AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೆಲಸ ಸಿಗದಿದ್ದಕ್ಕೆ ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ

ಸಿಲಿಕಾನ್​ ಸಿಟಿ ಬೆಂಗಳೂರಿಗೆ ರಾಜ್ಯ ಅಷ್ಟೇ ಅಲ್ಲದೆ ಹೊರರಾಜ್ಯಗಳಿಂದಲೂ ಉದ್ಯೋಗ ಅರಿಸಿ ಬರುತ್ತಾರೆ. ಅದರಂತೆ ಕಲಬುರಗಿ ಮೂಲದ ಸುಮಾರು 28 ವರ್ಷದ ಯುವಕನೊಬ್ಬ ಕೆಲಸ ಹುಡುಕಿಕೊಂಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿದ್ದ. ಆದರೆ, ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ.  ಇದರಿಂದ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಕೆಲಸ ಸಿಗದಿದ್ದಕ್ಕೆ ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ
ಮೃತ ವ್ಯಕ್ತಿ
Shivaprasad B
| Edited By: |

Updated on:May 09, 2024 | 9:50 PM

Share

ಬೆಂಗಳೂರು, ಮೇ.09: ಕೆಲಸ ಸಿಗದಿದ್ದಕ್ಕೆ ಪಿ.ಜಿ ಕಟ್ಟಡದ ಮೇಲಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು 28 ವರ್ಷದ ಯುವಕನೊಬ್ಬ ಕೆಲಸ ಹುಡುಕಿಕೊಂಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿದ್ದ. ಆದರೆ, ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ.  ಇದರಿಂದ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿ ವೈಟ್‌ಫೀಲ್ಡ್‌ ಠಾಣೆ ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆ ಶಂಕೆ

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಗೊರವನಕಲ್ಲು ಗ್ರಾಮದ ಮನೆಯಲ್ಲಿ ಗೀತಶ್ರೀ(32) ಎಂಬ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಈ ಹಿನ್ನಲೆ ಪತಿ ಪ್ರಭುಕುಮಾರ್ ಮತ್ತು ಕುಟುಂಬದ ವಿರುದ್ಧ ಮೃತ ಮಹಿಳೆಯ ಸಂಬಂಧಿಕರು ಕೊಲೆ ಆರೋಪ ಮಾಡಿದ್ದಾರೆ. ಆರೋಪಿ ಪತಿ ಪ್ರಭುಕುಮಾರ್ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಮೃತ ಗೀತಶ್ರೀ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. ಇನ್ನು ವರದಕ್ಷಿಣೆ ಕಿರುಕುಳ ಹಾಗೂ ಮಾನಸಿಕ ಹಿಂಸೆಯಿಂದ ಗೀತಶ್ರೀಯನ್ನು ಕೊಲೆ ಮಾಡಿ, ನೇಣುಹಾಕಿದ್ದಾರೆ ಎಂದು ಮೃತಳ ಸಹೋದರ ಆರೋಪಿಸಿದ್ದು, ಈ ಕುರಿತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡೆದು ಎರಡು ಎತ್ತುಗಳು ಸಾವು

ಬಳ್ಳಾರಿ: ತಾಲೂಕಿನ ಕಪ್ಪಗಲ್ ಗ್ರಾಮದಲ್ಲಿ ಸಿಡಿಲು ಬಡಿದು ದೊಡ್ಡಬಸಯ್ಯ ಎಂಬ ರೈತನಿಗೆ ಸೇರಿದ ಎರಡು ಎತ್ತುಗಳು ಸಾವನ್ನಪ್ಪಿದ್ದಾನೆ. ಮನೆ ಮುಂದೆ ಕಟ್ಟಿದ್ದಾಗ ಈ ದುರ್ಘಟನೆ ನಡೆದಿದೆ. ಒಂದು ಲಕ್ಷ ರೂ. ಬೆಲೆ ಬಾಳುವ ಎತ್ತುಗಳು ಇದಾಗಿದ್ದು, ಭೂಮಿ ಹಸನ ಮಾಡಲು ಹೊಸ ಎತ್ತುಗಳನ್ನ ರೈತ ತಂದಿದ್ದ. ಇದೀಗ ಸೂಕ್ತ ಪರಿಹಾರ ನೀಡುವಂತೆ ರೈತ ದೊಡ್ಡಬಸಯ್ಯ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪಶುವೈದ್ಯರ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ; ವಿಷಯ ತಿಳಿದ ಮಗನಿಂದ ತಂದೆಯ ಬರ್ಬರ ಹತ್ಯೆ

ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳಿಂದ ಬೆಂಕಿ! ಹೊತ್ತಿ ಉರಿದ ಹತ್ತಾರು ಎಕರೆಯ ಅರಣ್ಯ ಪ್ರದೇಶ

ಯಾದಗಿರಿ: ಜಿಲ್ಲೆಯ ಗುರಮಠಕಲ್ ತಾಲೂಕಿನ ಕಾಳೆಬೆಳಗುಂದಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದಿರುವ ಘಟನೆ ನಿನ್ನೆ ನಡೆದಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಒಂದು ಗಂಟೆಗೂ ಅಧಿಕ ಕಾಲ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ದು, 3 ಸಾವಿರಕ್ಕೂ ಅಧಿಕ ಮರ-ಗಿಡಗಳು ನಾಶವಾಗಿದೆ. ಹೊತ್ತಿ ಉರಿಯುತ್ತಿರುವ ಬೆಂಕಿ ಆರಿಸಲು ನೀಲಗಿರಿ ತಪ್ಪಲಿನಿಂದ ನಂದಿಸಲು ವನ ಪಾಲಕರು ಹರಸಾಹಸ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 pm, Thu, 9 May 24

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ