AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೆಲಸ ಸಿಗದಿದ್ದಕ್ಕೆ ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ

ಸಿಲಿಕಾನ್​ ಸಿಟಿ ಬೆಂಗಳೂರಿಗೆ ರಾಜ್ಯ ಅಷ್ಟೇ ಅಲ್ಲದೆ ಹೊರರಾಜ್ಯಗಳಿಂದಲೂ ಉದ್ಯೋಗ ಅರಿಸಿ ಬರುತ್ತಾರೆ. ಅದರಂತೆ ಕಲಬುರಗಿ ಮೂಲದ ಸುಮಾರು 28 ವರ್ಷದ ಯುವಕನೊಬ್ಬ ಕೆಲಸ ಹುಡುಕಿಕೊಂಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿದ್ದ. ಆದರೆ, ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ.  ಇದರಿಂದ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಕೆಲಸ ಸಿಗದಿದ್ದಕ್ಕೆ ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ
ಮೃತ ವ್ಯಕ್ತಿ
Shivaprasad B
| Edited By: |

Updated on:May 09, 2024 | 9:50 PM

Share

ಬೆಂಗಳೂರು, ಮೇ.09: ಕೆಲಸ ಸಿಗದಿದ್ದಕ್ಕೆ ಪಿ.ಜಿ ಕಟ್ಟಡದ ಮೇಲಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು 28 ವರ್ಷದ ಯುವಕನೊಬ್ಬ ಕೆಲಸ ಹುಡುಕಿಕೊಂಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿದ್ದ. ಆದರೆ, ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ.  ಇದರಿಂದ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿ ವೈಟ್‌ಫೀಲ್ಡ್‌ ಠಾಣೆ ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆ ಶಂಕೆ

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಗೊರವನಕಲ್ಲು ಗ್ರಾಮದ ಮನೆಯಲ್ಲಿ ಗೀತಶ್ರೀ(32) ಎಂಬ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಈ ಹಿನ್ನಲೆ ಪತಿ ಪ್ರಭುಕುಮಾರ್ ಮತ್ತು ಕುಟುಂಬದ ವಿರುದ್ಧ ಮೃತ ಮಹಿಳೆಯ ಸಂಬಂಧಿಕರು ಕೊಲೆ ಆರೋಪ ಮಾಡಿದ್ದಾರೆ. ಆರೋಪಿ ಪತಿ ಪ್ರಭುಕುಮಾರ್ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಮೃತ ಗೀತಶ್ರೀ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. ಇನ್ನು ವರದಕ್ಷಿಣೆ ಕಿರುಕುಳ ಹಾಗೂ ಮಾನಸಿಕ ಹಿಂಸೆಯಿಂದ ಗೀತಶ್ರೀಯನ್ನು ಕೊಲೆ ಮಾಡಿ, ನೇಣುಹಾಕಿದ್ದಾರೆ ಎಂದು ಮೃತಳ ಸಹೋದರ ಆರೋಪಿಸಿದ್ದು, ಈ ಕುರಿತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡೆದು ಎರಡು ಎತ್ತುಗಳು ಸಾವು

ಬಳ್ಳಾರಿ: ತಾಲೂಕಿನ ಕಪ್ಪಗಲ್ ಗ್ರಾಮದಲ್ಲಿ ಸಿಡಿಲು ಬಡಿದು ದೊಡ್ಡಬಸಯ್ಯ ಎಂಬ ರೈತನಿಗೆ ಸೇರಿದ ಎರಡು ಎತ್ತುಗಳು ಸಾವನ್ನಪ್ಪಿದ್ದಾನೆ. ಮನೆ ಮುಂದೆ ಕಟ್ಟಿದ್ದಾಗ ಈ ದುರ್ಘಟನೆ ನಡೆದಿದೆ. ಒಂದು ಲಕ್ಷ ರೂ. ಬೆಲೆ ಬಾಳುವ ಎತ್ತುಗಳು ಇದಾಗಿದ್ದು, ಭೂಮಿ ಹಸನ ಮಾಡಲು ಹೊಸ ಎತ್ತುಗಳನ್ನ ರೈತ ತಂದಿದ್ದ. ಇದೀಗ ಸೂಕ್ತ ಪರಿಹಾರ ನೀಡುವಂತೆ ರೈತ ದೊಡ್ಡಬಸಯ್ಯ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪಶುವೈದ್ಯರ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ; ವಿಷಯ ತಿಳಿದ ಮಗನಿಂದ ತಂದೆಯ ಬರ್ಬರ ಹತ್ಯೆ

ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳಿಂದ ಬೆಂಕಿ! ಹೊತ್ತಿ ಉರಿದ ಹತ್ತಾರು ಎಕರೆಯ ಅರಣ್ಯ ಪ್ರದೇಶ

ಯಾದಗಿರಿ: ಜಿಲ್ಲೆಯ ಗುರಮಠಕಲ್ ತಾಲೂಕಿನ ಕಾಳೆಬೆಳಗುಂದಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದಿರುವ ಘಟನೆ ನಿನ್ನೆ ನಡೆದಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಒಂದು ಗಂಟೆಗೂ ಅಧಿಕ ಕಾಲ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ದು, 3 ಸಾವಿರಕ್ಕೂ ಅಧಿಕ ಮರ-ಗಿಡಗಳು ನಾಶವಾಗಿದೆ. ಹೊತ್ತಿ ಉರಿಯುತ್ತಿರುವ ಬೆಂಕಿ ಆರಿಸಲು ನೀಲಗಿರಿ ತಪ್ಪಲಿನಿಂದ ನಂದಿಸಲು ವನ ಪಾಲಕರು ಹರಸಾಹಸ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 pm, Thu, 9 May 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್