AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಹೊರ ವಲಯದಲ್ಲೊಂದು ವಿಶೇಷ ಜಾತ್ರೆ; ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ

ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಸಿಲಿಕಾನ್ ಸಿಟಿಯಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿ ಜನರು ಪರದಾಡುತ್ತಿದ್ದಾರೆ. ಈ ನಡುವೆ ಈ ಭಾರಿಯಾದರೂ ಉತ್ತಮ ಮಳೆ ಬೆಳೆಯಾಗಲಿ ಎಂದು ಇಲ್ಲೊಂದು ಕಡೆ ತಲೆ ಮೇಲೆ ತೆಂಗಿನಕಾಯಿ ಒಡೆದುಕೊಳ್ಳುವ ಮೂಲಕ ವಿಶೇಷ ಜಾತ್ರೆಯನ್ನ ಮಾಡಿದ್ದಾರೆ.

ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 21, 2024 | 8:19 PM

Share

ಬೆಂಗಳೂರು, ಏ.21: ನಗರದ ಪೂರ್ವ ತಾಲೂಕಿನ ಖಾಜಿಸೊನ್ನೇನಹಳ್ಳಿ(Khajisonnanahalli) ಗ್ರಾಮದಲ್ಲಿಂದು ನಾಡಿನಲ್ಲಿ ಮಳೆ-ಬೆಳೆ ಚೆನ್ನಾಗಿ ಆಗಿ ಬರಗಾಲ ನಿವಾರಣೆಯಾಗಲಿ ಎಂದು ಗ್ರಾಮಸ್ಥರು ವಿಶೇಷ ಜಾತ್ರೆಯನ್ನ ನಡೆಸಿದ್ದರು. ಕಳೆದ ಹಲವು ದಶಕಗಳಿಂದ ತೀವ್ರ ಬರಗಾಲ ಹಾಗೂ ಸಂಕಷ್ಟಗಳು ಎದುರಾದಾಗ ಐದು ವರ್ಷಕ್ಕೊಮ್ಮೆ ಈ ಜಾತ್ರೆಯನ್ನ ಮಾಡಿಕೊಂಡು ಬಂದಿದ್ದು, ಈ ಭಾರಿಯು ವಿಶೇಷ ಜಾತ್ರೆಯನ್ನ ಶ್ರದ್ದಾ ಭಕ್ತಿಯಿಂದ ಮಾಡಿದರು. ಈ ಗ್ರಾಮದ ಸಿದ್ದೇಶ್ವರ ದೇವರನ್ನ ಮೆರವಣಿಗೆ ಮೂಲಕ ತಲೆಯ ಮೇಲೆ ಹೊತ್ತು ಊರ ಹೊರಗಡೆ ವರೆಗೂ ಸಾಗಿ ಬಂದ ಜನರು, ನಂತರ ನೀರಿನಲ್ಲಿ ದೇವರನ್ನಿಟ್ಟು ಪೂಜೆ ನೆರವೇರಿಸಿದರು. ಜೊತೆಗೆ ಇದೇ ವೇಳೆ ಹಾಲುಮತ ಸಮುದಾಯದಿಂದ ಸಾಂಪ್ರಾದಾಯಿಕವಾಗಿ ಈ ಹಿಂದಿನಿಂದ ನಡೆದುಕೊಂಡು ಬಂದಿರುವಂತೆ ಭಕ್ತರ ತಲೆಯ ಮೇಲೆ ತೆಂಗಿನಕಾಯಿ ಒಡೆಯುವ ಮೂಲಕ ಮಳೆ ಬೆಳೆಗೆ ಪ್ರಾರ್ಥಿಸಿದರು.

ವಿಶೇಷ ಜಾತ್ರೆ ಹಿನ್ನೆಲೆ ಬೆಳಗ್ಗೆಯಿಂದಲೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಮಹಿಳೆಯರು, ಮಕ್ಕಳಿಂದ ಹಿರಿಯರ ವರೆಗೂ ಎಲ್ಲರೂ ತೋಟಗಳ ಬಳಿ ಆಗಮಿಸಿ ತೆಂಗಿನಕಾಯಿ ಒಡೆಯುವುದನ್ನ ಕಣ್ಥುಂಬಿಕೊಂಡರು. ಜೊತೆಗೆ ಇದೇ ವೇಳೆ ವಿವಿಧ ಕಲಾ ತಂಡಗಳು ಜನರ ಮುಂದೆ ಹೆಜ್ಜೆ ಹಾಕಿ ಗೋಮಾತೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಇಷ್ಟಾರ್ಥ ಸಿದ್ದಿಗೆ ಬೇಡಿಕೊಂಡರು.

ಇದನ್ನೂ ಓದಿ:ಕೋಮುದ್ವೇಷದ ಮಧ್ಯೆ ವಿಜಯಪುರದಲ್ಲೊಂದು ಭಾವೈಕ್ಯತೆಯ ಜಾತ್ರೆ; ಏನಿದರ ವಿಶೇಷತೆ

ಇನ್ನು ಹತ್ತಾರು ಗ್ರಾಮಗಳಿಂದ ನೂರಾರು ಜನರು ಬಂದು ಇಲ್ಲಿ ಜಾತ್ರೆ ಮಾಡುವುದರಿಂದ ಮಳೆ,ಬೆಳೆ ಜೊತೆಗೆ ಮದುವೆಯಾಗದೆ ಇರುವ ಯುವಕ-ಯುವತಿಯರಿಗೆ ಮದುವೆ ಆಗುತ್ತದೆ ಎನ್ನುವುದು ಗ್ರಾಮಸ್ಥರ ನಂಬಿಕೆ. ಒಟ್ಟಾರೆ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗ್ತಿದ್ದು, ಎಲ್ಲರೂ ಮಳೆರಾಯನ ಆಗಮನಕ್ಕೆ ಕಾದು ಕುಳಿತಿದ್ದಾರೆ. ಈ ಗ್ರಾ,ಮಸ್ಥರ ವಿಶೇಷ ತೆಂಗಿನಕಾಯಿ ಜಾತ್ರೆಗಾದರೂ ವರುಣ ಕೃಪೆ ತೋರುತ್ತಾನಾ ಎನ್ನುವುದನ್ನ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?