AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 28,264 ಜನರಿಗೆ ಕೊರೊನಾ ದೃಢ; 68 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 11,938 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,10,198 ಕ್ಕೆ ಏರಿಕೆಯಾಗಿದೆ. 17,10,198 ಸೋಂಕಿತರ ಪೈಕಿ 15,61,445 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 28,264 ಜನರಿಗೆ ಕೊರೊನಾ ದೃಢ; 68 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 30, 2022 | 8:04 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 30) ಹೊಸದಾಗಿ 28,264 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37,85,295 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 34,95,239 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 68 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,942 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2,51,084 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 11,938 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,10,198 ಕ್ಕೆ ಏರಿಕೆಯಾಗಿದೆ. 17,10,198 ಸೋಂಕಿತರ ಪೈಕಿ 15,61,445 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 14 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,581 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 1,32,171 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಬಾಗಲಕೋಟೆ 338, ಬಳ್ಳಾರಿ 964, ಬೆಳಗಾವಿ 619, ಬೆಂಗಳೂರು ಗ್ರಾಮಾಂತರ 453, ಬೆಂಗಳೂರು ನಗರ 11,938, ಬೀದರ್ 111, ಚಾಮರಾಜನಗರ 554, ಚಿಕ್ಕಬಳ್ಳಾಪುರ 334, ಚಿಕ್ಕಮಗಳೂರು 201, ಚಿತ್ರದುರ್ಗ 360, ದಕ್ಷಿಣ ಕನ್ನಡ 419, ದಾವಣಗೆರೆ 239, ಧಾರವಾಡ 1,356, ಗದಗ 146, ಹಾಸನ 859, ಹಾವೇರಿ 409, ಕಲಬುರಗಿ 564, ಕೊಡಗು 633, ಕೋಲಾರ 422, ಕೊಪ್ಪಳ 321, ಮಂಡ್ಯ 953, ಮೈಸೂರು 2,322, ರಾಯಚೂರು 306, ರಾಮನಗರ 246, ಶಿವಮೊಗ್ಗ 530, ತುಮಕೂರು 1,165, ಉಡುಪಿ 441, ಉತ್ತರ ಕನ್ನಡ 780, ವಿಜಯಪುರ 159, ಯಾದಗಿರಿ ಜಿಲ್ಲೆಯಲ್ಲಿ 122 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 14 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 10, ಬಳ್ಳಾರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7, ಬಾಗಲಕೋಟೆ, ತುಮಕೂರು ಜಿಲ್ಲೆಯಲ್ಲಿ 4, ಚಿತ್ರದುರ್ಗ ಜಿಲ್ಲೆಯಲ್ಲಿ 3, ಬೆಳಗಾವಿ, ಚಾಮರಾಜನಗರ, ಹಾವೇರಿ, ಕಲಬುರಗಿ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ 2 ಹಾಗೂ ಧಾರವಾಡ, ಗದಗ, ಹಾಸನ, ರಾಮನಗರ, ಶಿವಮೊಗ್ಗ ಜಿಲ್ಲೆಯಲ್ಲಿ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Covid19: ಕರ್ನಾಟಕ ಸರ್ಕಾರದಿಂದ ಪರಿಷ್ಕೃತ ಕೊರೊನಾ ಮಾರ್ಗಸೂಚಿ ಪ್ರಕಟ; ವಿವರ ಇಲ್ಲಿದೆ

ಇದನ್ನೂ ಓದಿ: ದೇಶದಲ್ಲಿ ಶೇ.75ಕ್ಕೂ ಹೆಚ್ಚು ವಯಸ್ಕರು ಕೊವಿಡ್​ 19 ಲಸಿಕೆ ಸಂಪೂರ್ಣ ಡೋಸ್​ ಪಡೆದವರು; ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ