AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏ.23 ರಂದು ಬೆಂಗಳೂರು ಕರಗ ಮಹೋತ್ಸವ; ಈ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

ಐತಿಹಾಸಿಕ ಬೆಂಗಳೂರು ಕರಗ (Bengaluru Karaga) ಮಹೋತ್ಸವ ಶುರುವಾಗಿದ್ದು, ಏ.23 ರಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ (A Jnanendra) ಅವರು ಕರಗ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ. ಈ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕೆಲವು ಕಡೆಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಏ.23 ರಂದು ಬೆಂಗಳೂರು ಕರಗ ಮಹೋತ್ಸವ; ಈ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ
ಬೆಂಗಳೂರು ಕರಗ
Jagadisha B
| Updated By: ಕಿರಣ್ ಹನುಮಂತ್​ ಮಾದಾರ್|

Updated on:Apr 21, 2024 | 4:52 PM

Share

ಬೆಂಗಳೂರು, ಏ.21: ಪ್ರಸಿದ್ಧ ಐತಿಹಾಸಿಕ ಬೆಂಗಳೂರು ಕರಗ (Bengaluru Karaga) ಮಹೋತ್ಸವ ಶುರುವಾಗಿದ್ದು, ಏ.23 ರಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಹಿನ್ನಲೆ  ಮುನ್ನೆಚ್ಚರಿಕೆ ಸಲುವಾಗಿ ಏಪ್ರಿಲ್​.23ರ ಬೆಳಗ್ಗೆ 6 ರಿಂದ ಏ. 24 ಬೆಳಗ್ಗೆ ‌10 ಗಂಟೆಯವರೆಗೆ ಬೆಂಗಳೂರಿನ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೊತೆಗೆ ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ (A Jnanendra) ಅವರು ಕರಗ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ಮದ್ಯ ನಿಷೇಧ ಎಲ್ಲೆಲ್ಲಿ?

ಇನ್ನು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾದ್ಯತೆಯಿದ್ದು, ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ. ಈ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್ ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಕಮೀಷನರ್ ದಯಾನಂದ ಅವರು ಅದೇಶಿಸಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಬೆಂಗಳೂರು ಕರಗ ಬಗ್ಗೆ ನಿಮಗೆಷ್ಟು ಗೊತ್ತು? ಮೆರವಣಿಗೆ ವೇಳೆ ಕರಗ ದರ್ಗಾಗೆ ಹೋಗುವುದೇಕೆ?

ಕರಗವನ್ನು ಹೊರುವವರು ಮಹಿಳೆಯಂತೆ ಅಲಂಕಾರ

ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲೂ ಕರಗ ಉತ್ಸವದ ಉಲ್ಲೇಖವನ್ನು ಗಮನಿಸಬಹುದು. ಕರಗವು ದ್ರೌಪದಿಯನ್ನು ಸರ್ವೋತ್ಕೃಷ್ಟ ಮಹಿಳೆ ಎಂದು ಚಿತ್ರಿಸುತ್ತದೆ ಮತ್ತು ಅವಳನ್ನು ಶಕ್ತಿ ದೇವತೆ ಎಂದು ಗೌರವಿಸುತ್ತದೆ.  ಕರಗವನ್ನು ಹೊರುವವರು ಮಹಿಳೆಯಂತೆ ಅಲಂಕಾರ ಮಾಡಿಕೊಳ್ಳಬೇಕು. ಕಂಕಣ, ಮಂಗಳ-ಸೂತ್ರ, ಹಣೆಯ ಮೇಲೆ ಸಿಂಧೂರ ಇಟ್ಟುಕೊಂಡು ಮುತೈದೆಯಂತೆ ಕಾಣಬೇಕು. ಈ ರೀತಿ ಅಲಂಕಾರ ಮಾಡಿಕೊಂಡೇ ಕರಗವನ್ನು ಹೊರಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Sun, 21 April 24

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ