ಬಿಟ್ ಕಾಯಿನ್ ಹಗರಣ​; ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 29, 2024 | 5:01 PM

ರಾಜ್ಯಾದ್ಯಂತ ತೀವ್ರ ಸುದ್ದಿಯಾಗಿದ್ದ ಬಿಟ್​ಕಾಯಿನ್​ ಹಗರಣ ಪ್ರಕರಣದ ತನಿಖೆಯನ್ನ ಸಿಐಡಿ ಚುರುಕುಗೊಳಿಸಿದೆ. ಅದರಂತೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಚಂದ್ರಾಧರ್, ಅವರನ್ನು ಸುಧೀರ್ಘ ವಿಚಾರಣೆ ನಡೆಸಿ, ಅರೆಸ್ಟ್​ ಮಾಡಲಾಗಿದೆ.

ಬಿಟ್ ಕಾಯಿನ್ ಹಗರಣ​; ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, ಮೇ.29: ಬಿಟ್ ಕಾಯಿನ್ ಹಗರಣ ಪ್ರಕರಣ(Bitcoin Scam Case)ಕ್ಕೆ ಸಂಬಂಧಿಸಿದಂತೆ ಇದೀಗ ಇನ್ಸ್​ಪೆಕ್ಟರ್ ಚಂದ್ರಾಧರ್(Chandradhar) ಎಂಬುವವರನ್ನು ಸಿಐಡಿ ಪೊಲೀಸರು​ ಬಂಧಿಸಿದ್ದಾರೆ. ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಚಂದ್ರಾಧರ್, ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್​ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚಂದ್ರಾಧರ್ ಅವರನ್ನು ಸುಧೀರ್ಘ ವಿಚಾರಣೆ ನಡೆಸಿ, ಇದೀಗ ಅರೆಸ್ಟ್​ ಮಾಡಲಾಗಿದೆ.

ಇತ್ತೀಚೆಗೆ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ

ಬಿಟ್ ಕಾಯಿನ್​ ಹಗರಣದದಲ್ಲಿ ಸಿಐಡಿಯ ಎಸ್ಐಟಿ ಅಧಿಕಾರಿಗಳು ದಿಟ್ಟ ಹೆಜ್ಜೆಯಟ್ಟಿದ್ದು, 2017ರಲ್ಲಿ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ ಜಾರಿ ಮಾಡಲಾಗುತ್ತಿದೆ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಾಗಲಿದೆ. ಈ ಕಾಯ್ದೆಯಲ್ಲಿ ಕನಿಷ್ಠ ಒಂದು ವರ್ಷ ಅಪರಾಧಿಗಳಿಗೆ ಜಾಮೀನು ಸಿಗುವುದಿಲ್ಲ.

ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಅಸ್ತ್ರ ಬಳಕೆ; ಏನಿದು ಕಾಯ್ದೆ?

ಇದು ಪದೇ ಪದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಈ ಕಾಯ್ದೆ ಜಾರಿಯಾಗುತ್ತದೆ. ಇದರ ಬೆನ್ನಲ್ಲೇ ಇದೀಗ ಇನ್ಸ್​ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು​ ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ