AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲ ಬೇಗೆಗೆ ಬೆಂಗಳೂರು ಮಂದಿ ತತ್ತರ; ಶುರುವಾಯ್ತು ರೋಗ ರುಜಿನಗಳ ಕಾಟ

ರಾಜ್ಯಾದ್ಯಂತ ಬಿಸಿಲ ಬೇಗೆಗೆ ಜನ ಹೈರಾಣಾಗಿದ್ದು, ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇನ್ನು ಈ ರಣ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಜನ ಏರ್ ಕೂಲರ್ ಹಾಗೂ ಎಸಿಗಳ ಮೊರೆ ಹೋಗುತ್ತಿದ್ದರೆ, ಇತ್ತ ಸೋರಿಯಾಸಿಸ್, ಮೊಡವೆಗಳು ಸೇರಿ 10ಕ್ಕೂ ಹೆಚ್ಚು ಚರ್ಮದ ರೋಗಗಳು ಜನರನ್ನ ಕಾಡುತ್ತಿವೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬಿಸಿಲ ಬೇಗೆಗೆ ಬೆಂಗಳೂರು ಮಂದಿ ತತ್ತರ; ಶುರುವಾಯ್ತು ರೋಗ ರುಜಿನಗಳ ಕಾಟ
ಬಿಸಿಲ ಬೇಗೆಗೆ ಬೆಂಗಳೂರು ಮಂದಿ ತತ್ತರ
Poornima Agali Nagaraj
| Edited By: |

Updated on: May 01, 2024 | 10:45 PM

Share

ಬೆಂಗಳೂರು, ಮೇ.01: ಸೂರ್ಯನ ಉರಿಗಣ್ಣಿನಿಂದ ಬೆಂಗಳೂರು(Bengaluru) ಕಾದ ಹಂಚಿನಂತಾಗಿದೆ. ಬಿಸಿಲಿನ ಝಳದಿಂದಾಗಿ ಕಳೆದೆರಡು ತಿಂಗಳಿಂದ ಜನರನ್ನ ಸೋರಿಯಾಸಿಸ್, ಮೊಡವೆಗಳು ಸೇರಿ 10ಕ್ಕೂ ಹೆಚ್ಚು ಚರ್ಮದ ರೋಗಗಳು ಕಾಡುತ್ತಿವೆ. ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿರುವುದರಿಂದ ಸೋರಿಯಾಸಿಸ್ ಸೇರಿ ಅನೇಕ ಸಮಸ್ಯೆಗಳು ಹೆಚ್ಚಾಗಿವೆ.

ಗಾಳಿ ಸುದ್ದಿ ನಂಬಿ ರಕ್ತದಾನಕ್ಕೆ ಹಿಂದೇಟು

ಬಿಸಿಲಿನ ಹೊಡೆತದಿಂದ ರಕ್ತದಾನಿಗಳ ಸಂಖ್ಯೆಯೂ ಕುಂಠಿತವಾಗಿದೆ. ಬೇಸಿಗೆಯಲ್ಲಿ ರಕ್ತ ನೀಡಿದ್ರೆ ಆಯಾಸ ಎನ್ನುವ ಗಾಳಿ ಸುದ್ದಿ ನಂಬಿ ರಕ್ತದಾನಕ್ಕೆ ಹಿಂದೇಟು ಹಾಕುತ್ತಿದ್ದಾರೆ. ರೆಡ್​​ ಕ್ರಾಸ್ ಹಾಗೂ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್​ಗಳಲ್ಲಿ ಪ್ರತಿ ತಿಂಗಳು 2,500 ರಿಂದ 3,000 ಸಾವಿರ ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು. ಆದರೀಗ 1,500 ಯೂನಿಟ್ ಮಾತ್ರ ರಕ್ತ ಸಂಗ್ರಹವಾಗುತ್ತಿದೆ. ಇದರಿಂದ ಆಪರೇಷನ್​​​​ಗೆ ಒಳಗಾಗುವ ರೋಗಿಗಳು ಪರದಾಡುವಂತಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಬಿಸಿಲ ಬೇಗೆ ಜತೆ ಜನರಿಗೆ ಮತ್ತೊಂದು ಬರೆ: ಜ್ಯೂಸ್, ಎಳನೀರು ಮತ್ತಷ್ಟು ದುಬಾರಿ

ಏರ್ ಕೂಲರ್ ಹಾಗೂ ಎಸಿಗಳ ಮೊರೆ

ಇನ್ನು ಬಿಸಿಲಿನ ನಡುವೆ ತಣ್ಣಗಾಗಲು ಜನ, ಏರ್ ಕೂಲರ್ ಹಾಗೂ ಎಸಿಗಳ ಮೊರೆ ಹೋಗುತ್ತಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಶೇ.60 ರಷ್ಟು ಕೂಲರ್ ಹಾಗೂ ಎಸಿಗಳಿಗೆ ಬೇಡಿಕೆ ಇದ್ದು, ಮಾರ್ಕೆಟ್​​​​ನಲ್ಲಿ ಕೂಲರ್​, ಎಸಿಗಳು ಅಷ್ಟಾಗಿ ಸಿಗುತ್ತಿಲ್ಲ.

ದೇವಸ್ಥಾನಗಳಿಗೂ ತಟ್ಟಿದ ಬಿಸಿಲ ಎಫೆಕ್ಟ್

ರಣ ಬಿಸಿಲ ಎಫೆಕ್ಟ್ ದೇವಸ್ತಾನಗಳಿಗೂ ತಟ್ಟಿದೆ. ಭಕ್ತರಿಂದ ತುಂಬಿರುತ್ತಿದ್ದ ನಗರದ ಪ್ರಮುಖ ದೇಗುಲಗಳು ಈಗ ಭಣಗುಡುತ್ತಿದೆ. ಇನ್ನು, ಧರ್ಮಸ್ಥಳ, ಕುಕ್ಕೆಗೆ ಹೋಗುವ ಭಕ್ತಾದಿಗಳ ಸಂಖ್ಯೆಯೂ ಕಡಿಮೆ ಆಗಿದೆ. ಬಿಸಿಲ ಬೇಗೆಯಿಂದ ಜನರು ಬಳಲಿ ಬೆಂಡಾಗಿದ್ದಾರೆ. ಮಳೆಗಾಲ ಯಾವಾಗ ಶುರುವಾಗುತ್ತೋ ಎಂದು ದಿನ ಎಣಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ