕೆ ಪಡೆದವರು: ಅಧ್ಯಯನ ವರದಿ

ಇದನ್ನೂ ಓದಿ: ಕೊವಿಡ್ 19 ಲಸಿಕೆ ಪಡೆಯುವವರೇ ಗಮನಿಸಿ; ಕೇಂದ್ರ ಸರ್ಕಾರದಿಂದ ಬಂದಿದೆ ಹೊಸ ಮಾರ್ಗಸೂಚಿ