AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮನೆಯ ಸಂಪ್‌ನಲ್ಲಿ ತಾಯಿ-ಮಗು ಮೃತದೇಹ ಪತ್ತೆ: ಸಾವಿನ ಕಾರಣ ನಿಗೂಢ!

ಮನೆಯ ಸಂಪ್‌ನಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನ ಯಲಹಂಕ(Yalahanka) ನ್ಯೂಟೌನ್ ಬಳಿಯ ಈಸ್ಟ್ ಕಾಲೋನಿಯಲ್ಲಿ ನಡೆದಿದೆ. ಸ್ಥಳಕ್ಕಾಗಮಿಸಿದ ಯಲಹಂಕ ನ್ಯೂ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತ್ಮಹತ್ಯೆಯೋ ಅಥವಾ ಅಚನಾಕ್ಕಾಗಿ ಬಿದ್ದಿದ್ದಾರಾ ಎಂಬ ಕುರಿತು ತನಿಖೆ ನಡೆಸಿದ್ದಾರೆ.

ಬೆಂಗಳೂರು: ಮನೆಯ ಸಂಪ್‌ನಲ್ಲಿ ತಾಯಿ-ಮಗು ಮೃತದೇಹ ಪತ್ತೆ: ಸಾವಿನ ಕಾರಣ ನಿಗೂಢ!
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 18, 2024 | 10:07 PM

Share

ಬೆಂಗಳೂರು, ಏ.18: ಯಲಹಂಕ(Yalahanka) ನ್ಯೂಟೌನ್ ಬಳಿಯ ಈಸ್ಟ್ ಕಾಲೋನಿಯಲ್ಲಿ ಮನೆಯ ಸಂಪ್‌ನಲ್ಲಿ ತಾಯಿ ಹಾಗೂ ಮಗು ಮೃತದೇಹ ಪತ್ತೆಯಾಗಿದೆ. ಕವಿತಾ (40) ಹಾಗೂ ಪವನ್ (8) ಮೃತರು. ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಆತ್ಮಹತ್ಯೆಯೋ ಅಥವಾ ಅಚನಾಕ್ಕಾಗಿ ಬಿದ್ದಿದ್ದಾರಾ ಎಂಬ ಕುರಿತು ತನಿಖೆ ನಡೆಸಿದ್ದಾರೆ.

ಮನೆ ಮುಂದೆ ಪಾರ್ಕ್ ಮಾಡಿದ್ದ ಬೈಕ್​ಗೆ ಕಾರು ಡಿಕ್ಕಿ

ಬೆಂಗಳೂರು: ಬಿಟಿಎಂ ಲೇಔಟ್ ಎರಡನೇ ಹಂತದ ಇ ಡಬ್ಲ್ಯು ಎಸ್ ಕಾಲೋನಿಯಲ್ಲಿ ಮನೆ ಮುಂದೆ ಪಾರ್ಕ್ ಮಾಡಿದ್ದ ಬೈಕ್​​ಗೆ ನಿಯಂತ್ರಣ ತಪ್ಪಿ ಕಾರೊಂದು ಡಿಕ್ಕಿಯಾಗಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಳಿಕ 20 ಮೀಟರ್ ಎಳೆದುಕೊಂಡು ಸಾಗಿದೆ. ಬಳಿಕ ಗೋಡೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಷಾತ್ ಅಪಘಾತದಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ. ಅಪಘಾತ ಆಗುವ ಕೆಲವೇ ನಿಮಿಷಗಳ ಮುಂದಷ್ಟೇ ಪ್ರಿ ಸ್ಕೂಲ್ ಮಕ್ಕಳು ಶಾಲೆ ಮುಗಿಸಿ ಮನೆಗೆ ತೆರಳಿದ್ದರು. ಘಟನೆ ಬಳಿಕ ಮೈಕೋಲೇಔಟ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ:ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ; ಪ್ರಕರಣ ಭೇದಿಸಿದ ಬೆಂಗಳೂರು ರೈಲ್ವೆ ಪೊಲೀಸರು

ಲಾರಿ ಡಿಕ್ಕಿ; ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಮಸ್ಕಿಯ ಅಶೋಕ‌ ಶಿಲಾಶಾಸನ ರಸ್ತೆ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಂಧನೂರು ಮೂಲದ ಶಾಮೀದ್ (22) ಹಾಗೂ ಸಲ್ಮಾ(10) ಮೃತರು. ಸಿಂಧನೂರಿನಿಂದ ಮುದಗಲ್‌ಗೆ ಮದುವೆಗೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಈ ಕುರಿತು ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 pm, Thu, 18 April 24

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ