AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೀರಿನ ದಾಹ ತಣಿಸಲು 128 ವರ್ಷಗಳ ಹಳೆಯದಾದ ಸೋಲದೇವನಹಳ್ಳಿ ಪಂಪ್​ ಸ್ಟೇಷನ್​ಗೆ ಮರು ಜೀವ

ಬೆಂಗಳೂರು ನೀರು ಸರಬರಾಜು ಮತ್ತು ಒಳಚಂಡಿ ಮಂಡಳಿ ಸೋಲದೇವನಹಳ್ಳಿಯಲ್ಲಿರುವ 128 ವರ್ಷಗಳ ಹಳೆಯದಾದ ಪಂಪ್​ ಸ್ಟೇಷನ್ ಅನ್ನು ಮರು ಪ್ರಾರಂಭಿಸಲು ನಿರ್ಧರಿಸಿದೆ. ಅಂದುಕೊಂಡಂತೆ ಎಲ್ಲವೂ ನಡೆದರೆ ಏಪ್ರಿಲ್​ 20 ರಂದು ಪಂಪ ಸ್ಟೇಷನ್​ ಕಾರ್ಯಾರಂಭ ಮಾಡಲಿದೆ.

ಬೆಂಗಳೂರಿನಲ್ಲಿ ನೀರಿನ ದಾಹ ತಣಿಸಲು 128 ವರ್ಷಗಳ ಹಳೆಯದಾದ ಸೋಲದೇವನಹಳ್ಳಿ ಪಂಪ್​ ಸ್ಟೇಷನ್​ಗೆ ಮರು ಜೀವ
ಸೋಲದೇವನಹಳ್ಳಿ ಪಂಪ್​ ಸ್ಟೇಷನ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 15, 2024 | 8:45 AM

Share

ಬೆಂಗಳೂರು, ಏಪ್ರಿಲ್​ 15: ನೀರಿಗಾಗಿ ಬೆಂಗಳೂರಿನ (Bengaluru) ಜನರು ಪರದಾಡುತ್ತಿದ್ದಾರೆ. ಉದ್ಭವವಾಗಿರುವ ನೀರಿನ ಸಮಸ್ಯೆಯನ್ನು ಬಗೆಹರಲಿಸಲು ಸರ್ಕಾರ ಸಾಕಷ್ಟು ಪ್ರಯತ್ನ ಪಡುತ್ತಿದೆ. ಈ ಪ್ರಯತ್ನದ ಒಂದು ಭಾಗವೆಂಬಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚಂಡಿ ಮಂಡಳಿ (BWSSB) ಸೋಲದೇವನಹಳ್ಳಿಯಲ್ಲಿರುವ 128 ವರ್ಷಗಳ ಹಳೆಯದಾದ ಪಂಪ್​ ಸ್ಟೇಷನ್ (Soladevanahalli Pump Station)​​ ಅನ್ನು ಮರು ಪ್ರಾರಂಭಿಸಲು ನಿರ್ಧರಿಸಿದೆ.

ಅಂದುಕೊಂಡಂತೆ ಎಲ್ಲವು ನಡೆದರೆ ಏಪ್ರಿಲ್​ 20 ರಂದು ಪಂಪ ಸ್ಟೇಷನ್​ ಕಾರ್ಯಾರಂಭ ಮಾಡಲಿದೆ. ಈ ಪಂಪ ಸ್ಟೇಷನ್​ ಮುಖಾಂತರ ಹೇಸರಗಟ್ಟ ಕೆರೆಯಿಂದ 0.3 ಟಿಎಂಸಿ ನೀರನ್ನು ನಗರಕ್ಕೆ ಸರಬರಾಜು ಮಾಡಬಹುದು.

ಬೆಂಗಳೂರು ಸುಸಜ್ಜಿತ ನೀರು ಸರಬರಾಜು ವ್ಯವಸ್ಥೆ ಹೊಂದಿರುವ ದೇಶದ ಎರಡನೇ ನಗರವಾಗಿದೆ. 1873ರಲ್ಲಿ ಬೆಂಗಳೂರಿನಲ್ಲಿ ವಾಟರ್​ ಟ್ಯಾಂಕರ್​ ಮೂಲಕ ನೀರು ಸರಬರಾಜು ಮಾಡಲಾಗುತ್ತಿತ್ತು. ಆದರೆ 1857-77 ಎರಡೂವರೆ ವರ್ಷಗಳ ಕಾಲ ಆವರಿಸಿದ ಬರಗಾಲದಿಂದ ನೀರಿನ ಮೂಲಗಳು ಬತ್ತಿ ಹೋದವು.

ಇದನ್ನೂ ಓದಿ: ಈ ಸಣ್ಣ ವಿಧಾನ ಅನುಸರಿಸಿ ದಿನಕ್ಕೆ 600 ಲೀಟರ್ ನೀರು ಉಳಿಸಿ: ಬೆಂಗಳೂರು ವೈದ್ಯೆಯ ಸಲಹೆ ಈಗ ವೈರಲ್

ಈ ಸಮಯದಲ್ಲಿ ಮೈಸೂರು ಸಂಸ್ಥಾನದ ದಿವಾನರಾಗಿದ್ದ ಕೆ ಶೇಶಾದ್ರಿ ಅಯ್ಯರ ಅವರು ಒಂದು ಒಳ್ಳೆಯ ಯೋಜನೆಯನ್ನು ರೂಪಿಸಿದರು. ಅರ್ಕಾವತಿ ನದಿಯಿಂದ ಹೇಸರಘಟ್ಟ ಕೆರೆಗೆ ನೀರು ಹರಿಸಲು ​ ನಿರ್ಧರಿಸಿದರು. ಈ ಯೋಜನೆಗೆ ಮಹರಾಜ ಚಾಮರಾಜೇಂದ್ರ ಒಡೆಯರ ಅವರ ಹೆಸರು ಇಡಲಾಯಿತು.

ಪ್ರಸ್ತುತ ಹೇಸರಘಟ್ಟ ಕೆರೆಯಲ್ಲಿ 0.3 ಟಿಎಂಸಿ ನೀರು ಲಭ್ಯವಿದೆ. ಹೀಗಾಗಿ ಸೋಲದೇವನಹಳ್ಳಿ ಪಂಪಿಂಗ್​ ಸ್ಟೇಷನ್​ನಲ್ಲಿ ನೀರನ್ನು ಸಂಸ್ಕರಿಸಿ ಎಂಇಐ ಲೇಔಟ್​​ನಲ್ಲಿರುವ ಹೇಸರಘಟ್ಟ ಕೆರೆಯಲ್ಲಿ ಸಂಗ್ರಹಿಸಲಾಗುವುದು. ಬಳಿಕ ಟ್ಯಾಂಕರ್​ಗಳ ಮೂಲಕ ನೀರು ಸರಬರಾಜು ಮಾಡಲಾಗುವುದು. 128 ವರ್ಷಗಳು ಹಳೆಯದಾದ ಪಂಪಿಂಗ್​ ಸ್ಟೇಷನ್​ ಅನ್ನು ಏಪ್ರಿಲ್​ 20 ರಂದು ಮರು ಪ್ರಾರಂಭಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಡಬ್ಲ್ಯೂಎಸ್​ಎಸ್​ಬಿ ಅಧ್ಯಕ್ಷ ವಿ ರಾಮಪ್ರಸಾತ್​ ಮನೋಹರ್​ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:45 am, Mon, 15 April 24

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ